Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ...

ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಹಿಳಾ ಅಧಿಕಾರಿಯನ್ನು ವಜಾಗೊಳಿಸಿದ ಸಾಹಿತ್ಯ ಅಕಾಡಮಿ

ವಾರ್ತಾಭಾರತಿವಾರ್ತಾಭಾರತಿ21 Feb 2020 11:59 PM IST
share

ಹೊಸದಿಲ್ಲಿ, ಫೆ. 21: ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿ ಕೆ. ಶ್ರೀನಿವಾಸ್ ರಾವ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ ಮಹಿಳಾ ಅಧಿಕಾರಿಯನ್ನು ಅವರ ಎರಡು ವರ್ಷಗಳ ಪರೀಕ್ಷಾರ್ಥ ಅವಧಿ ಪೂರ್ಣಗೊಳ್ಳುವ ಒಂದು ದಿನ ಮೊದಲು ಸಾಹಿತ್ಯ ಅಕಾಡೆಮಿ ವಜಾಗೊಳಿಸಿದೆ.

ಈ ಪ್ರಕರಣದ ವಿಚಾರಣೆ ಬಾಕಿ ಇರುವಾಗ ಹಾಗೂ ಮಾರ್ಚ್ 16ರ ವರೆಗೆ 3 ತಿಂಗಳ ಪಾವತಿ ರಜೆ ತೆಗೆದುಕೊಳ್ಳಲು ದೂರದಾರ ಮಹಿಳೆಗೆ ದಿಲ್ಲಿ ಉಚ್ಚ ನ್ಯಾಯಾಲಯ ಅನುಮತಿ ನೀಡಿರುವಾಗಲೂ ಈ ಆದೇಶ ಹೊರಬಿದ್ದಿದೆ. ತಾನು ಉದ್ಯೋಗ ಮಾಡಲು ಆರಂಭಿಸಿದಂದಿನಿಂದ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿ ಕೆ. ಶ್ರೀನಿವಾಸ ರಾವ್ ಅವರಿಂದ ಹಲವು ಬಾರಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ಆರೋಪಿಸಿ ಸಾಹಿತ್ಯ ಅಕಾಡೆಮಿಯ ಉಪ ಕಾರ್ಯದರ್ಶಿ ಮಟ್ಟದ ಹುದ್ದೆ ನಿರ್ವಹಿಸುತ್ತಿದ್ದ ಮಹಿಳೆ 2018 ಫೆಬ್ರವರಿಯಲ್ಲಿ ದೂರು ನೀಡಿದ್ದರು.

ಕೆ. ಶ್ರೀನಿವಾಸ್ ರಾವ್ ಅವರು ತನ್ನ ಉಸ್ತುವಾರಿ ಅಧಿಕಾರಿಯಾದಂದಿನಿಂದ ತನ್ನ ಕೆಲಸದ ಸಂಪೂರ್ಣ ನಿಯಂತ್ರಣ ಅವರ ಕೈಯಲ್ಲಿ ಇತ್ತು. ಅಲ್ಲದೆ ತಾನು ಸಹಕರಿಸದೇ ಇದ್ದರೆ ಸಾಹಿತ್ಯ ಅಕಾಡೆಮಿಯಲ್ಲಿ ತನ್ನ ಉದ್ಯೋಗ ಹಾಗೂ ವೃತ್ತಿಜೀವನಕ್ಕೆ ಪ್ರತಿಕೂಲ ಪರಿಣಾಮ ಉಂಟಾಗಬಹುದು ಎಂದು ಎಂದು ಅವರು ಬೆದರಿಕೆ ಒಡ್ಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಸಾಹಿತ್ಯ ಅಕಾಡೆಮಿಗೆ ಕೆಲಸಕ್ಕೆ ಸೇರಿದ ಕೇವಲ ಒಂದು ತಿಂಗಳಲ್ಲಿ ಅಸ್ಸಾಂ ಮೂಲದ ಈ ಮಹಿಳೆ ಅಕಾಡೆಮಿಯ ಕಾರ್ಯದರ್ಶಿ ಕೆ. ಶ್ರೀನಿವಾಸ ರಾವ್ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ದಿಲ್ಲಿ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್ ದೂರಿನಲ್ಲಿ ಅವರು, ಈಶಾನ್ಯ ಭಾರತದಿಂದ ಮುಖ್ಯವಾಗಿ ಅಸ್ಸಾಂನಿಂದ ಆಗಮಿಸಿದ ಮಹಿಳೆಯರ ಬಗ್ಗೆ ಸೆಕ್ರೆಟರಿ ಕೆ. ಶ್ರೀನಿವಾಸ ರಾವ್ ಅವರು ಅಶ್ಲೀಲ ಹೇಳಿಕೆ ಹಾಗೂ ಜನಾಂಗೀಯ ನಿಂದನೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X