Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಬಡತನವನ್ನು ಅಡಗಿಸಿಡಿ': ಟ್ರಂಪ್ ಭೇಟಿ...

'ಬಡತನವನ್ನು ಅಡಗಿಸಿಡಿ': ಟ್ರಂಪ್ ಭೇಟಿ ವೇಳೆ ಕೊಳಗೇರಿ ಕಾಣದಂತೆ ಗೋಡೆ ನಿರ್ಮಾಣ ಟೀಕಿಸಿದ ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ17 Feb 2020 4:28 PM IST
share
ಬಡತನವನ್ನು ಅಡಗಿಸಿಡಿ: ಟ್ರಂಪ್ ಭೇಟಿ ವೇಳೆ ಕೊಳಗೇರಿ ಕಾಣದಂತೆ ಗೋಡೆ ನಿರ್ಮಾಣ ಟೀಕಿಸಿದ ಶಿವಸೇನೆ

ಮುಂಬೈ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ವಾರ ಅಹ್ಮದಾಬಾದ್‍ ಗೆ ಭೇಟಿ ನೀಡುವ ವೇಳೆ 'ಬಡ ಜನರ ಮನೆಗಳನ್ನು ಅಡಗಿಸಲು ಹಾಗೂ ದಾರಿದ್ರ್ಯವನ್ನು ತೋರ್ಪಡಿಸದೇ ಇರಲು' ಗೋಡೆಯನ್ನು ನಿರ್ಮಿಸುತ್ತಿರುವ ಕೇಂದ್ರದ ನರೇಂದ್ರ ಮೋದಿ ಸರಕಾರವನ್ನು ಶಿವಸೇನೆ ಟೀಕಿಸಿದೆ.

"ಗರೀಬಿ ಹಠಾವೋ ಘೋಷಣೆಯನ್ನು ಟೀಕಿಸಿದ ಸಮಯವೊಂದಿತ್ತು. ಆದರೆ ಈಗ ಗರೀಬಿ ಚುಪಾವೋ ಹೊಸ ಅಜೆಂಡಾ ಆಗಿರುವಂತೆ ಕಾಣಿಸುತ್ತದೆ'' ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ  ಬರೆದಿದೆ.

ಟ್ರಂಪ್ ಸ್ವಾಗತಕ್ಕೆ ಗುಜರಾತ್‍ನಲ್ಲಿ ನಡೆಯುತ್ತಿರುವ ತಯಾರಿಯನ್ನೂ ಟೀಕಿಸಿದ ಸಾಮ್ನಾ, ದೇಶ ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಭೇಟಿ ನೀಡುತ್ತಿದ್ದ ಮಹಾರಾಜ ಅಥವಾ ರಾಣಿಯನ್ನು ಸ್ವಾಗತಿಸಲು ಆಗಾಗ ನಡೆಸಲಾಗುತ್ತಿದ್ದ ತಯಾರಿಯಂತೆ ಇದು ಭಾರತದ ಗುಲಾಮಗಿರಿಯ ಮನಸ್ಥಿತಿಯನ್ನು ನೆನಪಿಸುತ್ತದೆ" ಎಂದು ಹೇಳಿದೆ.

``ಟ್ರಂಪ್ ಅವರ ಭೇಟಿಯ ಅವಧಿ ಮೂರು ಗಂಟೆಗಳು, ಆದರೆ ಅದಕ್ಕಾಗಿ ಅಹ್ಮದಾಬಾದ್‍ ನಲ್ಲಿ 17 ರಸ್ತೆಗಳ ನಿರ್ಮಾಣ ಹಾಗೂ ಈ ರಸ್ತೆಗಳಲ್ಲಿ ಗೋಡೆಗಳ ನಿರ್ಮಾಣ ಸಹಿತ ತಯಾರಿ ದೇಶದ ಬೊಕ್ಕಸಕ್ಕೆ  100 ಕೋಟಿ ರೂ. ನಷ್ಟವುಂಟು ಮಾಡುತ್ತಿದೆ'' ಎಂದೂ ಸಾಮ್ನಾ ಹೇಳಿದೆ.

 "ಟ್ರಂಪ್ ಅಥವಾ ಅಮೆರಿಕಾ ಈ ವೆಚ್ಚಗಳನ್ನು ಭರಿಸುತ್ತಾರೆಯೇ, ಟ್ರಂಪ್ ಭೇಟಿಯಿಂದ ರೂಪಾಯಿ ಮೌಲ್ಯ ಕುಸಿಯುವುದನ್ನು ತಡೆಯುವುದು ಸಾಧ್ಯವಿಲ್ಲ ಯಾ ಬಡತನ ಅಂತ್ಯವಾಗುವುದಿಲ್ಲ'' ಎಂದು ಸಾಮ್ನಾ ಸಂಪಾದಕೀಯದಲ್ಲಿ ಬರೆಯಲಾಗಿದೆ.

"ನರೇಂದ್ರ ಮೋದಿ ಅಭಿವೃದ್ಧಿಯನ್ನು ಅತ್ಯಂತ ಹೆಚ್ಚು ಪ್ರೋತ್ಸಾಹಿಸುತ್ತಾರೆ, ಅವರಿಗಿಂತ ಮೊದಲು ಯಾರೂ ದೇಶವನ್ನು ಅಭಿವೃದ್ಧಿಪಡಿಸಿಲ್ಲ. ಅವರ ನಂತರವೂ ಯಾರೂ ಇಷ್ಟು ಅಭಿವೃದ್ಧಿಪಡಿಸುವುದಿಲ್ಲ,  ಅವರು ಗುಜರಾತ್‍ ನಲ್ಲಿ 15 ವರ್ಷ ಸಿಎಂ ಆಗಿ ಹಾಗೂ ಐದು ವರ್ಷದಿಂದ ಪ್ರಧಾನಿಯಾಗಿರುವಾಗ  ಬಡತನವನ್ನು ಅಡಗಿಸುವಂತಹ ಅಗತ್ಯವೇಕೆ ಬಂದಿದೆ?'' ಎಂದು ಶಿವಸೇನೆ ಪ್ರಧಾನಿಯನ್ನು ವ್ಯಂಗ್ಯವಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X