Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ಬೂದುಪಟ್ಟಿಯಲ್ಲೇ ಮುಂದುವರಿಕೆ;...

ಪಾಕ್ ಬೂದುಪಟ್ಟಿಯಲ್ಲೇ ಮುಂದುವರಿಕೆ; ಎಫ್‌ಎಟಿಎಫ್ ನಿರ್ಧಾರ

ಭಯೋತ್ಪಾದನೆಗೆ ಹಣ ಪೂರೈಕೆ ತಡೆಯಲು ವಿಫಲ

ವಾರ್ತಾಭಾರತಿವಾರ್ತಾಭಾರತಿ18 Feb 2020 9:04 PM IST
share

ಪ್ಯಾರಿಸ್ (ಫ್ರಾನ್ಸ್), ಫೆ. 18: ಭಯೋತ್ಪಾದನೆಗೆ ಪೂರೈಕೆಯಾಗುತ್ತಿರುವ ಹಣದ ಮೇಲೆ ನಿಗಾ ಇಡುವ ಜಾಗತಿ ಸಂಸ್ಥೆ ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್)ನ 'ಬೂದು ಪಟ್ಟಿ'ಯಲ್ಲೇ ಮುಂದುವರಿಯುವಲ್ಲಿ ಪಾಕಿಸ್ತಾನ ಯಶಸ್ವಿಯಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಂಡಿರುವೆ ಎಂದು ಹೇಳುವ ಮೂಲಕ ಪಾಕಿಸ್ತಾನವು 'ಕಪ್ಪು ಪಟ್ಟಿ'ಯಿಂದ ನುಣುಚಿಕೊಂಡಿದೆ.ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲು ಭಾರತ ಪ್ರಯತ್ನಗಳನ್ನು ಮಾಡಿರುವಂತೆಯೇ, ಯಾವುದೇ ಪಟ್ಟಿಗೆ ಸೇರದೆ ತಪ್ಪಿಸಿಕೊಳ್ಳಲು ಪಾಕಿಸ್ತಾನವು ಪ್ರಯತ್ನಗಳನ್ನು ಮಾಡಿತ್ತು ಎಂದು ಮೂಲಗಳು ಹೇಳಿವೆ.

ಪ್ಯಾರಿಸ್‌ನಲ್ಲಿರುವ ಎಫ್‌ಎಟಿಎಫ್‌ನ ಪ್ರಧಾನ ಕಚೇರಿಯಲ್ಲಿ ಒಂದು ವಾರ ಸಮಾಲೋಚನೆಗಳು ನಡೆದ ಬಳಿಕ, ಶುಕ್ರವಾರ ಈ ಬಗ್ಗೆ ಸಂಸ್ಥೆಯು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ.ಎಫ್‌ಎಟಿಎಫ್ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಿದ್ದರೆ ಅದು ಆ ದೇಶದ ಆರ್ಥಿಕ ಸುಧಾರಣಾ ಕಾರ್ಯಕ್ರಮದ ಮೇಲೆ ಬಹು ದೊಡ್ಡ ಹೊಡೆತವಾಗುತ್ತಿತ್ತು. ಕಪ್ಪು ಪಟ್ಟಿಯಲ್ಲಿ ಪಾಕಿಸ್ತಾನ ಸ್ಥಾನ ಪಡೆದರೆ ಅದು ಕಠಿಣ ಆರ್ಥಿಕ ದಿಗ್ಬಂಧನಗಳಿಗೆ ಗುರಿಯಾಗುತ್ತದೆ ಎಂದು ಅಂತರ್‌ರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ತನ್ನ ಆಂತರಿಕ ವರದಿಯೊಂದರಲ್ಲಿ ಹೇಳಿತ್ತು. ಹೂಡಿಕೆ ಮತ್ತು ಬಂಡವಾಳ ಹರಿವಿನ ಮೇಲೆ ಅದು ವ್ಯತಿರಿಕ್ತ ಪರಿಣಾಮ ಬೀರುತ್ತಿತ್ತು ಹಾಗೂ ಐಎಂಎಫ್‌ನ ನಿಧಿಯ ಮೇಲೂ ಪರಿಣಾಮ ಬೀರುತ್ತಿತ್ತು.ಪಾಕಿಸ್ತಾನವು ಈ ಬಾರಿ ಟರ್ಕಿ ಮತ್ತು ಮಲೇಶ್ಯ ದೇಶಗಳ ಬೆಂಬಲದಿಂದ ಕಪ್ಪು ಪಟ್ಟಿಗೆ ಸೇರ್ಪಡೆಗೊಳ್ಳುವುದನ್ನು ತಪ್ಪಿಸಿಕೊಂಡಿದೆ. ಪಾಕಿಸ್ತಾನಕ್ಕೆ ಬೆಂಬಲ ನೀಡುವ ತಮ್ಮ ನಿರ್ಧಾರವನ್ನು ಈ ದೇಶಗಳ ನಾಯಕರು ಘೋಷಿಸಿದ್ದರು.ಆದರೆ, ಪಾಕಿಸ್ತಾನವು ಎಪ್ರಿಲ್ ವೇಳೆಗೆ ಬೂದು ಪಟ್ಟಿಯಿಂದ ಹೊರಬರದಿದ್ದರೆ ಅದು ತನ್ನಿಂತಾನೆ ಕಪ್ಪು ಪಟ್ಟಿಗೆ ಸೇರ್ಪಡೆಗೊಳ್ಳುತ್ತದೆ.ಇರಾನ್ ಈಗಾಗಲೇ ಎಫ್‌ಎಟಿಎಫ್ ಕಪ್ಪು ಪಟ್ಟಿಯಲ್ಲಿದೆ.

ಲಷ್ಕರೆ ತಯ್ಯಬ ಮತ್ತು ಜೈಶೆ ಮುಹಮ್ಮದ್ ಮುಂತಾದ ಭಯೋತ್ಪಾದಕ ಗುಂಪುಗಳಿಗೆ ಹಣ ಪೂರೈಕೆಯಾಗುತ್ತಿರುವುದನ್ನು ತಡೆಯಲು ಪಾಕಿಸ್ತಾನ ವಿಫಲವಾಗಿರುವುದಕ್ಕಾಗಿ ಅದನ್ನು ಬೂದು ಪಟ್ಟಿಯಲ್ಲೇ ಮುಂದುವರಿಸಲು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಎಫ್‌ಎಟಿಎಫ್ ನಿರ್ಧರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X