Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಯ ಗುಣಗಾನ ಅತ್ಯಂತ ಅಸಮಂಜಸ:...

ಪ್ರಧಾನಿ ಮೋದಿಯ ಗುಣಗಾನ ಅತ್ಯಂತ ಅಸಮಂಜಸ: ನ್ಯಾ.ಅರುಣ್ ಮಿಶ್ರಾಗೆ ನಿವೃತ್ತ ನ್ಯಾಯಾಧೀಶರ ತರಾಟೆ

ವಾರ್ತಾಭಾರತಿವಾರ್ತಾಭಾರತಿ23 Feb 2020 3:14 PM IST
share
ಪ್ರಧಾನಿ ಮೋದಿಯ ಗುಣಗಾನ ಅತ್ಯಂತ ಅಸಮಂಜಸ: ನ್ಯಾ.ಅರುಣ್ ಮಿಶ್ರಾಗೆ ನಿವೃತ್ತ ನ್ಯಾಯಾಧೀಶರ ತರಾಟೆ

ಹೊಸದಿಲ್ಲಿ,ಫೆ.23: ಶನಿವಾರ ಇಲ್ಲಿ ಅಂತರರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನದಲ್ಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಅರುಣ್ ಮಿಶ್ರಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭರ್ಜರಿಯಾಗಿ ಹೊಗಳಿದ್ದಕ್ಕೆ ಹಲವಾರು ನಿವೃತ್ತ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೋದಿ,ಮುಖ್ಯ ನ್ಯಾಯಾಧೀಶ ಎಸ್.ಎ.ಬೊಬ್ಡೆ ಮತ್ತು ಕಾನೂನು ಸಚಿವ ರವಿಶಂಕರ ಪ್ರಸಾದ್ ಅವರ ಭಾಷಣಗಳ ನಂತರ ಆಭಾರ ಮನ್ನಣೆ ಕಾರ್ಯವನ್ನು ನಿರ್ವಹಿಸಿದ್ದ ನ್ಯಾ.ಮಿಶ್ರಾ ಅವರು,ಅಂತರರಾಷ್ಟ್ರೀಯ ಪ್ರಶಂಸೆಗೆ ಪಾತ್ರರಾಗಿರುವ,ದೂರದೃಷ್ಟಿಯ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಸಂವಿಧಾನದ ಬಾಧ್ಯತೆಗಳಿಗೆ ಬದ್ಧವಾಗಿದೆ ಮತ್ತು ವಿಶ್ವದಲ್ಲಿ ಜವಾಬ್ದಾರಿಯುತ ಹಾಗೂ ಸ್ನೇಹಪ್ರಿಯ ದೇಶವಾಗಿದೆ ಎಂದು ಹೇಳಿದ್ದರು. ಬಹುಮುಖ ಪ್ರತಿಭಾನ್ವಿತ, ಜಾಗತಿಕವಾಗಿ ಚಿಂತನೆಯೊಂದಿಗೆ ಸ್ಥಳೀಯವಾಗಿ ಕಾರ್ಯಾಚರಿಸುವ ಮೋದಿಯವರ ಸ್ಫೂರ್ತಿದಾಯಕ ಭಾಷಣವು ಈ ಸಮ್ಮೇಳನವನ್ನು ಆರಂಭಿಸಲು ಮತ್ತು ಅದರ ಅಜೆಂಡಾವನ್ನು ನಿಗದಿಗೊಳಿಸಲು ಉತ್ತೇಜನವನ್ನು ನೀಡಿದೆ ಎಂದೂ ನ್ಯಾ.ಮಿಶ್ರಾ ಹೊಗಳಿದ್ದರು.

 ಪ್ರಧಾನಿಯವರಿಗೆ ಅಗೌರವವನ್ನು ಸೂಚಿಸುವುದು ತನ್ನ ಉದ್ದೇಶವಲ್ಲ. ಆದರೆ ಸರ್ವೋಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ಇಂತಹ ಹೇಳಿಕೆಗಳ ಬಗ್ಗೆ ತಾನು ಅಸಮಾಧಾನವನ್ನು ದಾಖಲಿಸಲೇಬೇಕಿದೆ. ಹಾಲಿ ನ್ಯಾಯಾಧೀಶರೋರ್ವರು ಕಾರ್ಯಾಂಗದ ಮುಖ್ಯಸ್ಥರನ್ನು ಈ ಪರಿಯಾಗಿ ಹೊಗಳುವುದು ಅನುಚಿತವಾಗುತ್ತದೆ. ಇದು ಸಂಪೂರ್ಣವಾಗಿ ಅನಗತ್ಯವಾಗಿತ್ತು ಮತ್ತು ಇಂತಹ ಹೇಳಿಕೆಗಳನ್ನು ನೀಡುವುದು ನ್ಯಾಯಾಂಗದ ಸ್ವತಂತ್ರತೆಯ ಬಗ್ಗೆ ಶಂಕೆಯನ್ನು ಹುಟ್ಟಿಸುತ್ತದೆ. ನ್ಯಾಯಾಧೀಶರು ಇಂತಹ ಹೇಳಿಕೆಗಳನ್ನು ನೀಡುವುದರಿಂದ ದೂರವಿರಬೇಕು ಎಂದು ದಿಲ್ಲಿ ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಾಧೀಶ ಹಾಗೂ ಕಾನೂನು ಆಯೋಗದ ಮಾಜಿ ಅಧ್ಯಕ್ಷ ನ್ಯಾ(ನಿವೃತ್ತ).ಎ.ಪಿ.ಶಾ ಹೇಳಿದರು.

ಇಂತಹ ಹೇಳಿಕೆಗಳು ನ್ಯಾಯಾಂಗ ಮತ್ತು ಸರಕಾರವು ಕಕ್ಷಿಯಾಗಿರುವ ಪ್ರಕರಣಗಳ ವಿಚಾರಣೆಯನ್ನು ಆಗಾಗ್ಗೆ ನಡೆಸಬೇಕಿರುವ ನ್ಯಾಯಾಧೀಶರ ವಸ್ತುನಿಷ್ಠತೆಯ ಬಗ್ಗೆ ತಪ್ಪು ಸಂದೇಶಗಳನ್ನು ರವಾನಿಸಬಲ್ಲವು ಎಂದು ಹೇಳಿದ ದಿಲ್ಲಿ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಆರ್.ಎಸ್.ಸೋಧಿ ಅವರು,ಸರಕಾರವು ಕಕ್ಷಿದಾರನಾಗಿದೆ ಮತ್ತು ಕಾನೂನಿನ ಆಡಳಿತದಲ್ಲಿ ಅದು ಇತರ ಕಕ್ಷಿದಾರರಿಗೆ ಸಮನಾಗಿದೆ. ಪ್ರಧಾನಿಯವರ ಬೆನ್ನು ಚಪ್ಪರಿಸುವ ಅಥವಾ ಅಂತಹ ಯಾವುದೇ ಕೆಲಸವನ್ನೆಂದೂ ಮಾಡಬಾರದು. ಹಾಗೆ ಮಾಡಿದರೆ ಮಾನ್ಯ ನ್ಯಾಯಾಧೀಶರು ಪ್ರಕರಣಗಳ ವಿಚಾರಣೆ ನಡೆಸುವಾಗ ವಸ್ತುನಿಷ್ಠರಾಗಿರುವುದಿಲ್ಲ ಎಂಬ ತಪ್ಪು ಸಂದೇಶವನ್ನು ನೀಡುತ್ತದೆ ಎಂದರು.

ನ್ಯಾಯಾಂಗವು ಸ್ವತಂತ್ರ ಸಂಸ್ಥೆಯಾಗಿರುವುದರಿಂದ ತಮ್ಮ ಅಭಿಪ್ರಾಯಗಳನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಬಾರದು ಎಂಬ ಸಂಪ್ರದಾಯವು ನ್ಯಾಯಾಧೀಶರಲ್ಲಿದೆ ಎಂದ ಅವರು,ನ್ಯಾ.ಮಿಶ್ರಾ ಅವರೂ ಈ ಸಂಪ್ರದಾಯಕ್ಕೆ ಬದ್ಧರಾಗಿರಬೇಕು ಎಂದು ತಾನು ಭಾವಿಸಿದ್ದೇನೆ. ಸಂಪ್ರದಾಯಗಳನ್ನು ಗೌರವಿಸಬೇಕು ಮತ್ತು ಅವುಗಳನ್ನು ಪಾಲಿಸಬೇಕು ಎಂದರು.

ಹಾಲಿ ನ್ಯಾಯಾಧೀಶರೋರ್ವರು ಪ್ರಧಾನಿಯನ್ನು ಈ ರೀತಿಯಲ್ಲಿ ಹೊಗಳುವುದು ಅತ್ಯಂತ ಅಸಮಂಜಸವಾಗಿದೆ ಎಂದು ಹೇಳಿದ ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಪಿ.ಬಿ.ಸಾವಂತ ಅವರು,ಇದು ವರ್ಷದ ಅತ್ಯುತ್ತಮ ತಮಾಷೆಯಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X