Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಲ್ವಾಮ ದಾಳಿ: ಮೃತ ಯೋಧರ ಹೆಸರುಗಳು,...

ಪುಲ್ವಾಮ ದಾಳಿ: ಮೃತ ಯೋಧರ ಹೆಸರುಗಳು, ತನಿಖಾ ವರದಿ ಬಹಿರಂಗಪಡಿಸಲು ಕೇಂದ್ರ ಸರಕಾರ ನಕಾರ

ಆರ್‌ಟಿಐ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ18 Feb 2020 10:57 PM IST
share
ಪುಲ್ವಾಮ ದಾಳಿ: ಮೃತ ಯೋಧರ ಹೆಸರುಗಳು, ತನಿಖಾ ವರದಿ ಬಹಿರಂಗಪಡಿಸಲು ಕೇಂದ್ರ ಸರಕಾರ ನಕಾರ

ಪಾಣಿಪಾತ್, ಫೆ. 18: ಕಳೆದ ವರ್ಷ ಫೆಬ್ರವರಿ 14ರಂದು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯ 40 ಯೋಧರ ಸಾವಿಗೆ ಕಾರಣವಾದ ಪುಲ್ವಾಮ ಭಯೋತ್ಪಾದಕ ದಾಳಿಯ ತನಿಖಾ ವರದಿ ಬಹಿರಂಗಪಡಿಸಲು ಕೇಂದ್ರ ಸರಕಾರ ನಿರಾಕರಿಸಿದೆ.

 ಜಮ್ಮು ಹಾಗೂ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಯೋಧರು ಮೃತಪಟ್ಟ ಬಗ್ಗೆ ಮಾಹಿತಿ ಕೋರಿ ಪಾಣಿಪತ್ ಮೂಲದ ಆರ್‌ಟಿಐ ಕಾರ್ಯಕರ್ತ ಪಿ.ಪಿ. ಕಪೂರ್ ಮನವಿ ಸಲ್ಲಿಸಿದ್ದರು. ಆದರೆ, ಈ ಮನವಿಗೆ ಮಾಹಿತಿ ನೀಡಲು ಕೇಂದ್ರ ಗೃಹ ಸಚಿವಾಲಯ ನಿರಾಕರಿಸಿದೆ. ಯೋಧರ ಹೆಸರು ಬಹಿರಂಗಪಡಿಸಲು ಅಥವಾ ಅವರನ್ನು ಹುತಾತ್ಮರನ್ನು ಎಂದು ಪರಿಗಣಿಸಲಾಗಿದೆಯೇ ? ಇಲ್ಲವೇ ? ಎಂಬುದರ ಬಗ್ಗೆ ಮಾಹಿತಿ ನೀಡಲು ಕೇಂದ್ರ ಸರಕಾರ ನಿರಾಕರಿಸಿದೆ. ಮೃತಪಟ್ಟ ಯೋಧರ ಕುಟುಂಬಕ್ಕೆ ನೀಡಲಾದ ಎಲ್ಲಾ ವಿಧದ ನೆರವುಗಳ ಬಗ್ಗೆ ಮಾಹಿತಿ ಬಹಿರಂಗಪಡಿಸಲು ಕೂಡ ಅದು ನಿರಾಕರಿಸಿದೆ.

ಪಿ.ಪಿ. ಕಪೂರ್ ಅವರು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಸಿಆರ್‌ಪಿಎಫ್‌ನ ಪ್ರಧಾನ ನಿರ್ದೇಶಕರಿಗೆ ಎರಡು ಭಿನ್ನ ಅರ್ಜಿಗಳನ್ನು ಜನವರಿ 9 ಹಾಗೂ 10ರಂದು ಸಲ್ಲಿಸಿದ್ದರು. ಮೃತಪಟ್ಟ ಯೋಧನ ಹೆಸರು ಹಾಗೂ ಪದನಾಮ, ತನಿಖಾ ವರದಿಯ ಪ್ರತಿ ಹಾಗೂ ತನಿಖೆಯಲ್ಲಿ ತಪ್ಪೆಸಗಿದ ಅಧಿಕಾರಿಗಳ ಮಾಹಿತಿ ಸೇರಿದಂತೆ ಐದು ಅಂಶಗಳ ಮಾಹಿತಿಯನ್ನು ಅವರು ಕೋರಿದ್ದರು. ಸಿಆರ್‌ಪಿಎಫ್ ನಿರ್ದೇಶನಾಲಯ (ಆಡಳಿತ)ದ ಡಿಐಜಿ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿ ರಾಕೇಶ್ ಸೇಥಿ ಅವರು ತನ್ನ 2020 ಜನವರಿಯ ಪ್ರತಿಕ್ರಿಯೆಯಲ್ಲಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಅಧ್ಯಾಯ-6ರ ಪ್ಯಾರಾ-24 (1)ರ ನಿಯಮದಂತೆ ಮಾಹಿತಿ ನೀಡದೇ ಇರುವುದಕ್ಕೆ ಭ್ರಷ್ಟಾಚಾರ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಹೊರತುಪಡಿಸಿ ಯಾವುದೇ ರೀತಿಯ ಮಾಹಿತಿಗಳನ್ನು ನೀಡುವುದರಿಂದ ಸಿಆರ್‌ಪಿಎಫ್‌ಗೆ ವಿನಾಯತಿ ಇರುವುದೇ ಮುಖ್ಯ ಕಾರಣ ಎಂದು ಸಿಆರ್‌ಪಿಎಫ್ ಪ್ರತಿಕ್ರಿಯೆಯಲ್ಲಿ ಉಲ್ಲೇಖಿಸಿದೆ ಎಂದು ಕಪೂರ್ ಹೇಳಿದ್ದಾರೆ.

‘‘ಕೇಂದ್ರ ಸರಕಾರ ತನ್ನ ವಿಫಲತೆ ಮರೆಮಾಚಲು ಬಯಸುತ್ತಿದೆ. ಒಂದೆಡೆ ದೇಶವನ್ನು ರಕ್ಷಿಸಲು 40 ಭಾರತೀಯ ಯೋಧರು ಪ್ರಾಣ ಅರ್ಪಿಸಿದರು ಎಂದು ಹೇಳುತ್ತದೆ. ಇನ್ನೊಂದೆಡೆ ಯೋಧರ ಹೆಸರನ್ನು ಉಲ್ಲೇಖಿಸಲು ಕೂಡ ಸರಕಾರ ಸಿದ್ಧರಿಲ್ಲ’’ ಎಂದು ಅವರು ಹೇಳಿದ್ದಾರೆ. ಪುಲ್ವಾಮ ದಾಳಿ ನೇರವಾಗಿ ಭ್ರಷ್ಟಾಚಾರ ಹಾಗೂ ಸಿಆರ್‌ಪಿಎಫ್ ಯೋಧರ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣ. ಆದುದರಿಂದ ಅಧಿಕಾರಿಗಳು ಮಾಹಿತಿ ನೀಡಲು ನಿರಾಕರಿಸುತ್ತಿದ್ದಾರೆ. ವರದಿಯಾಗಿರುವುದಕ್ಕಿಂತ ಹೆಚ್ಚಿನ ಯೋಧರು ಮೃತಪಟ್ಟಿರುವುದೇ ಮಾಹಿತಿ ನೀಡದೇ ಇರಲು ಕಾರಣವಿರಬಹುದು ಎಂದು ಕಪೂರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X