Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಪಾಕಿಸ್ತಾನ ಝಿಂದಾಬಾದ್' ಘೋಷಣೆ: ಅಮೂಲ್ಯ...

'ಪಾಕಿಸ್ತಾನ ಝಿಂದಾಬಾದ್' ಘೋಷಣೆ: ಅಮೂಲ್ಯ ಮನೆಗೆ ವಿಹಿಂಪ ಮುತ್ತಿಗೆ

ಅಮೂಲ್ಯ ವಿರುದ್ಧ ತಂದೆ ವಾಜೀ ಹೇಳಿಕೆ ವಿಡಿಯೋ ಮಾಡಿದ ಕಾರ್ಯಕರ್ತರು

ವಾರ್ತಾಭಾರತಿವಾರ್ತಾಭಾರತಿ20 Feb 2020 11:46 PM IST
share
ಪಾಕಿಸ್ತಾನ ಝಿಂದಾಬಾದ್ ಘೋಷಣೆ: ಅಮೂಲ್ಯ ಮನೆಗೆ ವಿಹಿಂಪ ಮುತ್ತಿಗೆ

ಚಿಕ್ಕಮಗಳೂರು, ಫೆ.20: ಬೆಂಗಳೂರಿನ ಪ್ರೀಡಂ ಪಾರ್ಕ್‍ನಲ್ಲಿ ವಿವಿಧ ಸಂಘಟನೆಗಳು ಆಯೋಜಿಸಿದ್ದ ಸಿಎಎ ಮತ್ತು ಎನ್‍ಆರ್ ಸಿ ಪ್ರತಿಭಟನೆಯಲ್ಲಿ 'ಪಾಕಿಸ್ತಾನ ಝಿಂದಾಬಾದ್' ಎಂದು ಘೋಷಣೆ ಕೂಗಿದ ಕೊಪ್ಪ ಮೂಲದ ವಿದ್ಯಾರ್ಥಿನಿ ಅಮೂಲ್ಯ ಲಿಯೋನ ಅವರ ತಂದೆ ವಾಜೀ ಮನೆಗೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ತೆರಳಿ ಮುತ್ತಿಗೆ ಹಾಕಿದ ಘಟನೆ ಗುರುವಾರ ರಾತ್ರಿ ನಡೆದಿದೆ. 

ಈ ವೇಳೆ ಕಾರ್ಯಕರ್ತರು ಆಕೆಯ ತಂದೆಯ ಹೇಳಿಕೆಯನ್ನು ವಿಡಿಯೋ ಮಾಡಿ ವೈರಲ್ ಮಾಡಿದ್ದು, ಅವರಿಂದ 'ಭಾರತ್ ಮಾತಾಕೀ ಜೈ' ಎಂದು ಹೇಳಿಸಿದ್ದಲ್ಲದೇ, ಮಗಳಿಗೆ ಜಾಮೀನು ಕೊಡುತ್ತೀರಾ? ವಕೀಲರ ನೇಮಕ ಮಾಡುತ್ತೀರಾ? ಎಂಬಂತಹ ಪ್ರಶ್ನೆಗಳನ್ನು ಕೇಳಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. 

ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ವಾಜೀ ಅವರನ್ನು ಸುತ್ತುವರಿದು ಪ್ರಶ್ನೆ ಕೇಳುತ್ತಾ ವಿಡಿಯೋ ಮಾಡಿದ್ದು, ಈ ವೇಳೆ ಅಮೂಲ್ಯ ಅವರ ತಂದೆ ವಾಜೀ ಮಾತನಾಡಿ, ಅಮೂಲ್ಯ ನನ್ನ ಮಗಳು, ಅವಳು ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ನಾನು ಅಕ್ಷರಶಃ ಸಹಿಸುವುದಿಲ್ಲ. ಆಕೆ ತುಂಬಾ ಹಠದ ಸ್ವಭಾವದವಳಾಗಿದ್ದು, ಆಕೆಗೆ ಎಷು ಬುದ್ಧಿವಾದ ಹೇಳಿದರೂ ತಿದ್ದಿಕೊಳ್ಳುತ್ತಿರಲಿಲ್ಲ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಕಳೆದ ಐದಾರು ದಿನಗಳಿಂದ ಮಗಳು ಅಮೂಲ್ಯ ನಮ್ಮ ಸಂಪರ್ಕದಲ್ಲಿಲ್ಲ. ನಾನು ಹೃದಯ ಸಂಬಂಧಿ ಖಾಯಿಲೆ ಇಂದ ಬಳಲುತ್ತಿದ್ದು, 15 ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದಾಗ ಆಕೆಗೆ ಬುದ್ಧಿವಾದ ಹೇಳಿದ್ದೆ, ಆಗಲೂ ಅಮೂಲ್ಯ ನನ್ನ ಮಾತು ಕೇಳಿಲ್ಲ. ನನ್ನ ಸಹೋದರ ವಿದೇಶದಿಂದ ಬಂದಿದ್ದ ವೇಳೆ ಆತನೂ ಬುದ್ಧಿವಾದ ಹೇಳಿದ್ದ, ಆದರೆ ಯಾರ ಮಾತನ್ನೂ ಕೇಳುತ್ತಿರಲಿಲ್ಲ, ನನ್ನ ಕುಟುಂಬಕ್ಕೂ ಮಾನಸಿಕವಾಗಿ ನೋವುಂಟು ಮಾಡಿದ್ದಾರೆ. ಎಂದು ವಾಜೀ ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ನಾನು ಅವಳ ಬಿಡುಗಡೆಗೆ ಯಾವುದೇ ವಕೀಲರನ್ನು ನೇಮಿಸುವುದಿಲ್ಲ, ಮಗಳು ಮಾಡಿರುವ ತಪ್ಪಿಗೆ ಸರಕಾರ ತಕ್ಕ ಶಿಕ್ಷ ನೀಡಲಿ. ಅವಳ ಬಿಡುಗಡೆಗೆ ಯಾವುದೇ ರೀತಿಯ ಜಾಮೀನು ಪಡೆಯಲು ಮುಂದಾಗುವುದಿಲ್ಲ. ಅವಳನ್ನು ಸಮರ್ಥಿಸುವ ಪ್ರಶ್ನೆಯೇ ಇಲ್ಲ. ಇತ್ತೀಚೆಗೆ ಅಮೂಲ್ಯ ಕೆಲ ಹೋರಾಟಗಾರರೊಂದಿಗೆ ಸೇರಿಕೊಂಡು ಸಭೆ, ಸಮಾರಂಭಗಳಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡುತ್ತಿದ್ದಳು. ಇಂತಹ ಮಾತುಗಳನ್ನು ನಾನು ಯಾವತ್ತೂ ಸಹಿಸುತ್ತಿರಲಿಲ್ಲ. ಈ ಸಂಬಂಧ ಆಕೆಗೆ ತಾನು ಸಾಕಷ್ಟು ಬುದ್ಧಿವಾದ ಹೇಳಿದ್ದೇನೆ. ಆದರೆ ಆಕೆ ಕೇಳುತ್ತಿರಲಿಲ್ಲ ಎಂದು ಅಮೂಲ್ಯ ತಂದೆ ಹೇಳಿರುವ ವಿಡಿಯೋ ಅನ್ನು ಸಂಘಪರಿವಾರ ಸಂಘಟನೆಗಳು ವೈರಲ್ ಮಾಡಿದ್ದಾರೆ.

ವಿಡಿಯೋ ಮಾಡಿರುವ ಕಾರ್ಯಕರ್ತರು ಕೊನೆಯಲ್ಲಿ ಅಮೂಲ್ಯ ತಂದೆ ಅವರಿಂದ 'ಭಾರತ್ ಮಾತಾಕೀ ಜೈ' ಎಂದು ಹೇಳಲು ಒತ್ತಾಯ ಮಾಡಿದ್ದು, ವಾಜೀ ಅವರು 'ಭಾರತ್ ಮಾತಾಕೀ ಜೈ' ಎಂದು ಹೇಳುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X