Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಗಳೂರು ಪೊಲೀಸರ ವಿರುದ್ಧ ಯಾಕೆ...

ಮಂಗಳೂರು ಪೊಲೀಸರ ವಿರುದ್ಧ ಯಾಕೆ ಎಫ್‌ಐಆರ್ ದಾಖಲಿಸಿಲ್ಲ: ಮಾಹಿತಿ ನೀಡಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

22 ಮಂದಿಗೆ ಜಾಮೀನು ಮಂಜೂರು

ವಾರ್ತಾಭಾರತಿವಾರ್ತಾಭಾರತಿ17 Feb 2020 9:16 PM IST
share
ಮಂಗಳೂರು ಪೊಲೀಸರ ವಿರುದ್ಧ ಯಾಕೆ ಎಫ್‌ಐಆರ್ ದಾಖಲಿಸಿಲ್ಲ: ಮಾಹಿತಿ ನೀಡಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು, ಫೆ.22: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ್ದ ಘರ್ಷಣೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದ 22 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ಮಂಗಳೂರು ಪೊಲೀಸರ ವಿರುದ್ಧ ಇಲ್ಲಿಯವರೆಗೆ ಯಾಕೆ ಎಫ್‌ಐಆರ್ ದಾಖಲಿಸಿಕೊಂಡಿಲ್ಲ ಎಂಬುದರ ಬಗ್ಗೆ ಫೆ.18ರಂದು ಮಾಹಿತಿ ನೀಡಲು ರಾಜ್ಯ ಸರಕಾರಕ್ಕೆ ಸೂಚಿಸಿದೆ. 

ಈ ಕುರಿತು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ನಾ ಅವರಿದ್ದ ನ್ಯಾಯಪೀಠ, ಆರೋಪಿಗಳಾದ ಮುಹಮ್ಮದ್ ಅಝರ್, ಅಬ್ದುಲ್ ಹಫೀಝ್, ಹರ್ಜಾನ್, ಮುಹಮ್ಮದ್ ನಝೀಮ್, ಅನ್ವರ್ ಹುಸೇನ್, ಮುಹಮ್ಮದ್ ಇಕ್ಬಾಲ್, ಕೈಸಲ್, ಜಾವಿದ್ ಅಖ್ತರ್, ಮುಹಮ್ಮದ್ ಜಿಹಾದ್, ಮುಹಮ್ಮದ್ ಫಯಾಝ್, ಮುಹಮ್ಮದ್ ಆಶೀಕ್, ಮುಹಮ್ಮದ್ ಸುಹೈಲ್, ನಾಸಿರುದ್ದೀನ್, ಮುಹಮ್ಮದ್ ಶಕೀರ್, ಕಲಂದರ್ ಬಾಷಾ ಸೇರಿ 22 ಜನರಿಗೆ ಜಾಮೀನು ಮಂಜೂರು ಮಾಡಿದೆ.

ಅರ್ಜಿದಾರರ ಪರ ವಾದಿಸಿದ ವಕೀಲ ಬಿ.ಲತೀಫ್ ಅವರು, ಇಲ್ಲಿ ಪೊಲೀಸರು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮ ಕಕ್ಷಿದಾರರು ಭಾಗಿಯಾಗಿರುವ ಬಗ್ಗೆ ಯಾವುದೇ ಸಾಕ್ಷಿಗಳು ಪೊಲೀಸರ ಬಳಿ ಇಲ್ಲ. ಘಟನೆಯ ವೇಳೆ ನಮ್ಮ ಕಕ್ಷಿದಾರರು ಸ್ಥಳದಲ್ಲೇ ಇರಲಿಲ್ಲ. ಒಂದು ಧರ್ಮವನ್ನು ಟಾರ್ಗೆಟ್ ಮಾಡಿ ಈ ದೂರು ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ, ಪೊಲೀಸರು ಗೋಲಿಬಾರ್ ನಡೆಸಿ ದೌರ್ಜನ್ಯ ನಡೆಸಿದ್ದರೂ ಅವರ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಸರಕಾರದ ಪರ ವಾದಿಸಿದ ವಕೀಲರು, ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕಷ್ಟು ಸಾಕ್ಷಾಧಾರಗಳಿವೆ. ಆರೋಪಿಗಳು ಘಟನೆಯಲ್ಲಿ ಭಾಗಿಯಾಗಿರುವ ಬಗ್ಗೆ ವೀಡಿಯೋಗಳಿವೆ. ಜತೆಗೆ ತಾಂತ್ರಿಕ ಸಾಕ್ಷಿಗಳು ನಮ್ಮ ತನಿಖೆಯಲ್ಲಿ ಪತ್ತೆಯಾಗಿವೆ ಎಂದು ಹೇಳಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತು. ಅಲ್ಲದೆ, ಮಂಗಳೂರು ಪೊಲೀಸರ ವಿರುದ್ಧ ಇಲ್ಲಿಯವರೆಗೆ ಯಾಕೆ ಎಫ್‌ಐಆರ್ ದಾಖಲಿಸಿಕೊಂಡಿಲ್ಲ ಎಂಬುದರ ಬಗ್ಗೆ ರಾಜ್ಯ ಸರಕಾರಕ್ಕೆ ಮಾಹಿತಿ ನೀಡಲು ಸೂಚಿಸಿತು.

ಪ್ರಕರಣವೇನು: ಕಳೆದ 2019ರ ಡಿ.19ರಂದು ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟುಮಾಡಿತ್ತು. ಅಲ್ಲದೇ, ಇಬ್ಬರು ಗೋಲಿಬಾರ್ ನಲ್ಲಿ ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಹಲವರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದರು. ಪೊಲೀಸರ ಮೇಲೆ ಆರೋಪಿಗಳು ಕಲ್ಲು, ಬಾಟಲ್ ತೂರಾಟ ಮಾಡಿದ್ದರೆಂದು ಆರೋಪಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X