ಪ್ರವಾದಿ ನಿಂದನೆ: ಮಧುಗಿರಿ ಮೋದಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು
ಪುತ್ತೂರು: ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಮಾನಹಾನಿಕಾರಕ ಹೇಳಿಕೆಯನ್ನು ನೀಡಿದ್ದಲ್ಲದೆ, ಅದನ್ನು ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ನಲ್ಲಿ ಪ್ರಸಾರ ಮಾಡಿದ ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ನಗರದ ಕೂರ್ನಡ್ಕ ನಿವಾಸಿ ಹಕೀಂ ಸಹೇಲಿ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.
ಫೆ.16ರಂದು ಮಧುಗಿರಿ ಮೋದಿ ಅಲಿಯಾಸ್ ಅತುಲ್ ಕುಮಾರ್ ಎಂಬಾತ ಪ್ರವಾದಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಅದನ್ನು ಫೇಸ್ ಬುಕ್ ಮತ್ತು ಇನ್ನಿತರ ಜಾಲತಾಣದಲ್ಲಿ ಪ್ರಸಾದ್ ಮಾಡುವ ಮೂಲಕ ಹಿಂದೂ ಮತ್ತು ಮುಸ್ಲಿಮರ ಮದ್ಯೆ ವೈರತ್ವ ಉಂಡು ಮಾಡುತ್ತಿದ್ದಾನೆ. ಜೊತೆಗೆ ಪ್ರವಾದಿ ಮತ್ತು ಇಸ್ಲಾಂ ಧರ್ಮ ನಿಂದನೆ ಮಾಡಿದ್ದಾನೆ. ಈ ನಿಟ್ಟಿನಲ್ಲಿ ಆತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
Next Story