Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಹಿನ್ ಬಾಗ್ ಹೋರಾಟಗಾರರ ಜೊತೆ...

ಶಾಹಿನ್ ಬಾಗ್ ಹೋರಾಟಗಾರರ ಜೊತೆ ಮಾತುಕತೆಗೆ ಇಬ್ಬರು ಅಡ್ವಕೇಟ್ ಗಳನ್ನು ನೇಮಿಸಿದ ಸುಪ್ರೀಂ ಕೋರ್ಟ್

ಪ್ರತಿಭಟನೆಯ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ17 Feb 2020 3:06 PM IST
share
ಶಾಹಿನ್ ಬಾಗ್ ಹೋರಾಟಗಾರರ ಜೊತೆ ಮಾತುಕತೆಗೆ ಇಬ್ಬರು ಅಡ್ವಕೇಟ್ ಗಳನ್ನು ನೇಮಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಫೆ.17: ಪೌರತ್ವ ಕಾಯ್ದೆಯನ್ನು ವಿರೋಧಿಸಿ ಶಾಹೀನ್‌ ಬಾಗ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ ರಸ್ತೆ ಸಂಚಾರಕ್ಕೆ ತೊಡಕಾಗಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ಪ್ರತಿಭಟನಾಕಾರರ ಮನವೊಲಿಕೆಗೆ ಸುಪ್ರೀಂಕೋರ್ಟ್ ಇಬ್ಬರು ಹಿರಿಯ ನ್ಯಾಯವಾದಿಗಳನ್ನು ನೇಮಿಸಿದೆ.  

ಬೇರೆ ಜಾಗದಲ್ಲಿ ಪ್ರತಿಭಟನೆ ಮುಂದುವರಿಯುವಂತೆ ಮನ ಒಲಿಸಲು ಹಿರಿಯ ನ್ಯಾಯವಾದಿಗಳಾದ ಸಂಜಯ್ ಹೆಗ್ಡೆ ಮತ್ತು ಸಾಧನಾ ರಾಮಚಂದ್ರನ್‌ ರನ್ನು ಮಧ್ಯಸ್ಥಿಕೆಗಾರರನ್ನಾಗಿ ನೇಮಿಸಿದ್ದು ಇವರಿಗೆ ನೆರವಾಗಲು ಮಾಜಿ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾರನ್ನು ನೇಮಿಸಲಾಗಿದೆ ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ.

 ಶಾಹೀನ್‌ ಬಾಗ್ ‌ನಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರ್ಯಾಯ ರಸ್ತೆ ಮೂಲಕ ಪ್ರಯಾಣಿಸುವಂತಾಗಿದೆ ಹಾಗೂ ಅಲ್ಲಿ ರಸ್ತೆ ತಡೆ ನಿರ್ಮಿಸುವುದರಿಂದ ಜನಸಂಚಾರಕ್ಕೆ ತೊಡಕಾಗಿದ್ದು ತಮಗೆ ನಷ್ಟವಾಗಿದೆ ಎಂದು ಕೆಲವು ವ್ಯಾಪಾರಿಗಳು ಸರಕಾರಕ್ಕೆ ದೂರು ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರತಿಭಟನೆಯ ಹಕ್ಕು ಮೂಲಭೂತ ಹಕ್ಕಾಗಿದೆ. ರಸ್ತೆ ತಡೆ ಆಗದ ರೀತಿಯಲ್ಲಿ ಪ್ರತಿಭಟನೆ ನಡೆಸುವ ಪರ್ಯಾಯ ಪ್ರದೇಶವಿದೆಯೇ ಎಂದು ದಿಲ್ಲಿ ಪೊಲೀಸರನ್ನು ಪ್ರಶ್ನಿಸಿತು.

 ಅವರು ಬೇರೆ ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ದಿಲ್ಲಿ ಪೊಲೀಸರ ವಕೀಲರು ಉತ್ತರಿಸಿದರು. ಪ್ರತಿಭಟನೆ ಮಾಡಲು ಅಡ್ಡಿಯಿಲ್ಲ. ಆದರೆ ನಾಳೆ ಮತ್ತೊಂದು ಸಂಘಟನೆ ಇನ್ನೊಂದು ಪ್ರದೇಶದಲ್ಲಿ ಪ್ರತಿಭಟನೆ ನಡೆಸಬಹುದು. ಸಂಚಾರ ವ್ಯವಸ್ಥೆಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಭಟನೆ ನಡೆಸಬೇಕು. ಎಲ್ಲರೂ ರಸ್ತೆ ತಡೆ ಮಾಡಿದರೆ ಜನರು ಹೇಗೆ ಪ್ರಯಾಣಿಸಬೇಕು ಎಂದು ಸುಪ್ರೀಂಕೋರ್ಟ್ ಆತಂಕ ವ್ಯಕ್ತಪಡಿಸಿತು.

ಪ್ರತೀ ದಿನ ಹಲವು ಜನ ಬಳಸುವ ರಸ್ತೆ ಬಿಟ್ಟು ಬೇರೆಡೆ ಪ್ರತಿಭಟನೆ ಮುಂದುವರಿಸಬಹುದು ಎಂದು ಪ್ರತಿಭಟನಾಕಾರರ ಪರ ವಕೀಲರಿಗೆ ತಿಳಿಸಿತು. ಸ್ವಲ್ಪ ಸಮಯಾವಕಾಶ ನೀಡಿದರೆ ಹಾಗೇ ಮಾಡುವುದಾಗಿ ವಕೀಲರು ಉತ್ತರಿಸಿದರು. ಪ್ರತಿಭಟನಾಕಾರರು ಮಕ್ಕಳನ್ನು ಗುರಾಣಿಯಂತೆ ಮುಂಭಾಗದಲ್ಲಿ ನಿಲ್ಲಿಸುತ್ತಿದ್ದಾರೆ ಎಂದು ದಿಲ್ಲಿ ಪೊಲೀಸರ ವಕೀಲರು ನ್ಯಾಯಾಲಯದ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂಕೋರ್ಟ್, ಈ ವಿವಾದವನ್ನು ಇತ್ಯರ್ಥಗೊಳಿಸಲು ಬಯಸುತ್ತಿದ್ದೇವೆ. ಯಾವುದೂ ಫಲಕಾರಿಯಾಗದಿದ್ದರೆ ಆಗ ಅಧಿಕಾರಿಗಳಿಗೆ ಬಿಟ್ಟುಬಿಡೋಣ. ವಿವಾದ ಪರಿಹಾರವಾಗುವುದೆಂಬ ಭರವಸೆಯಿದೆ ಎಂದು ತಿಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X