Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಆಧಾರ್ ನಕಲಿಯಾಗಿರಬಹುದು': ಪೌರತ್ವ...

'ಆಧಾರ್ ನಕಲಿಯಾಗಿರಬಹುದು': ಪೌರತ್ವ ಸಾಬೀತುಪಡಿಸಲು ಹೈದರಾಬಾದ್ ನಿವಾಸಿಗೆ ವಿಶಿಷ್ಟ ಗುರುತು ಪ್ರಾಧಿಕಾರ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ18 Feb 2020 4:45 PM IST
share
ಆಧಾರ್ ನಕಲಿಯಾಗಿರಬಹುದು: ಪೌರತ್ವ ಸಾಬೀತುಪಡಿಸಲು ಹೈದರಾಬಾದ್ ನಿವಾಸಿಗೆ ವಿಶಿಷ್ಟ ಗುರುತು ಪ್ರಾಧಿಕಾರ ನೋಟಿಸ್

ಹೈದರಾಬಾದ್ : ಹೈದರಾಬಾದ್ ನಿವಾಸಿ ಸತ್ತಾರ್ ಖಾನ್ ಅವರಿಗೆ ಫೆ. 3ರಂದು ಬರೆದಿರುವ ಪತ್ರದಲ್ಲಿ ಭಾರತದ ವಿಶಿಷ್ಟ ಗುರುತು ಪ್ರಾಧಿಕಾರ ಅವರ ಭಾರತೀಯ ಪೌರತ್ವವನ್ನು ಶಂಕಿಸಿದೆ. ಖಾನ್ ಭಾರತೀಯ ನಾಗರಿಕನಲ್ಲ ಎಂಬ ದೂರು/ಆರೋಪ ತನಗೆ  ಬಂದಿದೆ ಎಂದು ಹೇಳಿರುವ ಪ್ರಾಧಿಕಾರ ಈ ದೂರನ್ನು ನೀಡಿದವರು ಯಾರು ಎಂಬುದನ್ನು ಬಹಿರಂಗ ಪಡಿಸಿಲ್ಲ.

ಸತ್ತಾರ್ ತನ್ನ ಆಧಾರ್ ಕಾರ್ಡನ್ನು ನಕಲಿ ದಾಖಲೆಗಳ ಆಧಾರದಲ್ಲಿ ಪಡೆದುಕೊಂಡಿದ್ದಾರೆಂದೂ ದೂರಿನಲ್ಲಿ ಹೇಳಲಾಗಿತ್ತು ಎಂದು ಪ್ರಾಧಿಕಾರ ಹೇಳಿಕೊಂಡಿದೆ.

ಫೆ. 20ರಂದು ಬೆಳಗ್ಗೆ 11 ಗಂಟೆಗೆ ರಂಗಾರೆಡ್ಡಿ ಜಿಲ್ಲೆಯ ಬಾಲಾಪುರ್ ತನಿಖಾಧಿಕಾರಿಯೆದುರು ಹಾಜರಾಗುವಂತೆಯೂ ಆತನಿಗೆ ಸೂಚಿಸಲಾಗಿದೆಯಲ್ಲದೆ ಆತ ತಾನು ಭಾರತೀಯ ನಾಗರಿಕ ಎಂಬುದಕ್ಕೆ ಸೂಕ್ತ ಮೂಲ ದಾಖಲೆಗಳನ್ನು ಪ್ರಸ್ತುತಪಡಿಸುವಂತೆಯೂ ಸೂಚಿಸಲಾಗಿದೆ.

ಒಂದು ವೇಳೆ ಆತ ಭಾರತೀಯ ನಾಗರಿಕನಲ್ಲದೇ ಇದ್ದರೆ ಕಾನೂನು ಬದ್ಧವಾಗಿ ಭಾರತ ಪ್ರವೇಶಿಸಿರುವ ಕುರಿತಂತೆ ಸಾಬೀತು ಪಡಿಸಬೇಕು ಎಂದು ಆತನಿಗೆ ಕಳುಹಿಸಲಾದ ನೋಟಿಸ್ ನಲ್ಲಿ ತಿಳಿಸಲಾಗಿದೆ. ಆತ ತನಿಖೆಗೆ ಹಾಜರಾಗದೇ ಇದ್ದಲ್ಲಿ ತಾನು ಸ್ವಯಂಪ್ರೇರಣೆಯಿಂದ ನಿರ್ಧಾರ ಕೈಗೊಳ್ಳುವುದಾಗಿಯೂ ಪ್ರಾಧಿಕಾರದ ನೋಟಿಸ್ ಎಚ್ಚರಿಸಿದೆ.

ಎಷ್ಟು ಜನರಿಗೆ ಈ ರೀತಿಯ ನೋಟಿಸನ್ನು ಪ್ರಾಧಿಕಾರ ಜಾರಿ ಮಾಡಿದೆ ಎಂದು ತಿಳಿದಿಲ್ಲವಾದರೂ ತನಿಖೆಯನ್ನು ಒಂದು ಸಭಾಂಗಣದಲ್ಲಿ ಆಯೋಜಿಸಲಾಗಿರುವುದರಿಂದ ಹಲವರು ಅಲ್ಲಿಗೆ ಆಗಮಿಸುವ ಸಾಧ್ಯತೆಯಿದೆ ಎಂದು ಸತ್ತಾರ್ ಖಾನ್ ಅವರ ವಕೀಲ ಮುಝಾಫರುಲ್ಲಾ ಖಾನ್ ಹೇಳುತ್ತಾರೆ. ಪ್ರಾಧಿಕಾರದ ನೋಟಿಸನ್ನು ತೆಲಂಗಾಣ ಹೈಕೋರ್ಟಿನಲ್ಲಿ  ಪ್ರಶ್ನಿಸುವ ಉದ್ದೇಶವೂ ಖಾನ್ ಅವರಿಗಿದೆ.

ಸತ್ತಾರ್ ಖಾನ್ 40 ವರ್ಷ ಮೇಲ್ಪಟ್ಟವರಾಗಿದ್ದು  ಹೈದರಾಬಾದ್‍ನ ಎರಡು ಪ್ರದೇಶಗಳಲ್ಲಿ ಇಲ್ಲಿಯ ತನಕ ವಾಸವಾಗಿದ್ದರು. ಅವರ ಕುಟುಂಬ, ಸೋದರರೆಲ್ಲರೂ ಹೈದರಾಬಾದ್ ನಿವಾಸಿಗಳಾಗಿದ್ದು ಎಲ್ಲರ ಬಳಿ ರೇಷನ್ ಕಾರ್ಡ್ ಹಾಗೂ ಮತದಾರರ ಗುರುತು ಪತ್ರಗಳಿವೆ. ಅವರ ತಂದೆ ಸಾರ್ವಜನಿಕ ರಂಗದ ಉದ್ದಿಮೆಯಲ್ಲಿ ಕೆಲಸ ಮಾಡಿದ್ದರೆ ತಾಯಿ ಪಿಂಚಣಿ ಪಡೆಯುತ್ತಿದ್ದಾರೆ,'' ಎಂದು ಅವರ ವಕೀಲರು ಹೇಳಿದ್ದಾರೆ.

ಆಧಾರ್ ಪೌರತ್ವದ ದಾಖಲೆಯಲ್ಲ ಎಂದು ಕಾರ್ಡ್ ನಲ್ಲಿಯೇ ಬರೆದಿರುವಾಗ ಅದನ್ನು ಪೌರತ್ವದ ಪುರಾವೆಯೆಂದು ಪ್ರಾಧಿಕಾರ ಹೇಗೆ ಪರಿಗಣಿಸಿ ಕ್ರಮ ಕೈಗೊಳ್ಳಬಹುದು ಎಂದು ಅವರು ಪ್ರಶ್ನಿಸುತ್ತಾರೆ. ಕರ್ನಾಟಕದಲ್ಲೂ ಹಲವರಿಗೆ ಇಂತಹುದೇ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಯಾವುದೇ ವ್ಯಕ್ತಿಯ ಪೌರತ್ವ ಸ್ಥಾನಮಾನ ಪ್ರಶ್ನಿಸುವ ಅಧಿಕಾರ ಪ್ರಾಧಿಕಾರಕ್ಕಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X