Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ತಜ್ಞರ...

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ತಜ್ಞರ ಸಮಿತಿ ರಚನೆಗೆ ಮುಂದಾದ ಬಿಬಿಎಂಪಿ

ವಾರ್ತಾಭಾರತಿವಾರ್ತಾಭಾರತಿ22 Feb 2020 10:25 PM IST
share
ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ತಜ್ಞರ ಸಮಿತಿ ರಚನೆಗೆ ಮುಂದಾದ ಬಿಬಿಎಂಪಿ

ಬೆಂಗಳೂರು, ಫೆ.22: ನಗರದಾದ್ಯಂತ ಇರುವ ಪಾರಂಪರಿಕ ಕಟ್ಟಡಗಳು ಹಾಗೂ ಪರಿಸರ ಸಂರಕ್ಷಣೆಯ ಸಲುವಾಗಿ ತಜ್ಞರ ಸಮಿತಿ ರಚನೆ ಮಾಡಲು ಬಿಬಿಎಂಪಿ ಮುಂದಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಕೆ.ಆರ್.ಮಾರುಕಟ್ಟೆ, ಟಿಪ್ಪು ಅರಮನೆ, ಕಲಾಸಿಪಾಳ್ಯದಲ್ಲಿನ ಹೈದರ್ ಅಲಿ ಕಾಲದ ಶಸ್ತ್ರಾಸ್ತ್ರ ಕಾರ್ಯಾಗಾರ, ವಿಧಾನಸೌಧ, ಕಸಾಪ ಕಟ್ಟಡ ಸೇರಿದಂತೆ ಹಲವು ಪಾರಂಪರಿಕ ಕಟ್ಟಡಗಳಿವೆ. ಇವುಗಳನ್ನು ಈಗಿರುವ ಸ್ಥಿತಿಯಲ್ಲಿಯೇ ಉಳಿಸಿಕೊಂಡು, ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಸಮಿತಿ ರಚನೆ ಮಾಡಲಾಗುತ್ತಿದೆ. ಪಾರಂಪರಿಕ ಕಟ್ಟಡ ಅಭಿವೃದ್ಧಿ, ಸಂರಕ್ಷಣೆ ಹಾಗೂ ಪರಿಸರ ಸಂರಕ್ಷಣೆಗಾಗಿ 50 ಕೋಟಿ ರೂ.ಅನುದಾನ ನೀಡುವಂತೆ ಪಾಲಿಕೆಯಿಂದ ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಮುಂದಾಗಿದೆ.

ಮೂಲ ಸ್ವರೂಪ ಉಳಿಸಲು ಯತ್ನ: ಪಾರಂಪರಿಕ ಕಟ್ಟಡಗಳು ಅವುಗಳ ಮೂಲ ಸ್ವರೂಪಕ್ಕೆ ಯಾವುದೇ ಧಕ್ಕೆಯಾಗದಂತೆ ಯಥಾಸ್ಥಿತಿಯಲ್ಲಿ ಅಭಿವೃದ್ಧಿ ಆಗಲಿವೆ. ಅವುಗಳ ಇತಿಹಾಸ, ರಚನೆಯ ಹಿಂದಿನ ಉದ್ದೇಶವನ್ನೂ ಜನರಿಗೆ ತಿಳಿಸಲು ಪಾಲಿಕೆ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಚಿತ್ರಕಲಾ ತಜ್ಞರನ್ನು ಸಮಿತಿಗೆ ಸೇರಿಸಲಾಗಿದೆ. ಪಾರಂಪರಿಕ ಕಟ್ಟಡಗಳಲ್ಲಿ ಮೈಸೂರು ತನ್ನದೇ ಆದ ಖ್ಯಾತಿ ಗಳಿಸಿರುವ ಹಿನ್ನೆಲೆಯಲ್ಲಿ ಅಲ್ಲಿನ ತಜ್ಞರನ್ನು ಸಮಿತಿಯಲ್ಲಿ ಸೇರಿಸಿಕೊಳ್ಳಲು ಪಾಲಿಕೆ ನಿರ್ಧರಿಸಿದೆ.

ತಜ್ಞರು ಮತ್ತು ಅನುಭವ: ಪಾರಂಪರಿಕ ಕಟ್ಟಡಗಳ ರಕ್ಷಣೆ ಉದ್ದೇಶದಿಂದ ರಚನೆಯಾಗುತ್ತಿರುವ ಸಮಿತಿಯಲ್ಲಿ ಹಲವು ಇಲಾಖೆಗಳ ತಜ್ಞರು ಇರಲಿದ್ದಾರೆ. ಬಿಬಿಎಂಪಿ ಆಯುಕ್ತ ಈ ಸಮಿತಿಯ ಅಧ್ಯಕ್ಷರಾಗಿರಲಿದ್ದಾರೆ. ಉಳಿದಂತೆ ಕನಿಷ್ಠ 10 ವರ್ಷ ಅನುಭವ ಹೊಂದಿರುವ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನ ಸದಸ್ಯ ಸ್ಟ್ರಕ್ಚರ್ ಇಂಜಿನಿಯರ್ ಹಾಗೂ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಯಲ್ಲಿ ತೊಡಗಿಕೊಂಡಿರುವ, 10 ವರ್ಷ ಅನುಭವವಿರುವ ಹಾಗೂ ವಾಸ್ತುಶಿಲ್ಪಿ ಕೌನ್ಸಿಲ್‌ನ ಸದಸ್ಯತ್ವ ಪಡೆದಿರುವ ವಾಸ್ತುಶಿಲ್ಪತಜ್ಞರು ಸಮಿತಿಯ ಭಾಗವಾಗಿರುತ್ತಾರೆ.

ಯಾವುದಾದರು ಒಂದು ನಿರ್ದಿಷ್ಟ ವಿಷಯದಲ್ಲಿ ಪಿಎಚ್‌ಡಿ ಪದವಿ ಪಡೆದಿರುವ ಹಾಗೂ ಪರಿಸರ ಸಂರಕ್ಷಣೆ ವಿಷಯದಲ್ಲಿ ಕನಿಷ್ಠ 10 ವರ್ಷಗಳ ಅನುಭವಿರುವ ಪರಿಸರ ತಜ್ಞ ಮತ್ತು ಸರಕಾರದಿಂದ ಮಾನ್ಯತೆ ಪಡೆದ ಅಕಾಡೆಮಿಯಲ್ಲಿ ಇತಿಹಾಸ ಅಥವಾ ಪುರಾತತ್ವ ವಿಷಯದಲ್ಲಿ ಡಾಕ್ಟರೇಟ್ ಪಡೆದ ಇತಿಹಾಸ, ಪುರಾತತ್ವ ತಜ್ಞರು ಸಮಿತಿ ಸದಸ್ಯರಾಗಬಹುದು.

ಪಾರಂಪರಿಕ ಮನೆಗಳ ಉಳಿವಿಗೂ ಆದ್ಯತೆ: ಚಾಮರಾಜಪೇಟೆ, ಮಲ್ಲೇಶ್ವರ, ಬಸವನಗುಡಿ ಸೇರಿದಂತೆ ನಗರದ ಹಲವು ಹಳೆಯ ಪ್ರದೇಶಗಳಲ್ಲಿ ಶತಮಾನಗಳ ಹಿಂದೆ ನಿರ್ಮಾಣ ಮಾಡಿರುವ ಪಾರಂಪರಿಕ ವಸತಿ ಕಟ್ಟಡಗಳಿದ್ದು, ಅವುಗಳ ಉಳಿವಿಗೂ ಪಾಲಿಕೆ ಸ್ಪಂದಿಸಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ನಗರದ ಹಲವು ಪಾರಂಪರಿಕ ಕಟ್ಟಡಗಳನ್ನು ಗುರುತಿಸುವ ಕೆಲಸವಾಗಿಲ್ಲ. ಗುರುತಿಸಿರುವ ಕಟ್ಟಡದ ಇತಿಹಾಸವನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು. ನಮ್ಮ ಪರಂಪರೆಯ ಬಗ್ಗೆ ಇಂದಿನ ಪೀಳಿಗೆಗೆ ತಿಳಿಸಿದರೆ ನಮ್ಮ ನಗರದ ಬಗ್ಗೆ ಹೆಮ್ಮೆ ಮೂಡಲಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X