Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಬೃಹತ್ ಉದ್ಯೋಗ ಮೇಳಕ್ಕೆ ಬಾರದ...

ಮೈಸೂರು: ಬೃಹತ್ ಉದ್ಯೋಗ ಮೇಳಕ್ಕೆ ಬಾರದ ಕಂಪೆನಿಗಳು; ನಿರಾಸೆಯಿಂದ ಉದ್ಯೋಗಾಕಾಂಕ್ಷಿಗಳು ವಾಪಸ್

ನೇರಳೆ ಸತೀಶ್ ಕುಮಾರ್ನೇರಳೆ ಸತೀಶ್ ಕುಮಾರ್19 Feb 2020 11:13 PM IST
share
ಮೈಸೂರು: ಬೃಹತ್ ಉದ್ಯೋಗ ಮೇಳಕ್ಕೆ ಬಾರದ ಕಂಪೆನಿಗಳು; ನಿರಾಸೆಯಿಂದ ಉದ್ಯೋಗಾಕಾಂಕ್ಷಿಗಳು ವಾಪಸ್

ಮೈಸೂರು,ಫೆ.19: ನಗರದಲ್ಲಿ ನಡೆದ ಬೃಹತ್ ಉದ್ಯೋಗ ಮೇಳಕ್ಕೆ ಉದ್ಯೋಗಾಕಾಂಕ್ಷಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದರಾದರೂ ಅವಕಾಶ ನೀಡುವ ಪ್ರತಿಷ್ಠಿತ ಕಂಪನಿಗಳು ಗೈರಾಗುವ ಮೂಲಕ ನಿರಾಸೆಯನ್ನುಂಟು ಮಾಡಿದವು.

ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಬುಧವಾರ ಮತ್ತು ಗುರುವಾರ ಕೌಶಲಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಉದ್ಯೋಗ ಮೇಳಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಆಗಮಿಸಿದ್ದರು. ಬರೀ ಎಸೆಸೆಲ್ಸಿ, ಪಿಯುಸಿ, ಐಟಿಐ ಮತ್ತು ಡಿಪ್ಲೊಮೊ ವಿದ್ಯಾಭ್ಯಾಸ ಹೊಂದಿದ ವಿದ್ಯಾರ್ಥಿಗಳಿಗಷ್ಟೆ ಉದ್ಯೋಗದ ಮಾರ್ಗದರ್ಶನ ದೊರಕಿದ್ದು ಬಿಟ್ಟರೆ  ಸ್ನಾತಕೋತ್ತರ ಅಧ್ಯಯನ ಮಾಡಿ ಅನುಭವ ಪಡೆದಿರುವ ಉದ್ಯೋಗಕಾಂಕ್ಷಿಗಳಿಗೆ ಅವಕಾಶವೇ ಇಲ್ಲದಂತೆ ಆಯಿತು.

ಜಿಲ್ಲಾಡಳಿತ ಸಾಕಷ್ಟು ಉತ್ಸಾಹದಲ್ಲಿ ಈ ಮೇಳವನ್ನು ಆಯೋಜಿಸಿತ್ತಾದರೂ ಸಂಬಂಧ ಪಟ್ಟ ಇಲಾಖೆ ಸಚಿವರುಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಗೈರಾಗುವ ಮೂಲಕ ನೆಪಮಾತ್ರಕ್ಕೆ ಉದ್ಯೋಗ ಮೇಳ ನಡೆದಿದೆ ಎಂದು ಅಲ್ಲಿಗೆ ಆಗಮಿಸಿದ್ದ ಉದ್ಯೋಗಾಕಾಂಕ್ಷಿಗಳ ಪೋಷಕರು ಹೇಳುತ್ತಿದ್ದುದು ಸಾಮಾನ್ಯವಾಗಿತ್ತು.

ಸಾಕಷ್ಟು ಮಳಿಗೆಗಳನ್ನು ತೆರೆಯಲಾಗಿತ್ತಾದರೂ, ಉದ್ಯೋಗಕಾಂಕ್ಷಿಗಳಿಂದ ದಾಖಲೆಗಳನ್ನು ಮಾತ್ರ ಪಡೆದು ನಿಮಗೆ ಕರೆ ಮಾಡುವುದಾಗಿ ಭಾಗವಹಿಸಿದ್ದ ಕೆಲವು ಕಂಪನಿಗಳು ಮತ್ತು ಸಂಸ್ಥೆಗಳು ಹೇಳುತ್ತಿದ್ದವು. ಬಿ.ಇ, ಎಂಟೆಕ್, ಎಂಎಸ್ಸಿ, ಎಂಬಿಎ, ಬಯೋಟೆಕ್ ಸೇರಿದಂತೆ ಅನೇಕ ಸ್ನಾತಕೋತ್ತರ ಪದವಿ ಪಡೆದ ಉದ್ಯೋಗಾಂಕ್ಷಿಗಳಿಗೆ ಉದ್ಯೋಗದ ಭರವಸೆಯಿರಲಿ, ಅವರ ಓದಿಗೆ ಬೆಲೆಯೇ ಇಲ್ಲದಂತೆ ವಾಪಸ್ ತೆರಳಿದರು.

ಈ ಸಂಬಂಧ ಮಾಧ್ಯಮದವರೊಂದಿಗೆ ಜಿ.ಪಂ. ಸಿಇಓ ಕೆ.ಜ್ಯೋತಿ ಮಾತನಾಡಿ, ನಾವು ಪ್ರತಿಷ್ಠಿತ ಕಂಪನಿಗಳಿಗೆ ಅಹ್ವಾನ ನೀಡಿದ್ದೆವು. ಅವರು ಗೈರಾಗಿದ್ದಾರೆ. ಬಲವಂತವಾಗಿ ನಾವು ಅವರನ್ನು ಉದ್ಯೋಗ ಕೊಡಿ ಎಂದು ಹೇಳಲು ಸಾಧ್ಯವಿಲ್ಲ. ಜಿಲ್ಲೆಯಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶವಿದೆ. ಆ ಹಿನ್ನಲೆಯನ್ನಿಟ್ಟುಕೊಂಡು ಅವರನ್ನು ಆಹ್ವಾನಿಸಿದ್ದೆವು. ಆವರು ಬಂದಿಲ್ಲ. ಇದು ನಮಗೆ ಮೊದಲ ಅನುಭವ, ಮುಂದೆ ಎಲ್ಲರೂ ಭಾಗವಹಿಸುವಂತೆ ನಿಗಾ ವಹಿಸಲಾಗುವುದು ಎಂದು ಹೇಳಿದರು.

ಉದ್ಯೋಗ ಮೇಳಗಳು ಆಗೊಮ್ಮೆ ಈಗೊಮ್ಮೆ ನಡೆದರೆ ಸಾಲದು, ಪ್ರತಿ ಆರು ತಿಂಗಳಿಗೊಮ್ಮೆ ಇಂತಹ ಉದ್ಯೋಗ ಮೇಳಗಳು ನಡೆದರೆ ನಿರುದ್ಯೋಗಿಗಳಿಗೆ ಆಶ್ರಯ ನೀಡಬಹುದು. ಅವರು ವಿದ್ಯಾಭ್ಯಾಸ ಮಾಡಿರುವ ತಕ್ಕಂತೆ ಉದ್ಯೋಗಳನ್ನು ನೀಡಬೇಕಾಗಿದೆ. ಜೊತೆಗೆ ಕಂಪನಿಗಳಿಗೆ ಬೇಕಾಗುವ ಅರ್ಹ ವಿದ್ಯಾಭ್ಯಾಸ ಹೊಂದಿರುವವರು ಈ ಮೇಳಗಳಲ್ಲಿ ಭಾಗವಹಿಸಬೇಕಾಗಿದೆ ಎಂದು ಹೇಳಿದರು.

ಹೆಸರು ಹೇಳಲು ಇಚ್ಚಿಸದ ಮತ್ತೊಬ್ಬ ಅಧಿಕಾರಿ ಮಾತನಾಡಿ, ಸಾಕಷ್ಟು ಉದ್ಯೋಗಗಳ ಅವಕಾಶ ಇದೆ. ಆದರೆ ಕಂಪನಿಗಳು ಮುಂದೆ ಬರುತ್ತಿಲ್ಲ, ಕಾರಣ ದೇಶದಲ್ಲಿ ಕುಸಿತಗೊಂಡಿರುವ ಆರ್ಥಿಕತೆ, ಜೊತೆಗೆ ಸಾಕಷ್ಟು ಸಂಖ್ಯೆಯಲ್ಲಿ ತೆರಿಗೆ ಸಂಗ್ರಹ, ಜಿಎಸ್‍ಟಿ ಹೊಡೆತ ಕೈಗಾರಿಕೆಗಳು ಮುಚ್ಚುವಂತಾಗಿದೆ. ನೂರು ಮಂದಿ ಕೆಲಸ ಮಾಡುತ್ತಿದ್ದ ಒಂದು ಕಂಪನಿಯಲ್ಲಿ ಈಗ ಕೇವಲ 20 ಮಂದಿಗೆ ಇಳಿಕೆಯಾಗಿದೆ. ಕೈಗಾರಿಕೆಗಳು ಉತ್ಪಾದನೆಯನ್ನು ಹೆಚ್ಚು ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಉದ್ಯೋಗಗಳು ಕಡಿಮೆಯಾಗುತ್ತಿವೆ. ಈ ಎಲ್ಲಾ ಬೆಳವಣಿಗೆಯಿಂದ ಸಾಕಷ್ಟು ಕೈಗಾರಿಗಕೆಗಳು ಈ ಮೇಳದಲ್ಲಿ ಭಾಗವಹಿಸಿಲ್ಲ ಎಂದು ಹೇಳಿದರು.

ಇದಕ್ಕೂ ಮೊದಲು ಉದ್ಯೋಗಮೇಳವನ್ನು ಜಿ.ಪಂ.ಅಧ್ಯಕ್ಷ ಪರಿಮಳಾ ಶ್ಯಾಂ ಉದ್ಘಾಟಸಿದರು. ಇದೇ ವೇಳೆ ಮೈಸೂರು ಮೇಯರ್ ತಸ್ನೀಂ, ಜಿ.ಪಂ. ಸಿಇಓ ಕೆ.ಜ್ಯೋತಿ, ಜಿ.ಪಂ.ಸದಸ್ಯೆ ಮಂಗಳಾ ಸೋಮಶೇಖರ್, ಕೌಶಲ್ಯಾಭಿವೃದ್ದಿ ಜಿಲ್ಲಾ ಅಧಿಕಾರಿ ಶಿವಣ್ಣ ಎನ್.ಎಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ನೇರಳೆ ಸತೀಶ್ ಕುಮಾರ್
ನೇರಳೆ ಸತೀಶ್ ಕುಮಾರ್
Next Story
X