Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ...

‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗುವವರಿಗೆ ಉಗ್ರ ಶಿಕ್ಷೆಯಾಗಲಿ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ21 Feb 2020 8:49 PM IST
share
‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗುವವರಿಗೆ ಉಗ್ರ ಶಿಕ್ಷೆಯಾಗಲಿ: ಶೋಭಾ ಕರಂದ್ಲಾಜೆ

ಉಡುಪಿ, ಫೆ.21: ದೇಶದಲ್ಲೀಗ ಭಾರತ ವಿರೋಧಿ ಘೋಷಣೆ ಕೂಗುವ ಜಾಲ ನಿರ್ಮಾಣವಾಗಿದೆ. ದೇಶದಲ್ಲಿ ಜಿನ್ನಾ ಮಾನಸಿಕತೆ ಸೃಷ್ಟಿಸುವ ವ್ಯವಸ್ಥಿತ ಘಡ್ಯಂತ್ರ ನಡೆಯುತ್ತಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತಿದ್ದ ಅವರು, ಅಮೂಲ್ಯ ಬೆಂಗಳೂರಿನಲ್ಲಿ ಗುರುವಾರ ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತಿದ್ದರು. ಹಣಕೊಟ್ಟು ಒತ್ತಡ ಹಾಕಿ ಪ್ರಚಾರಕ್ಕಾಗಿ ಹೇಳಿಕೆ ಕೊಡಲಾಗುತ್ತಿದೆ ಎಂದರು.

ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗುವವರಿಗೆ ಉಗ್ರ ಶಿಕ್ಷೆ ಆಗಬೇಕು. ಈ ಸಂಬಂಧ ದೇಶದ ಹಾಗೂ ರಾಜ್ಯದ ಕಾನೂನಿನಲ್ಲಿ ಸೂಕ್ತ ಬದಲಾವಣೆ ಮಾಡಬೇಕು. ಭಾರತದ ಅನ್ನ ತಿಂದು, ಸಬ್ಸಿಡಿ ಪಡೆದು ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗುತ್ತಾರೆ ಎಂದ ಶೋಭಾ, ಇದರ ಹಿಂದೆ ಇರುವ ವ್ಯಕ್ತಿಗಳ ತನಿಖೆಯಾಗಬೇಕು. ಆಯೋಜಕರ ತನಿಖೆಯಾಗೇಕು ಎಂದು ಒತ್ತಾಯಿಸಿದರು.

ಅಮೂಲ್ಯ ತಂದೆ ಬಗ್ಗೆಯೂ ತನಿಖೆ ನಡೆಯಲಿದೆ. ಅಮೂಲ್ಯ ತಂದೆ ಕೊಪ್ಪದವರು. ಹಿಂದೆ ನಕ್ಸಲರ ಜೊತೆ ಅವರಿಗೆ ಸಂಪರ್ಕ ಇತ್ತು. ಈ ಬಗ್ಗೆ ಪೊಲೀಸರಿಗೂ ಮಾಹಿತಿ ಇದೆ. ಅಮೂಲ್ಯ ತಂದೆಗೆ ಸಿರಿಮನೆ ನಾಗರಾಜು ಮತ್ತು ಇತರ ನಕ್ಸಲ್ ಬೆಂಬಲಿಗರ ಒಡನಾಟ ವಿತ್ತು. ಹೀಗಾಗಿ ಅಮೂಲ್ಯ ಅಪ್ಪನಿಗೆ ನಕ್ಸಲರ ಸಂಪರ್ಕ ಇದೆ ಎಂದರು.

ಬೆಂಗಳೂರಿನಲ್ಲಿ ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಹುಡುಗಿ ಯಾರು? ಅವಳ ಹಿನ್ನೆಲೆಯೇನು, ಈಕೆಗೆ ಯಾವ ಸಂಘಟನೆಯ ಜೊತೆ ಸಂಬಂಧ ಇದೆ? ಈ ಬಗ್ಗೆ ತನಿಖೆಯಾಗಬೇಕು. ಎಲ್ಲರನ್ನೂ ದೇಶದ್ರೋಹದ ಕೇಸಿನ ಮೇಲೆ ಜೈಲಿಗೆ ಹಾಕಬೇಕು ಎಂದು ಹೇಳಿದ ಶೋಭಾ, ಯಾವುದೇ ವಕೀಲರು ಇವರ ಕೇಸು ನಡೆಸಬಾರದು ಎಂದರು.

ಹುಬ್ಬಳ್ಳಿ ಪ್ರಕರಣದಲ್ಲಿ ಬೆಂಗಳೂರಿನ ವಕೀಲರು ವಾದ ಮಾಡಲು ಹೋಗಿ ದ್ದಾರೆ. ರಾಷ್ಟ್ರಪ್ರೇಮದ ವಿಚಾರದಲ್ಲಿ ಯಾರು ರಾಜಿ ಆಗಬೇಡಿ. ಚುನಾವಣೆ ಬಂದಾಗ ರಾಜಕೀಯ ಮಾಡೋಣ. ಆದರೆ ಭಾರತಮಾತೆಯ ಬಗ್ಗೆ ಅವಹೇಳನ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕು ಎಂದರು.

ಅಮೂಲ್ಯಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಎಂಬ ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದೆ, ಡಿಕೆಶಿ ಒರಿಜಿನಲ್ ಕಾಂಗ್ರೆಸ್ಸಿಗ ಅಲ್ಲ. ನಿಜವಾದ ಕಾಂಗ್ರೆಸ್ಸಿಗರು ಈ ಹೇಳಿಕೆ ನೀಡುತ್ತಿರಲಿಲ್ಲ. ಸ್ವಾತಂತ್ರ ಹೋರಾಟ ದಲ್ಲಿ ಭಾಗವಹಿಸಿದ ಪಕ್ಷ ಕಾಂಗ್ರೆಸ್ ಅಂತಾರೆ. ಹೀಗಾಗಿ ಹೇಳಿಕೆ ನೀಡಿದ ಡಿಕೆಶಿ ಬಗ್ಗೆಯೂ ತನಿಖೆಯಾಗಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X