Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಲ ವಿಜ್ಞಾನದ ಗಡಿಗಳನ್ನು ಅಳಿಸಿದ...

ಮೂಲ ವಿಜ್ಞಾನದ ಗಡಿಗಳನ್ನು ಅಳಿಸಿದ ನ್ಯಾನೋ ತಂತ್ರಜ್ಞಾನ: ಡಾ.ಸುರೇಶ್ ಕುಲಕರ್ಣಿ

ವಾರ್ತಾಭಾರತಿವಾರ್ತಾಭಾರತಿ19 Feb 2020 9:41 PM IST
share
ಮೂಲ ವಿಜ್ಞಾನದ ಗಡಿಗಳನ್ನು ಅಳಿಸಿದ ನ್ಯಾನೋ ತಂತ್ರಜ್ಞಾನ: ಡಾ.ಸುರೇಶ್ ಕುಲಕರ್ಣಿ

ಉಡುಪಿ, ಫೆ.19: ನ್ಯಾನೋ ತಂತ್ರಜ್ಞಾನ ಸಾಧಿಸಿದ ಅಪಾರ ಪ್ರಗತಿಯಿಂದ ಇಂದು ಮೂಲ ವಿಜ್ಞಾನದ ವಿವಿಧ ಶಾಖೆಗಳ ನಡುವಿನ ಗಡಿಯೇ ಅಳಿಯುವಂತಾಗಿದೆ ಎಂದು ಮಾಹೆಯ ಅಟೋಮಿಕ್ ಎಂಡ್ ನ್ಯೂಕ್ಲಿಯರ್ ಎನರ್ಜಿಯ ಅಸೋಸಿಯೇಟ್ ಪ್ರೊಪೆಸರ್ ಡಾ.ಸುರೇಶ್ ಕುಲಕರ್ಣಿ ಹೇಳಿದ್ದಾರೆ.

ಉಡುಪಿ ಎಂ.ಜಿ.ಎಂ.ಕಾಲೇಜಿನ ರಸಾಯನ ಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ, ಮಂಗಳೂರಿನ ಅಸೋಸಿಯೇಷನ್ ಆಫ್ ಕೆಮೆಸ್ಟ್ರಿ ಟೀಚರ್ಸ್‌ (ಎಸಿಟಿ)ನ ಸಹಯೋಗದೊಂದಿಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದ ‘ಸುಸ್ಥಿರ ಅಭಿವೃದ್ಧಿಯಲ್ಲಿ ನ್ಯಾನೋ ಟೆಕ್ನಾಲಜಿ ಮತ್ತು ಪರಿಸರ ರಸಾಯನಶಾಸ್ತ್ರಗಳ ಇತ್ತೀಚಿನ ಬೆಳವಣಿಗೆ’ ವಿಷಯದ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಶಿಖರೋಪನ್ಯಾಸ ನೀಡಿ ಮಾತನಾಡುತಿದ್ದರು.

ಹಿಂದೆಲ್ಲಾ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ, ಸಸ್ಯಶಾಸ್ತ್ರಗಳೆಲ್ಲವೂ ಪ್ರತ್ಯೇಕ ವೆಂಬಂತಿದ್ದು, ಇಂದು ನ್ಯಾನೋ ಟೆಕ್ನಾಲಜಿಯಿಂದಾಗಿ ಅವುಗಳ ನಡುವಿನ ಗಡಿ ಅಳಿಯುವಂತಾಗಿದೆ. ವಿಜ್ಞಾನಕ್ಕಿಂದು ಗಡಿಗಳಿಲ್ಲ ಎಂದು ಹೇಳಬಹುದು. ಅದೀಗ ಅಂತರ್‌ಶಿಸ್ತಿನ ವಿಷಯವಾಗಿ ಪರಿಗಣಿತವಾಗಿದೆ ಎಂದು ಡಾ.ಕುಲಕರ್ಣಿ ಅಭಿಪ್ರಾಯಪಟ್ಟರು.

ಇಂದು ದೈನಂದಿನ ಬಳಕೆಯಲ್ಲಿ 500ಕ್ಕೂ ಅಧಿಕ ನೊಂದಾಯಿತ ನ್ಯಾನೋ ಬಳಕೆಯ ಉತ್ಪನ್ನಗಳು ಇದ್ದು, ಶುದ್ಧ ಕುಡಿಯುವ ನೀರಿನಿಂದ ಹಿಡಿದು ಎಲ್‌ಇಡಿ ಬೆಳಕಿನವರೆಗೆ ನ್ಯಾನೋ ತಂತ್ರಜ್ಞಾನ ನಮ್ಮ ದೈನಂದಿನ ಬಳಕೆಯಲ್ಲಿ ಉಪಯೋಗವಾಗುತ್ತಿದೆ. ನ್ಯಾನೋ ತಂತ್ರಜ್ಞಾನದ ನಡೆಯುತ್ತಿರುವ ಹೊಸ ಹೊಸ ಸಂಶೋಧನೆಗಳು ನಮ್ಮ ಬದುಕಿನ ದಿಕ್ಕನ್ನೇ ಬದಲಿಸುವ ಸಾಮರ್ಥ್ಯ ಹೊಂದಿದೆ ಎಂದರು.

ವಿಚಾರ ಸಂಕಿರಣವನ್ನು ಉದ್ಘಾಟಿಸಿದ ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು ಮಾತನಾಡಿ, ಇಂದು ಪ್ರತಿಯೊಂದು ತಂತ್ರಜ್ಞಾನವೂ ವೇಗವಾಗಿ ಬದಲಾವಣೆಗೊಳ್ಳುತ್ತಿದೆ. ಇವುಗಳಲ್ಲಿ ನ್ಯಾನೋ ತಂತ್ರಜ್ಞಾನ ಹೊಸ ಕ್ರಾಂತಿಕಾರಿ ಬದಲಾವಣೆಗೆ ಕಾರಣ ವಾಗುತ್ತಿವೆ. 1974ರಲ್ಲಿ ಜಪಾನಿನಲ್ಲಿ ಮೊದಲ ಬಾರಿ ಕಂಡುಹಿಡಿದ ನ್ಯಾನೋ ಟೆಕ್ನಾಲಜಿ ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಊಹಿಸಲಾರದಷ್ಟು ಬದಲಾವಣೆಗೆ ಕಾರಣವಾಗುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಹೆಯ ರಿಜಿಸ್ಟ್ರಾರ್ ಡಾ.ನಾರಾಯಣ ಸಭಾಹಿತ್ ಮಾತನಾಡಿ, ಇಂದು ವಿಶ್ವದಲ್ಲೇ ಪರಿಸರ ಭಾರೀ ಅಪಾಯವನ್ನು ಎದುರಿಸುತ್ತಿದೆ. ವಿಶ್ವದ ಶೇ.10ರಷ್ಟು ಶ್ರೀಮಂತರು ಭೂಮಿ ಮೇಲಿನ ಶೇ.50ರಷ್ಟು ಸಂಪನ್ಮೂಲಗಳನ್ನು ಬಳಸಿದರೆ, ಇನ್ನುಳಿದ ಶೇ.90ರಷ್ಟು ಮಂದಿ ಉಳಿದ ಶೇ.50ನ್ನು ಬಳಸಬೇಕಾಗಿದೆ. ಇದು ಸಂಪನ್ಮೂಲ ಬಳಕೆಯಲ್ಲಿ ಅಸಮಾನತೆಗೆ ಕಾರಣವಾಗಿದ್ದು, ಪರಿಸರದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಇದರೊಂದಿಗೆ ತ್ಯಾಜ್ಯ ನೀರಿನ ಮರುಬಳಕೆಯೂ ಅಸಮರ್ಪಕತೆಯಿಂದ ಗಂಭೀರ ಸಮಸ್ಯೆಗೆ ಕಾರಣವಾಗಿದೆ ಎಂದರು.

ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಜಿ.ವಿಜಯ ಅಧ್ಯಕ್ಷತೆ ವಹಿಸಿದ್ದರು. ಎಂಜಿಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಾಲತಿ ದೇವಿ ಉಪಸ್ಥಿತರಿದ್ದರು. ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಕಮಲೇಶ್ ಶೆಣೈ ಅವರನ್ನು ಕಾೇಜಿನ ವತಿಯಿಂದ ಸನ್ಮಾನಿಸಲಾಯಿತು.

ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಅರುಣ್‌ಕುಮಾರ್ ಬಿ. ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೊ.ಕೆ. ಭಾಸ್ಕರ ಆಚಾರ್ಯ ವಂದಿಸಿ ವಿದ್ಯಾರ್ಥಿನಿ ಚೈತ್ರ ಪೈ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X