Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೂಜು ಕೇಂದ್ರ, ಹೆಂಡ ಮಾರಾಟದಿಂದ ರಾಜ್ಯದ...

ಜೂಜು ಕೇಂದ್ರ, ಹೆಂಡ ಮಾರಾಟದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ವಿ.ಎಸ್.ಉಗ್ರಪ್ಪ

ವಾರ್ತಾಭಾರತಿವಾರ್ತಾಭಾರತಿ22 Feb 2020 11:28 PM IST
share
ಜೂಜು ಕೇಂದ್ರ, ಹೆಂಡ ಮಾರಾಟದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ವಿ.ಎಸ್.ಉಗ್ರಪ್ಪ

ತುಮಕೂರು, ಫೆ.23: ಜೂಜು ಕೇಂದ್ರ, ಹೆಂಡದ ಮಾರಾಟ ಹೆಚ್ಚಳದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಇಲಾಖೆಯ ಸಂಪನ್ಮೂಲ ಕ್ರೋಡೀಕರಣದ ಹಿನ್ನೆಲೆ, ವಿದೇಶಿಯರ ಆಕರ್ಷಣೆಗಾಗಿ ಕ್ಯಾಸಿನೊದಂತಹ ಜೂಜು ಕೇಂದ್ರ ತೆರೆಯುವುದಾಗಿ ಸಚಿವರಾದ ಸಿ.ಟಿ.ರವಿ ಹೇಳುತ್ತಾರೆ. ಅಬಕಾರಿ ಮಂತ್ರಿಗಳು ಹೆಂಡದ ಮಾರಾಟ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ಸಂಪನ್ಮೂಲ ಸಂಗ್ರಹಕ್ಕೆ ಯುವಜನರಿಗೆ ಮಾರಕವಾದ ಜೂಜು ಕೇಂದ್ರಗಳು ಅಗತ್ಯವೇ ? ಇದೇನಾ ಬಿಜೆಪಿಯ ರಾಷ್ಟ್ರಪ್ರೇಮ ಎಂದು ಪ್ರಶ್ನಿಸಿದರು.

ಕರ್ನಾಟಕದ ಕರಾವಳಿ ತೀರ ಹಾಗು ಹಂಪಿ, ಸೋಮನಾಥಪುರ, ಬೇಲೂರು, ಹಳೇಬೀಡು ರೀತಿಯ ಭವ್ಯ ಕಲೆ ಪ್ರಕೃತಿ ಸಂಪತ್ತು ನಮ್ಮಲ್ಲಿ ಇರುವಾಗ, ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಂಡ, ಜೂಜುಕೇಂದ್ರವೇ ಬೇಕೆ ? ಸರಕಾರ ಇದೇ ರೀತಿ ಮುಂದುವರೆದರೆ, ಜನ ನಿಮ್ಮ ವಿರುದ್ದ ತಿರುಗಿ ಬೀಳಲಿದ್ದಾರೆ ಎಂದು ಎಚ್ಚರಿಸಿದರು

ರಾಜ್ಯದ ನೆರೆ ಸಂತ್ರಸ್ತರಿಗೆ ಇದುವರೆಗೂ ಯಾವುದೇ ಪರಿಹಾರ ದೊರೆತಿಲ್ಲ. ನಿನ್ನೆ ಒಬ್ಬರು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಈ ಸಾವಿನ ಹೊಣೆಯನ್ನು ಸಿಎಂ ಯಡಿಯೂರಪ್ಪ ಮತ್ತು ಅವರ ಸರಕಾರವೇ ಹೊರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು

ಗುತ್ತಿಗೆ ಶಿಕ್ಷಕರಿಗೆ ವೇತನ ನೀಡಲು, ವೃದಾಪ್ಯ, ಅಂಗವಿಕಲ, ವಿಧವಾ ವೇತನ ನೀಡಲು ಸರಕಾರದ ಬಳಿ ಹಣವಿಲ್ಲ. ಈಗಾಗಲೇ ದೇಶದ ಮೇಲೆ 91.1 ಲಕ್ಷ ಕೋಟಿ ಸಾಲ ಇದೆ. ಪುನಃ 8 ಲಕ್ಷ ಕೋಟಿ ಸಾಲ ಮಾಡಲಾಗುತ್ತಿದೆ. ವಿದೇಶಿ ಶೋಕಿಗೋಸ್ಕರ ದೇಶದ ತೆರಿಗೆ ಹಣ ಪೋಲಾಗುತ್ತಿದೆ. ಇದಕ್ಕೆಲ್ಲಾ ಮೋದಿಯವರ ತಪ್ಪು ಅರ್ಥಿಕ ನೀತಿಗಳೇ ಕಾರಣ. ಇದನ್ನು ಮರೆಮಾಚಲು ಜನರನ್ನು ಭಾವನಾತ್ಮಕ ವಿಚಾರಗಳ ಮೂಲಕ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಉಗ್ರಪ್ಪ ಆರೋಪಿಸಿದರು.

ಕಾಂಗ್ರೆಸ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ. ರಾಷ್ಟ್ರ ವಿರೋಧಿಗಳನ್ನು ಎಂದಿಗೂ ಬೆಂಬಲಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಬಗ್ಗೆ ಆಧಾರ ರಹಿತ ಆರೋಪವನ್ನು ಪಕ್ಷ ಎಂದಿಗೂ ಸಹಿಸದು ಎಂದರು.

ಇತ್ತೀಚೆಗೆ ಉತ್ತರಾಖಂಡ ಸರಕಾರದ ಕೇಸ್ ಒಂದಕ್ಕೆ ಸಂಬಂದಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಸಂವಿಧಾನದ ಕಲಂ 15ಎ ಗೆ ವಿರುದ್ಧವಾಗಿದೆ. ದೇಶದಲ್ಲಿ ಮನುವಾದ-ಅಂಬೇಡ್ಕರ್ ವಾದ, ಗಾಂಧಿ ವಾದ- ಗೋಡ್ಸೆ ವಾದದ ನಡುವೆ ಸಂಘರ್ಷ ಏರ್ಪಟ್ಟಿದೆ. ಕಾಂಗ್ರೆಸ್ ಅಂಬೇಡ್ಕರ್ ಮತ್ತು ಗಾಂಧಿ ವಾದವನ್ನು ಅನುಸರಿಸುತ್ತದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗು ಜಿ.ಪಂ ಸದಸ್ಯ ಕೆಂಚಮಾರಯ್ಯ, ಮುಖಂಡರಾದ ನಿರಂಜನ್, ಹೆಚ್.ಸಿ ಹನುಮಂತಯ್ಯ, ನರಸೀಯಪ್ಪ, ಮಂಜುನಾಥ್, ನಾಗರಾಜು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X