Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಡೈಮಂಡ್ ಪ್ರಿನ್ಸೆಸ್’ ಹಡಗಿನಲ್ಲಿದ್ದ...

‘ಡೈಮಂಡ್ ಪ್ರಿನ್ಸೆಸ್’ ಹಡಗಿನಲ್ಲಿದ್ದ ವೃದ್ಧ ದಂಪತಿ ಸಾವು

ವಾರ್ತಾಭಾರತಿವಾರ್ತಾಭಾರತಿ20 Feb 2020 11:20 PM IST
share
‘ಡೈಮಂಡ್ ಪ್ರಿನ್ಸೆಸ್’ ಹಡಗಿನಲ್ಲಿದ್ದ ವೃದ್ಧ ದಂಪತಿ ಸಾವು

ಟೋಕಿಯೊ (ಜಪಾನ್), ಫೆ. 20: ಜಪಾನ್‌ನಲ್ಲಿ ದಿಗ್ಬಂಧನದಲ್ಲಿರುವ ಕೊರೋನವೈರಸ್ ಪೀಡಿತ ಪ್ರವಾಸಿ ಹಡಗಿನ ಇಬ್ಬರು ಮಾಜಿ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಗುರುವಾರ ವರದಿ ಮಾಡಿವೆ.

ಮೃತಪಟ್ಟವರು 80 ವರ್ಷ ದಾಟಿರುವ ಓರ್ವ ಪುರುಷ ಮತ್ತು ಓರ್ವ ಮಹಿಳೆ ಎಂದು ಸರಕಾರಿ ಟಿವಿ ಎನ್‌ಎಚ್‌ಕೆ ಮತ್ತು ಇತರ ಮಾಧ್ಯಮಗಳು ಹೇಳಿವೆ. ‘ಡೈಮಂಡ್ ಪ್ರಿನ್ಸೆಸ್’ ಹಡಗಿನಲ್ಲಿ ಪತ್ತೆಯಾಗಿರುವ 600ಕ್ಕೂ ಅಧಿಕ ಕೊರೋನವೈರಸ್ ಸೊಂಕು ಪ್ರಕರಣಗಳ ಪೈಕಿ ಮೊದಲ ಸಾವಿನ ಪ್ರಕರಣ ಇದಾಗಿದೆ.

ಅವರು ಗಂಡ-ಹೆಂಡತಿಯರಾಗಿದ್ದು, ಇಬ್ಬರಲ್ಲೂ ಸೋಂಕಿಗೆ ಸಂಬಂಧಿಸಿದ ಲಕ್ಷಣಗಳು ಕಾಣಿಸಿಕೊಂಡಿದ್ದವು ಹಾಗೂ ಅವರನ್ನು ಫೆಬ್ರವರಿ 11 ಮತ್ತು 12ರಂದು ಹಡಗಿನಿಂದ ಕೆಳಗೆ ತಂದು ಆಸ್ಪತ್ರೆಗೆ ಸೇರಿಸಲಾಗಿತ್ತು.

ಹಡಗಿನಿಂದ ‘ಸ್ವಾತಂತ್ರ್ಯ’ದತ್ತ ಪ್ರವಾಸಿಗರು

ಕೊರೋನವೈರಸ್ ಪೀಡಿತ ‘ಡೈಮಂಡ್ ಪ್ರಿನ್ಸೆಸ್’ ಹಡಗಿನಿಂದ ಬುಧವಾರ 443 ಪ್ರಯಾಣಿಕರು ಹೊರಹೋಗಿದ್ದಾರೆ. 14 ದಿನಗಳ ದಿಗ್ಬಂಧನ ಅವಧಿಯಲ್ಲಿ ರೋಗಲಕ್ಷಣಗಳನ್ನು ತೋರಿಸದ ಹಾಗೂ ಕೋವಿಡ್-19 ಸೋಂಕು ಪತ್ತೆಯಾಗದ ಪ್ರಯಾಣಿಕರಿಗೆ ಹಡಗಿನಿಂದ ಹೊರಹೋಗಲು ಜಪಾನ್ ಸರಕಾರ ಅನುಮತಿ ನೀಡಿದೆ.

ಹಡಗಿನಿಂದ ಎಲ್ಲ ಪ್ರಯಾಣಿಕರನ್ನು ಹೊರ ಕಳುಹಿಸಲು ಕನಿಷ್ಠ ಮೂರು ದಿನಗಳು ಬೇಕಾಗಬಹುದು ಎಂದು ನಿರೀಕ್ಷಿಸಲಾಗಿದೆ.

 ಗುರುವಾರ ಪ್ರಯಾಣಿಕರ ಇನ್ನೂ ಒಂದು ತಂಡವು ಹಡಗಿನಿಂದ ಹೊರಬಿದ್ದಿದೆ. ಪ್ರವಾಸಿಗರನ್ನು ಹೊತ್ತ ಹಳದಿ ಬಸ್‌ಗಳು ರೈಲು ನಿಲ್ದಾಣಗಳು ಮತ್ತು ವಿಮಾನ ನಿಲ್ದಾಣಗಳಿಗೆ ತೆರಳಿವೆ.

ಪ್ರವಾಸಿಗರನ್ನು ತಿರುಗಾಡಲು ಬಿಟ್ಟಿರುವುದಕ್ಕೆ ಆಕ್ಷೇಪ

ಕೊರೋನವೈರಸ್ ಸೋಂಕಿರದ ‘ಡೈಮಂಡ್ ಪ್ರಿನ್ಸೆಸ್’ ಹಡಗಿನ ಪ್ರಯಾಣಿಕರನ್ನು ಜಪಾನ್‌ನ ಪ್ರಸಿದ್ಧ ನಗರಗಳಲ್ಲಿ ಮುಕ್ತವಾಗಿ ತಿರುಗಾಡಲು ಬಿಟ್ಟಿರುವುದನ್ನು ಪ್ರಶ್ನಿಸಲಾಗುತ್ತಿದೆ.

‘‘ಹಡಗಿನಿಂದ ಹೊರಗೆ ಬಂದಿರುವುದು ನಿಜಕ್ಕೂ ಸುರಕ್ಷಿತವೇ?’’ ಎಂದು ‘ನಿಕ್ಕಾನ್ ಸ್ಪೋರ್ಟ್ಸ್’ ಟ್ಯಾಬ್ಲಾಯಿಡ್‌ನ ವರದಿಯೊಂದು ಪ್ರಶ್ನಿಸಿದೆ.

ಫೆಬ್ರವರಿ 15ರಂದು ನನ್ನನ್ನು ತಪಾಸಣೆಗೆ ಒಳಪಡಿಸಿದರು ಹಾಗೂ ನಾಲ್ಕು ದಿನಗಳ ಬಳಿಕ ಹೊರಗೆ ಬಿಟ್ಟರು ಎಂಬುದಾಗಿ ಪ್ರಯಾಣಿಕರೊಬ್ಬರು ಹೇಳಿರುವುದನ್ನು ಪತ್ರಿಕೆ ಉಲ್ಲೇಖಿಸಿದೆ.

‘‘ಈ ನಾಲ್ಕು ದಿನಗಳ ಅವಧಿಯಲ್ಲಿ ನನಗೆ ಸೋಂಕು ತಗಲಿರುವ ಸಾಧ್ಯತೆಯಿದೆ ಎಂದು ನನಗನಿಸುತ್ತದೆ. ‘ಇದು ಸರಿಯೇ?’ ಎಂದು ನಾನು ಯೋಚಿಸುತ್ತಿದ್ದೇನೆ ಎಂದು ಆ ಪ್ರಯಾಣಿಕ ಹೇಳಿದ್ದಾರೆ ಎಂದು ‘ನಿಕ್ಕಾನ್ ಸ್ಪೋರ್ಟ್ಸ್’ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X