Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಂಡೀಸ್‌ನ ಸಮ್ಮಿ ಗೆ ಪಾಕಿಸ್ತಾನದ ಗೌರವ...

ವಿಂಡೀಸ್‌ನ ಸಮ್ಮಿ ಗೆ ಪಾಕಿಸ್ತಾನದ ಗೌರವ ಪೌರತ್ವ

ವಾರ್ತಾಭಾರತಿವಾರ್ತಾಭಾರತಿ22 Feb 2020 10:37 PM IST
share
ವಿಂಡೀಸ್‌ನ ಸಮ್ಮಿ ಗೆ ಪಾಕಿಸ್ತಾನದ ಗೌರವ ಪೌರತ್ವ

ಲಾಹೋರ್, ಫೆ.22: ದೇಶಕ್ಕೆ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಮರಳಲು ಮುಖ್ಯ ಪಾತ್ರವಹಿಸಿದ್ದ ವೆಸ್ಟ್‌ಇಂಡೀಸ್‌ನ ಮಾಜಿ ನಾಯಕ ಡರೆನ್ ಸಮ್ಮಿಗೆ ಪಾಕಿಸ್ತಾನ ಸರಕಾರ ಗೌರವ ಪೌರತ್ವ ನೀಡಿ ಗೌರವಿಸಲು ನಿರ್ಧರಿಸಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಶನಿವಾರ ತಿಳಿಸಿದೆ. ಪ್ರಸ್ತುತ ಐದನೇ ಆವೃತ್ತಿಯ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಪೇಶಾವರ ಝಲ್ಮಿ ತಂಡವನ್ನು ನಾಯಕನಾಗಿ ಮುನ್ನಡೆಸುತ್ತಿರುವ ಸಮ್ಮಿಗೆ ಪಾಕಿಸ್ತಾನದ ಗೌರವ ಪೌರತ್ವ ಹಾಗೂ ಪಾಕ್‌ನ ಅತ್ಯುನ್ನತ ಗೌರವ ನೀಶಾನ್-ಎ-ಹೈದರ್ ಪ್ರಶಸ್ತಿಯನ್ನು ಅಧ್ಯಕ್ಷ ಆರಿಫ್ ಅಲ್ವಿ ಮಾ.23 ರಂದು ಪ್ರದಾನಿಸಲಿದ್ದಾರೆ ಎಂದು ಪಿಸಿಬಿ ತಿಳಿಸಿದೆ. ಸಮ್ಮಿ ಪಿಎಸ್‌ಎಲ್ ಟೂರ್ನಿ ಆರಂಭವಾದಾಗಿನಿಂದ ಟೂರ್ನಿಯಲ್ಲಿ ಆಡುತ್ತಿದ್ದಾರೆ. 2017ರಲ್ಲಿ ಲಾಹೋರ್‌ಗೆ ಆಗಮಿಸಲು ಒಪ್ಪಿಕೊಂಡಿದ್ದ ಸಮ್ಮಿ ಪಾಕಿಸ್ತಾನಕ್ಕೆ ಅಂತರ್‌ರಾಷ್ಟ್ರೀಯ ಕ್ರಿಕೆಟ್ ವಾಪಸ್ ಬರಲು ಪಿಸಿಬಿಗೆ ನೆರವಾಗಿದ್ದರು. ಭದ್ರತಾ ಭೀತಿಯಿಂದಾಗಿ ಅನೇಕ ವಿದೇಶಿ ಆಟಗಾರರು ಪಾಕ್ ಪ್ರವಾಸ ಕೈಗೊಳ್ಳಲು ಹಿಂದೇಟು ಹಾಕಿದ ಸಂದರ್ಭದಲ್ಲಿ ಸಮ್ಮಿ ಪಾಕಿಸ್ತಾನಕ್ಕೆ ಬರಲು ಸಮ್ಮತಿ ವ್ಯಕ್ತಪಡಿಸಿದ್ದರು.

ಲಾಹೋರ್‌ನಲ್ಲಿ ನಡೆದ 2ನೇ ಆವೃತ್ತಿಯ ಪಿಎಸ್‌ಎಲ್‌ನಲ್ಲಿ ಪೇಶಾವರ ತಂಡ ಪ್ರಶಸ್ತಿ ಗೆಲ್ಲಲು ಸಮ್ಮಿ ತಂಡದ ನಾಯಕತ್ವವಹಿಸಿದ್ದರು. ಸಮ್ಮಿ ದೇಶವೊಂದರ ಗೌರವ ಪೌರತ್ವ ಪಡೆಯುತ್ತಿರುವ ಮೂರನೇ ಅಂತರ್‌ರಾಷ್ಟ್ರೀಯ ಕ್ರಿಕೆಟಿಗನಾಗಿದ್ದಾರೆ. ಸಮ್ಮಿಗಿಂತ ಮೊದಲು ಆಸ್ಟ್ರೇಲಿಯದ ಮ್ಯಾಥ್ಯೂ ಹೇಡನ್ ಹಾಗೂ ದಕ್ಷಿಣ ಆಫ್ರಿಕಾದ ಹರ್ಷಲ್ ಗಿಬ್ಸ್‌ಗೆ 2007ರ ವಿಶ್ವಕಪ್‌ನ ಬಳಿಕ ಸೈಂಟ್ ಕಿಟ್ಸ್ ಸರಕಾರ ಗೌರವಾನ್ವಿತ ಪೌರತ್ವ ನೀಡಿತ್ತು.

ಸಮ್ಮಿ ಎರಡು ಬಾರಿ ವೆಸ್ಟ್‌ಇಂಡೀಸ್ ತಂಡ ಟ್ವೆಂಟಿ-20 ವಿಶ್ವಕಪ್ ಜಯಿಸಿದಾಗ ತಂಡದ ನಾಯಕತ್ವವಹಿಸಿಕೊಂಡಿದ್ದು, ಪಾಕಿಸ್ತಾನದಲ್ಲೂ ಜನಪ್ರಿಯ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X