Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕವಿ ಸಿರಾಜ್ ಬಿಸರಳ್ಳಿ ನ್ಯಾಯಾಲಯಕ್ಕೆ...

ಕವಿ ಸಿರಾಜ್ ಬಿಸರಳ್ಳಿ ನ್ಯಾಯಾಲಯಕ್ಕೆ ಶರಣಾಗತಿ: ಪೊಲೀಸ್ ವಶಕ್ಕೆ

ಸಿಎಎ ವಿರೋಧಿ ಕವನ ವಾಚನ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ18 Feb 2020 9:40 PM IST
share
ಕವಿ ಸಿರಾಜ್ ಬಿಸರಳ್ಳಿ ನ್ಯಾಯಾಲಯಕ್ಕೆ ಶರಣಾಗತಿ: ಪೊಲೀಸ್ ವಶಕ್ಕೆ

ಗಂಗಾವತಿ, ಫೆ. 18: ಆನೆಗೊಂದಿ ಉತ್ಸವದಲ್ಲಿ ಕವನ ವಾಚನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿ ಇಂದು ಗಂಗಾವತಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ನ್ಯಾಯಾಲಯ ಮಧ್ಯಂತರ ಜಾಮೀನನ್ನು ತಿರಸ್ಕರಿಸಿ, ಫೆ.19ರ ಮಧ್ಯಾಹ್ನ 2 ಗಂಟೆವರೆಗೆ ಪೊಲೀಸ್ ವಶಕ್ಕೆ ನೀಡಿದೆ. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಜ.9-10 ರಂದು ಆಯೋಜಿಸಿದ್ದ ಆನೆಗೊಂದಿ ಉತ್ಸವದಲ್ಲಿ ಸಿರಾಜ್ ಬಿಸರಳ್ಳಿ ಕವನ ವಾಚಿಸಿದ್ದರು. ಇದೇ ಕವನವನ್ನು ಸಾಮಾಜಿಕ ಜಾಲತಾಣದಲ್ಲಿ ಕನ್ನಡ ನೆಟ್.ಕಾಂನ ರಾಜಬಕ್ಷಿ ಎಂಬುವವರು ಹಂಚಿಕೊಂಡಿದ್ದರು.

ಈ ಕವನ ಸಿಎಎಗೆ ಪ್ರಧಾನಿ ಯಾವಾಗ ದಾಖಲೆಗಳನ್ನು ಒದಗಿಸುತ್ತಾರೆ ಎಂಬ ಊಹಾತ್ಮಕ ಪ್ರಶ್ನೆಯನ್ನು ಎತ್ತುತ್ತದೆ, ಸರಕಾರಿ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡು ದೇಶವಿರೋಧಿ ಹಾಡು ರಚಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ನಡುವೆ, ಫೆ. 16ರಂದು ಅಖಿಲ ಭಾರತೀಯ ವಕೀಲರ ಒಕ್ಕೂಟ ಕೊಪ್ಪಳದ ಸಿರಾಜ್ ಮತ್ತು ರಾಜಬಕ್ಷಿಯವರ ಮನೆಗೆ ತೆರಳಿ, ಸತ್ಯಶೋಧನೆ ನಡೆಸಿತ್ತು. ವಕೀಲರ ತಂಡವು ಸುದ್ದಿಗೋಷ್ಠಿಯಲ್ಲಿ ಕವಿತೆಯ ಮೇಲೆ ಕೇಸ್ ಹಾಕುವುದು ಸಂವಿಧಾನ ವಿರೋಧಿಯಾದುದು ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ಆನೆಗೊಂದಿ ಉತ್ಸವದಲ್ಲಿ ಜರುಗಿದ ಕವಿಗೋಷ್ಠಿಯಲ್ಲಿ ಕವಿತೆ ಓದಿದ್ದಕ್ಕಾಗಿ ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿ ಹಾಗೂ ಕನ್ನಡ ನೆಟ್.ಕಾಂನ ಸಂಪಾದಕರಾದ ರಾಜಬಕ್ಷಿ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣವನ್ನು ರಾಜ್ಯ ಸರಕಾರ ಈ ಕೂಡಲೇ ಹಿಂಪಡೆಯಬೇಕೆಂದು ಅಖಿಲ ಭಾರತೀಯ ವಕೀಲರ ಒಕ್ಕೂಟ ಆಗ್ರಹಿಸಿತ್ತು.

ಇಂದು ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿ ಗಂಗಾವತಿ ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಲಯ ಫೆ.19ರ ಮಧ್ಯಾಹ್ನ 2 ಗಂಟೆವರೆಗೆ ಪೊಲೀಸ್ ವಶಕ್ಕೆ ನೀಡಿ, ಮಧ್ಯಂತರ ಜಾಮೀನನ್ನು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X