Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಸ್ ಮಾಲಕರಿಂದ ಪ್ರಯಾಣಿಕರ ಮೇಲೆ ಟೋಲ್...

ಬಸ್ ಮಾಲಕರಿಂದ ಪ್ರಯಾಣಿಕರ ಮೇಲೆ ಟೋಲ್ ಸೆಸ್ ಹೇರಿಕೆ

ಹೋರಾಟ ಸಮಿತಿಯಿಂದ ವಿರೋಧ

ವಾರ್ತಾಭಾರತಿವಾರ್ತಾಭಾರತಿ17 Feb 2020 8:12 PM IST
share

ಮಂಗಳೂರು, ಫೆ.16: ಫಾಸ್ಟ್ಟಾಗ್ ಕಡ್ಡಾಯ, ಟೋಲ್ ದರಗಳ ಹೆಚ್ಚಳವನ್ನು ಮುಂದಿಟ್ಟು ದ.ಕ., ಉಡುಪಿ ಜಿಲ್ಲಾ ಬಸ್ ಮಾಲಕರು ಪ್ರತಿ ಸ್ಟೇಜ್‌ಗೆ ಟಿಕೆಟ್ ಮೇಲೆ ತಲಾ ಒಂದು ರೂ. ಪ್ರಯಾಣ ದರ ಹೆಚ್ಚಳ ಮಾಡಿರುವುದು ಖಂಡನೀಯ. ಜಿಲ್ಲಾಡಳಿತ, ಆರ್‌ಟಿಎ ಅನುಮತಿ ಪಡೆಯದೆ ಈ ರೀತಿ ಏಕಪಕ್ಷೀಯ, ನಿಯಮ ಬಾಹಿರ ಏರಿಕೆ ಮಾಡುವುದನ್ನು ಒಪ್ಪಲಾಗದು. ಉಭಯ ಜಿಲ್ಲಾಡಳಿತಗಳು ತಕ್ಷಣ ಮಧ್ಯ ಪ್ರವೇಶಿಸಿ ದರ ಏರಿಕೆಯನ್ನು ತಡೆ ಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

ಸುರತ್ಕಲ್ನಲ್ಲಿ ಅಕ್ರಮ ಟೋಲ್ ವಸೂಲಿಯನ್ನು ಸಂಘಟಿತ ವಿಭಾಗವಾದ ಬಸ್ ಮಾಲಕರ ಒಕ್ಕೂಟಗಳು ಪ್ರತಿಭಟಿಸಬೇಕು. ಅದರ ಹೊರತಾಗಿ ಟೋಲ್ ದರ ಹೆಚ್ಚಳವನ್ನೇ ನೆಪವಾಗಿಸಿ ಪ್ರಯಾಣಿಕರ ಮೇಲೆ ಯದ್ವಾತದ್ವ ದರ ವಿಧಿಸುವುದು ಖಂಡನೀಯ. ದ.ಕ., ಉಡುಪಿ ಜಿಲ್ಲೆಯಲ್ಲಿ ಟೋಲ್ಗೇಟ್‌ಗಳಲ್ಲಿ ವಿಪರೀತ ದರ ವಸೂಲಿ, ಅಕ್ರಮ ಟೋಲ್ಗೇಟ್‌ಗಳ ವಿರುದ್ದ ನಾಗರಿಕ ಸಂಘಟನೆಗಳು ಹೋರಾಟಗಳನ್ನು ಹಮ್ಮಿಕೊಂಡಾಗ ಬಸ್ ಮಾಲಕರ ಸಂಘಗಳು ಪ್ರತಿಭಟನೆಯ ಜೊತೆಗೆ ನಿಲ್ಲಲಿಲ್ಲ. ಟೋಲ್ ಕೇಂದ್ರಗಳ ವಿರುದ್ದ ಹೋರಾಟವನ್ನೂ ಮಾಡಲಿಲ್ಲ. ಅದರಲ್ಲೂ ಹೆದ್ದಾರಿ ಪ್ರಾಧಿಕಾರವೇ ಸ್ವತಃ ಮುಚ್ಚಲು ನಿರ್ಧರಿಸಿರುವ ಸುರತ್ಕಲ್ನ ತಾತ್ಕಾಲಿಕ ಟೋಲ್ ಕೇಂದ್ರದಲ್ಲಿ ಅಕ್ರಮ ಟೋಲ್ ಸಂಗ್ರಹದ ವಿರುದ್ದ ಟೋಲ್ ವಿರೋಧಿ ಹೋರಾಟ ಸಮಿತಿ ಹೋರಾಟ ನಡೆಸಿದಾಗಲೂ ಬಸ್ ಮಾಲಕರ ಸಂಘ ಹೋರಾಟ ಬೆಂಬಲಿಸಿ ಬೀದಿಗಿಳಿಯಲಿಲ್ಲ. ಖಾಸಗಿ ಬಸ್‌ಗಳು ಸುರತ್ಕಲ್ ಅಕ್ರಮ ಟೋಲ್ ಕೇಂದ್ರದ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿದ್ದರೆ ಸುರತ್ಕಲ್ ಟೋಲ್ ಮುಚ್ಚದೆ ಸರಕಾರಕ್ಕೆ ಬೇರೆ ದಾರಿ ಇರಲಿಲ್ಲ ಎಂದು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಟೋಲ್ ಕೇಂದ್ರಗಳು ಆರಂಭಗೊಂಡಾಗ ಪ್ರಯಾಣಿಕರ ಪ್ರತಿ ಟಿಕೆಟ್ ಮೇಲೆ ಬಸ್ ಮಾಲಕರ ಸಂಘ ತಲಾ ಎರಡು ರೂ. ಟೋಲ್ ಸೆಸ್ ವಿಧಿಸಿತ್ತು. ಈಗ ಮತ್ತೆ ಟೋಲ್ ದರ ಅಲ್ಪಹೆಚ್ಚಳವನ್ನು ಮುಂದಿಟ್ಟು ಪ್ರತಿ ಸ್ಟೇಜ್ ಮೇಲೆ ಟಿಕೆಟ್‌ಗೆ ಒಂದು ರೂ. ಸೆಸ್ ಅನ್ನು ಜಿಲ್ಲಾಡಳಿತ, ಆರ್‌ಟಿಎ ಅನುಮತಿ ಪಡೆಯದೆ ಏಕಪಕ್ಷೀಯವಾಗಿ ಹೆಚ್ಚುವರಿಯಾಗಿ ವಿಧಿಸಿದೆ. ಇದು ನಿಯಮಗಳ ವಿರುದ್ಧವಾಗಿದೆ. ಈ ಹೆಚ್ಚಳದಿಂದ ಮಂಗಳೂರಿನಿಂದ ಉಡುಪಿ, ಕುಂದಾಪುರದ ಕಡೆಗೆ ಪ್ರಯಾಣಿಸುವ ಪ್ರತಿಯೊಂದು ಟಿಕೆಟ್ ಮೇಲೆ ತಲಾ ಐದು ರೂ. ಹೆಚ್ಚುವರಿ ಹೊರೆ ಬೀಳುತ್ತದೆ. ಇದು ಅಕ್ರಮ ಸುಲಿಗೆಯಾಗಿದ್ದು, ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯು ಬಸ್ ಮಾಲಕರ ಸಂಘದ ಈ ಏಕಪಕ್ಷೀಯ ಸುಲಿಗೆ ನೀತಿಯನ್ನು ತೀವ್ರವಾಗಿ ವಿರೋಧಿಸುತ್ತದೆ. ಪ್ರಯಾಣಿಕರು ಹೆಚ್ಚುವರಿ ದರ ಪಾವತಿಸದೆ ಅಸಹಕಾರ ನೀಡಲು ಸಮಿತಿ ಮನವಿ ಮಾಡುತ್ತದೆ. ಉಭಯ ಜಿಲ್ಲಾಡಳಿಗಳು ತಕ್ಷಣ ಮಧ್ಯ ಪ್ರವೇಶಿಸಿ ಹೆಚ್ವುವರಿ ಟೋಲ್ ಸೆಸ್ ವಸೂಲಿಗೆ ತಡೆ ವಿಧಿಸುವಂತೆ ಆಗ್ರಹಿಸುತ್ತದೆ ಎಂದು ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X