Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ:...

​‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ: ಅಮೂಲ್ಯಾಗೆ 14 ದಿನಗಳ ನ್ಯಾಯಾಂಗ ಬಂಧನ

ಸಂಘಪರಿವಾರದಿಂದ ಮನೆ ಮೇಲೆ ಕಲ್ಲು ತೂರಾಟ: ಅಮೂಲ್ಯ ತಂದೆ ಆರೋಪ

ವಾರ್ತಾಭಾರತಿವಾರ್ತಾಭಾರತಿ21 Feb 2020 9:59 AM IST
share
​‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ: ಅಮೂಲ್ಯಾಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು, ಫೆ.21: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಮೂಲ್ಯಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಸದ್ಯ ಅಮೂಲ್ಯ ಲಿಯೋನಾಳನ್ನು ನಗರದ ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿಡಲಾಗಿದೆ. ಗುರುವಾರ ರಾತ್ರಿ ಉಪ್ಪಾರಪೇಟೆ ಪೊಲೀಸ್ ಠಾಣೆಯ ಪೊಲೀಸರು ಅಮೂಲ್ಯರನ್ನು ವಿಚಾರಣೆ ನಡೆಸಿದ ಬಳಿಕ 5ನೆ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ಶಿರಿನ್ ಜಿ.ಅನ್ಸಾರಿ ಅವರ ಕೋರಮಂಗಲದ ನಿವಾಸಕ್ಕೆ ಕರೆದೊಯ್ಯಲಾಯಿತು.

ಅಮೂಲ್ಯರನ್ನು ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡಬೇಕೆಂದು ಪೊಲೀಸರ ಪರ ವಕೀಲರು ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡರು. ನ್ಯಾಯಾಧೀಶರು 14 ದಿನಗಳ ಕಾಲ ಮಾತ್ರ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದರು.

ಅಮೂಲ್ಯಗೆ ಪಾಕಿಸ್ತಾನದ ಪರ ಘೋಷಣೆ ಕೂಗಲು ಯಾರಾದರೂ ಕುಮ್ಮಕ್ಕು ನೀಡಿದ್ದಾರಾ? ಆಯೋಜಕರು ಇವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರಾ? ಇಲ್ಲವೆ ಇವರೆ ವೇದಿಕೆ ಮೇಲೆ ಬಂದು ಪಾಕ್ ಪರ ಘೋಷಣೆ ಕೂಗಿದರಾ ಎಂಬಿತ್ಯಾದಿ ಪ್ರಶ್ನೆಗಳನ್ನು ಉಪ್ಪಾರಪೇಟೆ ಪೊಲೀಸರು ಕೇಳಿ ಮಾಹಿತಿ ಕಲೆ ಹಾಕಿದ್ದಾರೆ. ಅಮೂಲ್ಯ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 124ಎ, 153 ಎ ಮತ್ತು 153 ಬಿ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಬೆಂಗಳೂರಿನ ಫ್ರೀಂಡಂ ಪಾರ್ಕ್‌ನಲ್ಲಿ ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರೆಂಟ್ ಆಯೋಜಿಸಿದ್ದ ಕಾರ್ಯಕ್ರಮದ ಸಂಪೂರ್ಣ ವಿಡಿಯೋವನ್ನು ಚಿತ್ರೀಕರಣ ಮಾಡಲಾಗಿದೆ. ಇದನ್ನು ಪರಿಶೀಲಿಸಿ ಅಮೂಲ್ಯ ಲಿಯೋನಾಗೆ ಪಾಕಿಸ್ತಾನ ಪರ ಘೋಷಣೆ ಕೂಗಲು ಪ್ರಚೋದನೆ ನೀಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೂಲ್ಯಾಳ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಿವಪುರ ಗ್ರಾಮದ ವಾಜಿಯಲ್ಲಿ ಆಕೆಯ ಮನೆಗೆ ಜನರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಅಮೂಲ್ಯಾಳ ದೇಶವಿರೋಧಿ ಘೋಷಣೆಯಿಂದ ಆಕ್ರೋಶಗೊಂಡ ಜನರು ಮನೆಯ ಕಿಟಕಿ ಗಾಜು ಪುಡಿಪುಡಿ ಮಾಡಿದ್ದಾರೆ. ಮನೆಯ ಮುಂಭಾಗ ಹಾಗೂ ಹಿಂಭಾಗದ ಕಿಟಕಿ ಗಾಜುಗಳಿಗೆ ಕಲ್ಲು ತೋರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಂಜಾಗ್ರತಾ ಕ್ರಮವಾಗಿ ಮನೆಯ ಸುತ್ತಲೂ ಪೊಲೀಸ್ ಕಾವಲು ನಿಯೋಜನೆ ಮಾಡಲಾಗಿದೆ. ಈ ನಡುವೆ ಅಮೂಲ್ಯಾ ತಂದೆ ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X