Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆರೆ ಪರಿಹಾರ ನೀಡಲು ಮೃತರ ಡಿಎನ್‌ಎ ವರದಿ...

ನೆರೆ ಪರಿಹಾರ ನೀಡಲು ಮೃತರ ಡಿಎನ್‌ಎ ವರದಿ ಕೇಳುತ್ತಿರುವ ಅಧಿಕಾರಿಗಳು !

ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಅಳಲು

ವಾರ್ತಾಭಾರತಿವಾರ್ತಾಭಾರತಿ17 Feb 2020 10:41 PM IST
share
ನೆರೆ ಪರಿಹಾರ ನೀಡಲು ಮೃತರ ಡಿಎನ್‌ಎ ವರದಿ ಕೇಳುತ್ತಿರುವ ಅಧಿಕಾರಿಗಳು !

ಬೆಂಗಳೂರು, ಫೆ. 17: ಇತ್ತೀಚೆಗೆ ಉತರ ಕರ್ನಾಟಕದಲ್ಲಿ ಸಂಭವಿಸಿದ ನೆರೆಯಲ್ಲಿ ಮೃತಪಟ್ಟವರಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಮೃತಪಟ್ಟವರ ಡಿಎನ್‌ಎ ವರದಿ ಬಂದ ಬಳಿಕ ಪರಿಹಾರವನ್ನು ಅವರ ಕುಟುಂಬಕ್ಕೆ ನೀಡುತ್ತೇವೆ ಎಂದು ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ ಎಂದು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಸೋಮವಾರ ಪ್ರೆಸ್‌ಕ್ಲಬ್‌ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೆರೆ ಸಂತ್ರಸ್ತ ಸಂಜೀವ್ ಕಾಂಬಳೆ, ನೆರೆಯಲ್ಲಿ ಮೃತಪಟ್ಟವರಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಮೃತಪಟ್ಟವರ ಡಿಎನ್‌ಎ ವರದಿ ಬಂದ ಬಳಿಕ ಪರಿಹಾರವನ್ನು ಅವರ ಕುಟುಂಬಕ್ಕೆ ನೀಡುತ್ತೇವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಡಿಎನ್‌ಎನಲ್ಲಿ ಮೃತಪಟ್ಟವರು ನೆರೆಯಿಂದಲೇ ಮೃತಪಟ್ಟರು ಎಂದು ಸಾಬೀತಾದರೆ ಮಾತ್ರ ಅಧಿಕಾರಿಗಳು ಪರಿಹಾರ ಒದಗಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಇದು ಯಾವ ರೀತಿಯ ನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಮುಧೋಳ, ಖಾನಾಪುರ ಸೇರಿದಂತೆ ಮತ್ತಿತರ ಭಾಗದಲ್ಲಿ ಹೊಲ, ಮನೆ, ಶಾಲೆ ಕಟ್ಟಡ ಹಾನಿಯಾಗಿವೆ. ಆದರೆ, ಈವರೆಗೂ ಪರಿಹಾರ ಸಿಕ್ಕಿಲ್ಲ. ತಾತ್ಕಾಲಿಕ ಹತ್ತು ಸಾವಿರ ರೂ. ಹಣವನ್ನು ಕೆಲವರಿಗೆ ಮಾತ್ರ ನೀಡಲಾಗಿದೆ. ನೆರೆ ಕುರಿತು ಸಮೀಕ್ಷೆ ಮಾಡಿದ ಸರಕಾರ ಪರಿಹಾರ ನೀಡಲು ಎ, ಬಿ, ಸಿ ಎಂದು ಮೂರು ವರ್ಗ ಮಾಡಿ ಪರಿಹಾರ ನೀಡಲು ಮುಂದಾಯಿತು. ಆದರೆ, ಸಮೀಕ್ಷೆ ಸರಿಯಾಗಿ ಮಾಡದೇ ಪೂರ್ಣ ಮನೆ ಬಿದ್ದವರನ್ನು ಸಿ ವರ್ಗಕ್ಕೆ ಸೇರಿಸಿ, ಅಲ್ಪಪ್ರಮಾಣದ ಮನೆ ಬಿದ್ದವರನ್ನು ಎ ವರ್ಗಕ್ಕೆ ಸೇರಿಸಿದ್ದಾರೆ. ಈ ಬಗ್ಗೆ ಪುನರ್ ಸಮೀಕ್ಷೆ ನಡೆಸಬೇಕು ಎಂದು ಹಲವು ಬಾರಿ ಮನವಿ ಮಾಡಿದರು ಪ್ರಯೋಜನವಾಗಿಲ್ಲ ಎಂದು ದೂರಿದರು.

ಪೂರ್ತಿ ಮನೆ ಬಿದ್ದವರಿಗೆ 5 ಲಕ್ಷ ರೂ. ಹಣ ಕೊಡುವುದಾಗಿ ಹೇಳಿದ ಸರಕಾರ ಮೂರು ಲಕ್ಷಕ್ಕೆ ಇಳಿಸಲು ತೀರ್ಮಾನಿಸಿದೆ. ಮನೆ ನಿರ್ಮಾಣಕ್ಕೆ ಮುಂದಾದವರಿಗೆ ಕೇವಲ ಒಂದು ಲಕ್ಷ ನೀಡಿ ಕೈತೊಳೆದುಕೊಳ್ಳಲಾಗಿದೆ. ಅವರು ಮನೆ ಕಟ್ಟಿಕೊಳ್ಳಲಾಗದೇ ಬೀದಿ ಪಾಲಾಗಿದ್ದಾರೆ. ಉತ್ತರ ಕರ್ನಾಟಕದ ಹಲವೆಡೆ ಶಾಲೆ, ಅಂಗನವಾಡಿ ಕಟ್ಟಡ ಹಾಳಾಗಿದ್ದು ಪೂರ್ತಿಯಾಗಿ ದುರಸ್ತಿ ಕಂಡಿಲ್ಲ. ಪುನರ್ವಸತಿಯಲ್ಲಿರುವ ನೂರಾರು ಮಕ್ಕಳು ಶಾಲೆಗೆ ಹೋಗಲು ನಿತ್ಯ ಐದಾರು ಕೀ. ಮಿ ನಡೆದು ಹೋಗುವ ಪರಿಸ್ಥಿತಿ ಇದೆ. ಈ ಬಗ್ಗೆ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪರಿಹಾರ ಪ್ರಕ್ರಿಯೆಯಲ್ಲಿನ ಅಧಿಕಾರಿಗಳನ್ನು ಬೇರೆಡೆ ಸ್ಥಳಾಂತರ ಮಾಡಿರುವುದು ಖಂಡನೀಯ ಎಂದರು.

ನೆರೆ ಪರಿಹಾರಕ್ಕೆ ಘೋಷಿಸಿದ ಪರಿಹಾರ ಹಣ ನೀಡಬೇಕು, ಪುನರ್ ಸಮೀಕ್ಷೆ ನಡೆಸಬೇಕು. ಬೆಳೆ ಪರಿಹಾರ ನೀಡುವ ಜತೆಗೆ ಶಾಲೆಗಳ ದುರಸ್ತಿ ಕಾರ್ಯ ಶೀಘ್ರವೇ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X