Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಧಾರ್ ಕಾರ್ಡ್ ನೋಂದಣಿ-ತಿದ್ದುಪಡಿ ಶಿಬಿರ

ಆಧಾರ್ ಕಾರ್ಡ್ ನೋಂದಣಿ-ತಿದ್ದುಪಡಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ21 Feb 2020 8:00 PM IST
share
ಆಧಾರ್ ಕಾರ್ಡ್ ನೋಂದಣಿ-ತಿದ್ದುಪಡಿ ಶಿಬಿರ

ಮಂಗಳೂರು, ಫೆ.21: ಭಾರತೀಯ ಅಂಚೆ ಇಲಾಖೆ ಮತ್ತು ಸಮಾಜ ಸೇವಾ ಘಟಕ, ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ಶಾಖೆಯಿಂದ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಶಿಬಿರವನ್ನು ನಗರದ ಬಂದರ್‌ನಲ್ಲಿರುವ ಹಿದಾಯತ್ ಸೆಂಟರ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಆಧಾರ್ ಕಾರ್ಡ್‌ನ ಬಯೋಮೆಟ್ರಿಕ್ ಪರಿಷ್ಕರಣೆ, ಹೆಸರು, ವಿಳಾಸ ಬದಲಾವಣೆ, ಜನ್ಮದಿನಾಂಕ ತಿದ್ದುಪಡಿ ಸೇರಿದಂತೆ ಹೊಸ ನೋಂದಣಿಗೂ ಅವಕಾಶ ಕಲ್ಪಿಸಿದ್ದರಿಂದ ಸುಮಾರು 400 ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಂಡರು.

ಈ ಹಿಂದೆ ಆಧಾರ್ ಕಾರ್ಡ್ ಮಾಡಲು ಪರದಾಡಿದ್ದ ಸಾರ್ವಜನಿಕರು ಈ ಶಿಬಿರದ ಮೂಲಕ ಜಿಲ್ಲೆಯ ವಿವಿಧೆಡೆಯಿಂದ ಬಂದು ಪ್ರಯೋಜನ ಪಡೆದುಕೊಂಡರು. ನೂರಾರು ಮಂದಿ ತಮ್ಮ ಆಧಾರ್ ಕಾರ್ಡ್‌ನ ಬಗೆಗಿನ ಸಂಶಯ, ಗೊಂದಲಗಳನ್ನು ಅಧಿಕಾರಿಗಳ ಮುಂದೆಯೇ ತಿಳಿಸಿ, ಸರಿಪಡಿಸಿಕೊಂಡರು.

ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅಂಚೆ ಇಲಾಖೆಯ ಆಧಾರ್ ಅಧಿಕಾರಿ ವಿಲ್ಸನ್, 2009ರಲ್ಲಿ ದ.ಕ. ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಆರಂಭವಾದಾಗ ಮೊದಲು ನೋಂದಣಿ ಮಾಡಿ, ಪರೀಕ್ಷೆ ಮಾಡಿದ್ದು ನನ್ನದು. ಆ ಬಳಿಕದಿಂದ ಈವರೆಗೆ ಆಧಾರ್‌ನಲ್ಲಿ ದಿನನಿತ್ಯ ಹೊಸ ಹೊಸ ತಾಂತ್ರಿಕ ಬದಲಾವಣೆಗಳಾಗಿದೆ. ಕೆಲವೊಂದು ಸಮಸ್ಯೆಗಳು ಎದುರಾಗುತ್ತಿರುತ್ತವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುವಂತಹ ಜವಾಬ್ದಾರಿ ಸಮಾಜದ ಎಲ್ಲ ಸಾಮಾಜಿಕ ಸಂಘಟನೆಗಳಿಗಿದೆ. ಈ ಹಿನ್ನೆಲೆಯಲ್ಲಿ ಸಮಾಜ ಸೇವಾ ಘಟಕದ ಸ್ವಯಂ ಸೇವಕರ ಸಹಕಾರದೊಂದಿಗೆ ಶಿಬಿರವು ಯಶಸ್ವಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಜಮಾಅತೆ ಇಸ್ಲಾಮಿ ಹಿಂದ್‌ನ ಮಂಗಳೂರು ಕಾರ್ಯದರ್ಶಿ ಇಸ್ಹಾಕ್ ಪುತ್ತೂರು ಮಾತನಾಡಿ, ಸಮಾಜ ಸೇವೆ ನಮ್ಮ ಧಾರ್ಮಿಕ ಹೊಣೆಗಾರಿಕೆ ಎಂಬ ನೆಲೆಯಲ್ಲಿ ದೇಶಾದ್ಯಂತ ಸೇವೆಯನ್ನು ನೀಡುತ್ತಾ, ಸಮಾಜದಲ್ಲಿ ಶಾಂತಿ, ಸೌಹಾರ್ದ ನೆಲೆಸಲು ಮುಂದಾಗಿದ್ದೇವೆ. ಸಮಾಜದಲ್ಲಿ ಕಷ್ಟಪಡುತ್ತಿರುವ ಬಡ ಜನರಿಗೆ ಈ ಶಿಬಿರವು ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭ ಸಮಾಜ ಸೇವಾ ಘಟಕದಿಂದ ಅಂಚೆ ಇಲಾಖೆಯ ಸಿಬ್ಬಂದಿಗೆ ಸಹಕರಿಸಿದ ವಿನೋದ್, ಶರತ್, ಪವನ್ ಹಾಗೂ ಸೌಮ್ಯಾ ಅವರಿಗೆ ಕಿರುಕಾಣಿಕೆ ನೀಡಿ, ಗೌರವಿಸಲಾಯಿತು. ಶಿಬಿರದ ಸಂಚಾಲಕ ಹಾಗೂ ಎಚ್‌ಆರ್‌ಎಸ್ ಕ್ಯಾಪ್ಟನ್ ಅಮೀರ್ ಕುದ್ರೋಳಿ, ಸಿದ್ದೀಕ್ ಜಕ್ರಿಬೆಟ್ಟು, ಇರ್ಷಾದ್ ಹಾಶ್ಮಿ, ಆಸಿಫ್ ಕುದ್ರೋಳಿ, ಬಶೀರ್ ದೇರಳಕಟ್ಟೆ, ಆರಿಫ್ ಕಳಾಯಿ, ಮುನವ್ವರ್ ಕುದ್ರೋಳಿ, ಸಲೀಮ್ ಕೆ.ಕೆ., ಇರ್ಷಾದ್ ವೇಣೂರು ಸ್ವಯಂ ಸೇವಕರಾಗಿ ಸಹಕರಿಸಿ ಶಿಬಿರವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದಲ್ಲಿ ಮುಹ್ಸಿನ್ ಕಂದಕ್ ಸ್ವಾಗತಿಸಿದರು. ಖಾಸಿಮ್ ಕಂದಕ್ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X