Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೋರಾಟದಿಂದ ಯಾವ ಭಾಷೆಯೂ ಉದ್ಧಾರವಾಗಲ್ಲ:...

ಹೋರಾಟದಿಂದ ಯಾವ ಭಾಷೆಯೂ ಉದ್ಧಾರವಾಗಲ್ಲ: ಹಿರಿಯ ಕತೆಗಾರ ಎಸ್.ದಿವಾಕರ್

ತಾಯಿಭಾಷೆ ದಿನಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ21 Feb 2020 5:42 PM IST
share

ಬೆಂಗಳೂರು, ಫೆ.21: ಯಾವ ಹೋರಾಟದಿಂದಲೂ ಯಾವ ಭಾಷೆಯು ಉದ್ಧಾರ ಆಗಲ್ಲ. ಬದಲಿಗೆ, ಪರಕೀಯ ಭಾಷೆಗಳನ್ನು ದ್ವೇಷಿಸಲು ಎಡೆ ಮಾಡಿಕೊಡುತ್ತದೆ ಎಂದು ಹಿರಿಯ ಕತೆಗಾರ ಎಸ್.ದಿವಾಕರ್ ಅಭಿಪ್ರಾಯಿಸಿದ್ದಾರೆ.

ಶುಕ್ರವಾರ ಕೇಂದ್ರ ಸಾಹಿತ್ಯ ಅಕಾಡೆಮಿ ನಗರದಲ್ಲಿ ಆಯೋಜಿಸಿದ್ದ ತಾಯಿ ಭಾಷೆ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದೆ ಗುಬ್ಬಿವೀರಣ್ಣ ನಾಟಕ ಕಂಪೆನಿಯು ಚೆನ್ನೈನಲ್ಲಿ ನಾಟಕ ಪ್ರದರ್ಶನ ಮಾಡಿದರೆ, ಸದಾ ಹೌಸ್‌ಪುಲ್ ಆಗುತ್ತಿತ್ತು. ಆದರೆ, ಈಗ ಅಲ್ಲಿಯ ಯಾವ ಮಲ್ಟಿಪ್ಲೆಕ್ಸ್‌ಗಳಲ್ಲೂ ಕನ್ನಡದ ಒಂದು ಸಿನೆಮಾ ಒಂದು ಗಳಿಗೆಯೂ ಪ್ರದರ್ಶಿಸಲು ಸಾಧ್ಯವಾಗುವುದಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

ಭಾಷೆ ಹಾಗೂ ಕಾವ್ಯಕ್ಕೆ ಹತ್ತಿರದ ಸಂಬಂಧವಿರುತ್ತದೆ. ಅಭಿವ್ಯಕ್ತಿಯ ತೀವ್ರರೂಪವನ್ನು ಕಾವ್ಯದಲ್ಲಿ ಮಾತ್ರ ಕಾಣಲು ಸಾಧ್ಯ. ಮಾತೃ ಭಾಷೆಯಲ್ಲಿ ಬರೆದ ಕಾವ್ಯಗಳು ಮಾತ್ರ ವಿಶಿಷ್ಟತೆಯನ್ನು ಪಡೆದುಕೊಳ್ಳುತ್ತವೆ. ಹೃದಯವಂತರು ಮಾತ್ರ ಕಾವ್ಯದ ದಾರಿಯಲ್ಲಿ ಹೋಗಲು ಸಾಧ್ಯವೆಂದು ಅವರು ಹೇಳಿದರು.

ಸಂಗೀತದಂತೆ ಕಾವ್ಯಕ್ಕೂ ಸೌಂದರ್ಯವಿರುತ್ತದೆ. ಕಾವ್ಯದಲ್ಲಿ ಬರುವ ಎಲ್ಲ ಸಾಲುಗಳು, ಪದಗಳು ಅರ್ಥ ಆಗಬೇಕಾಗಿಲ್ಲ. ಕಾವ್ಯದ ಲಯವನ್ನು ಆಲಿಸಿದರೆ ಸಾಕು ಅದು ನಮ್ಮ ಹೃದಯವನ್ನು ಆವರಿಸಿಕೊಳ್ಳುತ್ತದೆ. ಹೀಗಾಗಿ ಕಾವ್ಯಕ್ಕೆ ಭಾಷೆ, ಪ್ರದೇಶದ ಹಂಗಿಲ್ಲವೆಂದು ಅವರು ಹೇಳಿದರು.

ಉರ್ದು ಅನುವಾದಕ ಮಾಹೆರ್ ಮನ್ಸೂರ್ ಮಾತನಾಡಿ, ಉರ್ದು ಕೇವಲ ಮುಸ್ಲಿಮರ ಭಾಷೆ ಎಂಬ ತಪ್ಪು ಕಲ್ಪನೆಗಳಿವೆ. ಉರ್ದುವಿನ ಮೇಲೆ ಅರೇಬಿಯಾ, ಪರ್ಷಿಯನ್ ಭಾಷೆಗಳಿಗಿಂತ ಭಾರತದಲ್ಲಿರುವ ಇತರೆ ಭಾಷೆಗಳ ಪ್ರಭಾವ ಹೆಚ್ಚಾಗಿ ಸ್ವತಂತ್ರ ಭಾಷೆಯಾಗಿ ಬೆಳೆದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅನುವಾದಕರಾದ ಮಲಯಾಳಂನ ವಿಷ್ಣುಮಂಗಳಮ್, ತಮಿಳಿನ ಎನ್.ದಾಸ್, ತೆಲುಗಿನ ಮಾರ್ಕಂಡಪುರಂ ಶ್ರೀನಿವಾಸ್ ತಮ್ಮ ಭಾಷೆಯ ಹಿರಿಮೆ ಕುರಿತು ಮಾತನಾಡಿ, ಕಾವ್ಯ ವಾಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X