ಗುಂಡ್ಯ ಹೊಳೆಗೆ ಬಿದ್ದು ಯುವಕ ಮೃತ್ಯು
ಉಪ್ಪಿನಂಗಡಿ : ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ಗುಂಡ್ಯ ಹೊಳೆಗೆ ಮೀನು ಹಿಡಿಯಲೆಂದು ಹೋದ ಹರೀಶ್ (26) ಎಂಬವರು ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಶಿರಾಡಿ ಗ್ರಾಮದ ಬಾಗಿಲುಗದ್ದೆ ನಿವಾಸಿ ಚೋಮ ಎಂಬವರ ಪುತ್ರ ಹರೀಶ್ ತನ್ನ ಸ್ನೇಹಿತರೊಂದಿಗೆ ಶುಕ್ರವಾರದಂದು ಮೀನು ಹಿಡಿಯಲೆಂದು ನದಿಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಈ ಬಗ್ಗೆ ಮಾಹಿತಿ ಲಭಿಸಿದಾಕ್ಷಣ ಅಗ್ನಿ ಶಾಮಕ ದಳ, ಪೊಲೀಸ್ ಇಲಾಖೆ, ಸ್ಥಳೀಯರ ಸಹಕಾರ ಪಡೆದು ಹುಡುಕಾಟ ನಡೆಸಲಾಗಿ ಶನಿವಾರ ಮಧ್ಯಾಹ್ನದ ವೇಳೆ ಮೃತ ದೇಹವನ್ನು ಪತ್ತೆಹಚ್ಚಿ ಮೇಲಕ್ಕೆತ್ತಲಾಯಿತು.
ಮೃತ ಹರೀಶ್ ವಿವಾಹಿತನಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story