Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾಷೆ ಸೊರಗಿದರೆ, ಸಂಸ್ಕೃತಿಯೂ...

ಭಾಷೆ ಸೊರಗಿದರೆ, ಸಂಸ್ಕೃತಿಯೂ ಸೊರಗುತ್ತದೆ: ಸಚಿವ ಸಿ.ಟಿ.ರವಿ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಬೆಳ್ಳಿಹಬ್ಬ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ22 Feb 2020 9:08 PM IST
share
ಭಾಷೆ ಸೊರಗಿದರೆ, ಸಂಸ್ಕೃತಿಯೂ ಸೊರಗುತ್ತದೆ: ಸಚಿವ ಸಿ.ಟಿ.ರವಿ

ಕಾರ್ಕಳ, ಫೆ. 22: ಭಾಷೆ ಮತ್ತು ಸಂಸ್ಕೃತಿ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಒಂದು ಭಾಷೆ ಕಲಬೆರಕೆಯಾದರೆ, ಆ ಸಂಸೃತಿಯೂ ಕಲಬೆರಕೆಯಾದಂತೆ. ಅದೇ ರೀತಿ ಒಂದು ಭಾಷೆ ಮಾತನಾಡುವ ಜನರು ನಿರಭಿಮಾನಿಗಳಾದರೆ ಆ ಭಾಷೆ ಸೊರಗುವುದರೊಂದಿಗೆ, ಆ ಜನರ ಸಂಸ್ಕೃತಿಯೂ ಸೊರಗುತ್ತದೆ ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಬೆಳ್ಳಿಹಬ್ಬ ಮಹೋತ್ಸವ ಕಾರ್ಯಕ್ರಮ ಹಾಗೂ ಕೊಂಕಣಿ ಸಾಹಿತ್ಯ ಸಮ್ಮೇಳನವನ್ನು ಶನಿವಾರ ಕಾರ್ಕಳದ ಎಸ್‌ವಿಟಿ ವಿದ್ಯಾಸಂಸ್ಥೆ ಆವರಣದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಈ ಅಪಾಯ ಕೊಂಕಣಿಗೆ ಮಾತ್ರವಲ್ಲ, ಕನ್ನಡ, ತುಳು ಸೇರಿದಂತೆ ದೇಶದ ಎಲ್ಲಾ ಭಾಷೆಗಳಿಗೂ ಅನ್ವಯಿಸುತ್ತದೆ. ಆದುದರಿಂದ ಯಾವುದೇ ಭಾಷೆಯ ಬಗ್ಗೆ, ಆ ಭಾಷೆಯನ್ನು ಮಾತನಾಡುವ ಜನರು ನಿರಭಿಮಾನ ಬೆಳೆಸಿಕೊಂಡರೆ ಆ ಭಾಷೆಯ ಅಳಿವು ಪ್ರಾರಂಭವಾಗುತ್ತದೆ. ಹೀಗಾಗಿ ಜನರು ತಾವಾಡುವ ಭಾಷೆಯ ಕುರಿತಂತೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದವರು ಕಿವಿಮಾತು ಹೇಳಿದರು.

ನಮ್ಮ ಇಂದಿನ ಅಗತ್ಯತೆ, ಅವಶ್ಯಕತೆಗೆ ಇಂಗ್ಲೀಷ್‌ನ್ನು ಒಂದು ಭಾಷೆಯಾಗಿ ಕಲಿಯುವುದು ತಪ್ಪಲ್ಲ. ಭಾರತದಲ್ಲಿಂದು 1200ಕ್ಕೂ ಅಧಿಕ ಜನರಾಡುವ ಭಾಷೆಗಳಿವೆ. ಆದರೆ ಇಲ್ಲಿ ಯಾವುದೇ ಭಾಷೆ ಇನ್ನೊಂದು ಭಾಷೆಯನ್ನು ಅಳಿಸಿ ಹಾಕುವ ಕೆಲಸ ಮಾಡಿಲ್ಲ, ಬದಲಾಗಿ ಅದನ್ನು ಬೆಳೆಸುವ ಕೆಲಸ ಮಾಡಿದೆ. ಭಾರತದಲ್ಲಿ ಪ್ರತಿಷ್ಠೆಗಾಗಿ, ಹೆಣ್ಣಿಗಾಗಿ, ಮಣ್ಣಿಗಾಗಿ, ಸಾಮ್ರಾಜ್ಯ ವಿಸ್ತರಣೆಗಾಗಿ, ಸೇಡಿಗಾಗಿ ಯುದ್ಧ ನಡೆದ ಇತಿಹಾಸವಿದೆ. ಆದರೆ ಇಷ್ಟೊಂದು ಭಾಷೆಗಳಿದ್ದರೂ ದೇಶದಲ್ಲಿ ಭಾಷೆಗಾಗಿ ಯುದ್ಧ ನಡೆದ ಉದಾಹರಣೆಯಿಲ್ಲ ಎಂದು ಸಿ.ಟಿ.ರವಿ ನುಡಿದರು.

ಹೀಗಾಗಿ ಭಾರತದಲ್ಲಿ ಭಾಷಾ ವೈವಿಧ್ಯತೆಯಿದ್ದರೂ ಏಕತೆಯ ಭಾವನೆ ಇದೆ. ಕೊಂಕಣಿ ಭಾಷೆಯನ್ನು ಕನ್ನಡ, ಕನ್ನಡವನ್ನು ತುಳು ಭಾಷೆ ಬೆಳೆಸುವ ಕೆಲಸ ಮಾಡಿದೆ ಎಂದರು. ಆದರೆ ಇಂದು ಜನರಲ್ಲಿ ಆಂಗ್ಲ ಭಾಷೆಯ ವ್ಯಾಮೋಹ ದಿಂದಾಗಿ ಪ್ರಾದೇಶಿಕ ಭಾಷೆಗಳಿಗೆ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದೆ. ಭಾಷೆಯೊಂದಿಗೆ ಇಲ್ಲಿನ ಸಂಸ್ಕೃತಿಯೂ ಹೇಗೆ ಬದಲಾಗುತ್ತಿದೆ ಎಂಬುದನ್ನು ನಾವಿಂದು ನೋಡುತಿದ್ದೇವೆ ಎಂದರು.

ಆದುದರಿಂದ ಕಾಲದ ಅಗತ್ಯತೆಗೆ ಅನುಗುಣವಾಗಿ ಇತರೆ ಭಾಷೆಗಳನ್ನು ಕಲಿಯೋಣ. ಆದರೆ ನಮ್ಮತನವನ್ನು ಮರೆಯದಿರೋಣ. ನಮ್ಮ ನಮ್ಮ ಭಾಷೆಯ ಕುರಿತು ಅಭಿಮಾನ ಬೆಳೆಸಿಕೊಂಡು, ನಮ್ಮ ಮನೆಯಿಂದಲೇ ಭಾಷೆ ಮತ್ತು ಸಂಸ್ಕೃತಿಯ ಶ್ರೀಮಂತಿಕೆಯನ್ನು ಉಳಿಸೋಣ. ಪರಂಪರೆಯ ವಾರಸುದಾರ ರಾಗಿ ಅದನ್ನು ಮುಂದಿನ ಪೀಳಿಗೆಗೆ ತಲುಪಿಸುವ ಹೊಣೆಗಾರಿಕೆಯನ್ನು ನಿಭಾಯಿಸೋಣ ಎಂದು ಸಿ.ಟಿ.ರವಿ ನುಡಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 25 ಮಂದಿ ಕೊಂಕಣಿ ಭಾಷಿಗ ಸಾಧಕರನ್ನು ಸಚಿವ ಸಿ.ಟಿ.ರವಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಕಾರ್ಕಳ ಶಾಸಕ ವಿ.ಸುನೀಲ್‌ಕುಮಾರ್, ಸಾಹಿತ್ಯ ಸಮ್ಮೇಳನಾಧ್ಯಕ್ಷ ಸಾಹಿತಿ ಗೋಕಲದಾಸ ಪ್ರಭು, ರಜತೋತ್ಸವ ಸಮಿತಿಯ ಗೌರವಾಧ್ಯಕ್ಷೆ ಸಂಧ್ಯಾ ಪೈ, ಹೊಸದಿಲ್ಲಿಯ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಾಮತ್, ಅತ್ತೂರು ಸೈಂಟ್ ಲಾರೆನ್ಸ್ ಬಸಿಲಿಕಾದ ಧರ್ಮಾಧ್ಯಕ್ಷ ವಂ. ಜೋರ್ಜ್ ಡಿಸೋಜ, ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕುಮಾರಬಾಬು ಬೆಕ್ಕೇರಿ ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯರುಗಳು ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಕೆ.ಜಗದೀಶ್ ಪೈ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ರಜತೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ಶೆಣೈ ವಂದಿಸಿದರೆ, ರಾಜೇಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X