Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃತಕ ಆಹಾರ ಸೇವನೆಯಿಂದ ಅಪಾಯಕಾರಿ ರೋಗ:...

ಕೃತಕ ಆಹಾರ ಸೇವನೆಯಿಂದ ಅಪಾಯಕಾರಿ ರೋಗ: ಡಾ.ಖಾದರ್

ವಾರ್ತಾಭಾರತಿವಾರ್ತಾಭಾರತಿ16 Feb 2020 11:11 PM IST
share
ಕೃತಕ ಆಹಾರ ಸೇವನೆಯಿಂದ ಅಪಾಯಕಾರಿ ರೋಗ: ಡಾ.ಖಾದರ್

ಮಂಗಳೂರು, ಫೆ.16: ದೇಶದ ಸಾಂಪ್ರದಾಯಿಕ ಆಹಾರ ಪದ್ಧತಿಯಿಂದ ದೂರವಾದ ಜನರು ಕೃತಕ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡಿರುವುದರಿಂದ ಕೊರೊನಾ, ಕ್ಯಾನ್ಸರ್‌ನಂತಹ ಅಪಾಯಕಾರಿ ರೋಗಗಳು ಜನರನ್ನು ಬಾಧಿಸಲು ಕಾರಣ ಎಂದು ಖ್ಯಾತ ಆಹಾರ ತಜ್ಞ ಡಾ.ಖಾದರ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಸಾವಯವ ಕೃಷಿಕ ಗ್ರಾಹಕ ಬಳಗ, ಕಲ್ಕೂರ ಪ್ರತಿಷ್ಠಾನ ವತಿಯಿಂದ ರವಿವಾರ ಬಾಳಂಭಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ‘ನೆಮ್ಮದಿಯ ಬದುಕಿಗೆ ಸಿರಿಧಾನ್ಯಗಳೇ ವರದಾನ’ ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು.

ಕುಡಿಯುವ ಕಷಾಯ ಮತ್ತು ಕಾಷಾಯ (ಯೋಗ ಮತ್ತಿತರ ಆಚರಣೆ)ಗಳಿಂದ ದೇಹದ ಪ್ರತಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು. ನಾವೀಗ ಅನುಸರಿಸುತ್ತಿರುವ ಆಧುನಿಕ ಆಹಾರ ವಿಧಾನ, ಕಾಫಿ, ಚಹಾ ಮತ್ತಿತರ ಆಹಾರ ಸೇವನೆಯಿಂದಾಗಿ ಅದರೊಂದಿಗೆ ಚಿಕಿತ್ಸೆ ಹೆಸರಲ್ಲಿ ತಿನ್ನುವ ಗುಳಿಗೆ, ಔಷಧಿಯಿಂದಾಗಿ ದೇಹದಲ್ಲಿ ರೋಗನಿರೋಧಕ ಶಕ್ತಿ ಕುಸಿಯುತ್ತಿದೆ. ಪ್ರತಿರೋಧಕ ಕಣಗಳನ್ನು ಸೃಷ್ಟಿಸುವ ಮೂಲಮಜ್ಜೆಯೇ ಶಕ್ತಿಗುಂದುತ್ತಿದೆ ಎಂದು ಡಾ. ಖಾದರ್ ಹೇಳಿದರು.

ಸಿರಿಧಾನ್ಯ ಸುರಕ್ಷಿತ
ಕಾಫಿ-ಟೀಯಂತಹ ಕೆಫೀನ್‌ಯುಕ್ತ ಪೇಯಗಳಿಗೆ ಜಗತ್ತು ದಾಸವಾಗಿದೆ. ಇದರಿಂದಾಗಿ ಎಷ್ಟೋ ಅಮೂಲ್ಯ ಅರಣ್ಯಗಳು ನಾಶವಾಗಿವೆ ಎಂದ ಡಾ.ಖಾದರ್ ಇವುಗಳೊಂದಿಗೆ ಸಕ್ಕರೆಯ ಲಾಬಿ ಕೂಡಾ ಪ್ರಬಲವಾಗಿದೆ. ದೇಹಕ್ಕೆ ಅತಿ ಹೆಚ್ಚು ಸಕ್ಕರೆಯನ್ನು ಸೇವಿಸುತ್ತಿದ್ದೇವೆ. ಅಕ್ಕಿ ಗೋಧಿಯಂತಹ ಧಾನ್ಯಗಳ ಸೇವನೆಯಿಂದಲೂ ಭಾರಿ ಪ್ರಮಾಣದಲ್ಲಿ ದೇಹಕ್ಕೆ ಗ್ಲುಕೋಸ್ ಸೇರಿಕೊಂಡು ಬೇಗನೆ ಸಕ್ಕರೆ ಕಾಯಿಲೆ ಬರುವಂತಾಗಿದೆ. ಇದರ ಬದಲು ಸಿರಿಧಾನ್ಯಗಳಾದ ನವಣೆ, ಊದಲು, ಅರ್ಕಗಳ ಸೇವನೆಯಿಂದ ಇಂತಹ ಪ್ರಮಾಣದಲ್ಲಿ ಗ್ಲುಕೋಸ್ ದೇಹ ಸೇರದೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ರೋಗ ನಿರೋಧಕ ಶಕ್ತಿಗೆ ಕಷಾಯ
ದೇಹದಲ್ಲಿ ಕೇವಲ 14 ದಿನಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಬಹುದು. ಗರಿಕೆ, ತುಳಸಿ, ಅಮೃತಬಳ್ಳಿ, ಬಿಲ್ವಪತ್ರೆ, ಹೊಂಗೆ, ಬೇವು ಹಾಗೂ ಅರಳಿ ಎಲೆಗಳ ಕಷಾಯವನ್ನು ತಲಾ ಎರಡೆರಡು ದಿನ ಕುಡಿಯುತ್ತಾ ಬಂದರೆ ಇದು ಸಾಧ್ಯ. ಮತ್ತೆ 14 ದಿನ ಇದನ್ನು ಮುಂದುವರಿಸಿದರೆ ವರ್ಷ ಕಾಲ ದೇಹದಲ್ಲಿ ಈ ಶಕ್ತಿ ಇರುತ್ತದೆ ಎಂದು ಡಾ.ಖಾದರ್ ನುಡಿದರು.

ಈ ಸಂದರ್ಭ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸಾವಯವ ಬಳಗದ ಅಧ್ಯಕ್ಷ ಅಡ್ಡೂರು ಕೃಷ್ಣರಾವ್, ಸರಸ್ವತಿ ಸಿರಿಧಾನ್ಯ ಮಿಲ್‌ನ ಅನಂತಕೃಷ್ಣ ಉಪಸ್ಥಿತರಿದ್ದರು. ಬಳಗದ ಕಾರ್ಯದರ್ಶಿ ರತ್ನಾಕರ ಕುಳಾಯಿ ಸಂಯೋಜಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X