Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3,000 ಕೋ.ರೂ. ವೆಚ್ಚದಲ್ಲಿ 50 ಕೋಟಿ ಸಸಿ...

3,000 ಕೋ.ರೂ. ವೆಚ್ಚದಲ್ಲಿ 50 ಕೋಟಿ ಸಸಿ ನೆಟ್ಟಿದ್ದೇವೆ ಎಂದಿದ್ದ ಬಿಜೆಪಿ ಸರಕಾರ: ತನಿಖೆಗೆ ಆದೇಶಿಸಿದ ಉದ್ಧವ್

ವಾರ್ತಾಭಾರತಿವಾರ್ತಾಭಾರತಿ20 Feb 2020 4:58 PM IST
share
3,000 ಕೋ.ರೂ. ವೆಚ್ಚದಲ್ಲಿ 50 ಕೋಟಿ ಸಸಿ ನೆಟ್ಟಿದ್ದೇವೆ ಎಂದಿದ್ದ ಬಿಜೆಪಿ ಸರಕಾರ: ತನಿಖೆಗೆ ಆದೇಶಿಸಿದ ಉದ್ಧವ್

ಮುಂಬೈ: ತನ್ನ ಆಡಳಿತಾವಧಿಯಲ್ಲಿ ರಾಜ್ಯಾದ್ಯಂತ 3,000 ಕೋಟಿ ರೂ. ವೆಚ್ಚದಲ್ಲಿ 50 ಕೋಟಿ ಮರಗಳನ್ನು ನೆಡಲಾಗಿದೆ ಎಂಬ ಹಿಂದಿನ ಬಿಜೆಪಿ ಸರಕಾರದ ಹೇಳಿಕೆಯನ್ನು ದೃಢೀಕರಿಸಲು ಮಹಾರಾಷ್ಟ್ರ ಅರಣ್ಯ ಇಲಾಖೆಯು ಸರಕಾರದ ನಿರ್ದೇಶನದನ್ವಯ ತನಿಖೆ ನಡೆಸಲಿದೆ.

ಹಿಂದಿನ ಫಡ್ನವೀಸ್ ಸರಕಾರ 2016ರಲ್ಲಿ ಹರಿತ್ ಮಹಾರಾಷ್ಟ್ರ (ಹಸಿರು ಮಹಾರಾಷ್ಟ್ರ) ಅರಣ್ಯೀಕರಣ ಯೋಜನೆಯನ್ನು ಆರಂಭಿಸಿತ್ತು. ನಾಲ್ಕು ವರ್ಷಗಳಲ್ಲಿ 50 ಕೋಟಿ ಗಿಡಗಳನ್ನು ನೆಡುವ ಗುರಿ ಈ ಯೋಜನೆಯದ್ದಾಗಿತ್ತು. ಆಗಿನ ಅರಣ್ಯ ಸಚಿವ  ಸುಧೀರ್ ಮುಂಗಂತಿವರ್ ಅವರ ನೇತೃತ್ವದಲ್ಲಿ ಜಾರಿಯಾದ ಈ ಯೋಜನೆಯ ಬ್ರಾಂಡ್ ಅಂಬಾಸಿಡರ್ ಆಗಿ ಹಿರಿಯ ನಟ ಅಮಿತಾಭ್ ಬಚ್ಚನ್ ಇದ್ದರು.

ಆದರೆ ಈ ಯೋಜನೆಯಡಿ ಎಲ್ಲೆಲ್ಲಾ ಗಿಡಗಳನ್ನು ನೆಡಲಾಗಿದೆ ಎಂದು ತನಿಖೆ ನಡೆಸಲು ಈಗಿನ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರಕಾರ ಉಪಗ್ರಹ ಚಿತ್ರಗಳನ್ನು ಬಳಸಲಿದೆ.

ಈ ಯೋಜನೆಯಡಿ ನಿಜವಾಗಿಯೂ ನೆಡಲಾದ ಗಿಡಗಳ ಸಂಖ್ಯೆಯ ಕುರಿತಂತೆ ಕೆಲ ಹಾಲಿ ಹಾಗೂ ಮಾಜಿ ಸಚಿವರುಗಳಿಂದ ಬಂದ ದೂರಿನನ್ವಯ ತನಿಖೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಸಚಿವ ಸಂಜಯ್ ರಾಥೋಡ್ ಹೇಳಿದ್ದಾರೆ. ಈ ಯೋಜನೆಯಡಿ ಎಷ್ಟು ಹಣ ವ್ಯಯಿಸಲಾಗಿದೆ ಎಂದೂ ತಿಳಿಯಲು ಸರಕಾರ ಮನಸ್ಸು ಮಾಡಿದೆ.

ಮಾಜಿ ಅರಣ್ಯ ಸಚಿವ ಮುಂಗಂತಿವರ್ ಈಗಿನ ಸರಕಾರ ತನಿಖೆ ನಡೆಸಲು ತೀರ್ಮಾನಿಸಿರುವುದನ್ನು ಸ್ವಾಗತಿಸಿದರಾದರೂ ಶ್ವೇತಪತ್ರ ಹೊರತರಬೇಕೆಂದು ಸಲಹೆ ನೀಡಿದ್ದಾರೆ. ತನಿಖೆಯನ್ನು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಮುಖಾಂತರ ನಡೆಸಬೇಕೆಂದೂ ಆವರು ಆಗ್ರಹಿಸಿದ್ದಾರೆ.

ಹಿಂದಿನ ಫಡ್ನವೀಸ್ ಸರಕಾರದ ಅಂಕಿಅಂಶಗಳಂತೆ ಮೊದಲ ವರ್ಷದಲ್ಲಿ 2 ಕೋಟಿ ಸಸಿ ನೆಡುವ ಗುರಿಯಿದ್ದರೆ, 2.82 ಕೋಟಿ ಸಸಿಗಳನ್ನು ನೆಡಲಾಗಿತ್ತು. ಎರಡನೇ ವರ್ಷದಲ್ಲಿ 4 ಕೋಟಿ ಗುರಿ ನಿಗದಿಯಾಗಿದ್ದರೆ 5.17 ಕೋಟಿ ಸಸಿಗಳನ್ನು ಹಾಗೂ 2018ರಲ್ಲಿ 15.17 ಕೋಟಿ ಸಸಿಗಳನ್ನು ನೆಡಲಾಗಿತ್ತೆಂದು ಸರಕಾರಿ ದಾಖಲೆಗಳು ತಿಳಿಸುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X