Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬರಹಗಾರರು ಬೀದಿಗೆ ಬಂದು ಹೋರಾಡಬೇಕು:...

ಬರಹಗಾರರು ಬೀದಿಗೆ ಬಂದು ಹೋರಾಡಬೇಕು: ಪ್ರೊ.ಬರಗೂರು ರಾಮಚಂದ್ರಪ್ಪ

ಎಚ್.ಎಲ್.ಪುಷ್ಪಾರವರ ಪುಸ್ತಕಗಳ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ23 Feb 2020 5:51 PM IST
share
ಬರಹಗಾರರು ಬೀದಿಗೆ ಬಂದು ಹೋರಾಡಬೇಕು: ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು, ಫೆ.23: ದಲಿತ, ಬಂಡಾಯದ ಕಾಲಘಟ್ಟವಾದ 70, 80ರ ದಶಕಗಳಿಗಿಂತ ಇವತ್ತಿನ ದಿನಗಳಲ್ಲಿ ಸಾಹಿತಿಗಳು, ಬರಹಗಾರರು ಬೀದಿಗೆ ಬಂದು ಜನರ ಹೋರಾಟದಲ್ಲಿ ಭಾಗಿಗಳಾಗಬೇಕಿದೆ ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಿಸಿದ್ದಾರೆ.

ರವಿವಾರ ಸಂಸ ಥಿಯೇಟರ್ ಹಾಗೂ ಕಿರಂ ಪ್ರಕಾಶನ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಹಿರಿಯ ಕವಯತ್ರಿ ಎಚ್.ಎಲ್.ಪುಷ್ಪರವರ ಮದರಂಗಿ ವೃತ್ತಾಂತ, ಸೋಲಾಬರಸ್ ಹುಡುಗರು ಹಾಗೂ ಎಕ್ಕದ ಬೀಜ ಹಾಗೂ ಅಮೃತಮತಿ ಸ್ವಗತ ಕೃತಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ದಲಿತ ಹಾಗೂ ಬಂಡಾಯ ಚಳವಳಿಯ ಆರಂಭದ ದಿನಗಳಲ್ಲಿ ಬರಹಗಾರರು ಬೀದಿಗೆ ಬಂದು ಜನಚಳವಳಿಯಲ್ಲಿ ಭಾಗಿಗಳಾಗಬೇಕೆಂದು ಕರೆ ನೀಡುತ್ತಿದ್ದೆವು. ಆಗ ಸಾಕಷ್ಟು ಮಂದಿ ಬರಹಗಾರರು ಹೋರಾಟಗಳಲ್ಲಿ ನಿರಂತರವಾಗಿ ಭಾಗವಹಿಸಿರುವುದನ್ನು ಕಾಣುತ್ತೇವೆ. ಈಗ ಅದಕ್ಕಿಂತಲೂ ಆತಂಕದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಬರಹಗಾರರ, ಸಾಹಿತಿಗಳು ಜನಚಳವಳಿಯೊಂದಿಗೆ ನಿಲ್ಲಬೇಕಾದ ಪರಿಸ್ಥಿತಿಯಲ್ಲಿದ್ದೇವೆಂದು ಅವರು ತಿಳಿಸಿದರು.

ಸ್ತ್ರೀ ಸ್ವಾತಂತ್ರ್ಯ ಎನ್ನುವುದು ಅವಳ ಆಯ್ಕೆಯ ವಿಷಯವಾಗಬೇಕೆ ವಿನಃ ಪುರುಷ ನೀಡುವ ಭಿಕ್ಷೆಯಾಗಬಾರದು ಹಾಗೂ ನವ್ಯ ಕಾಲಘಟ್ಟದಲ್ಲಿ ಹೆಚ್ಚು ಪ್ರವರ್ಧಮಾನಕ್ಕೆ ಬಂದ ಮಹಿಳೆಯ ಲೈಂಗಿಕ ಸ್ವಾತಂತ್ರ್ಯ ಒಂದೇ ಮಹಿಳೆಯರ ಬಿಡುಗಡೆಯಲ್ಲ ಎಂಬುದನ್ನು ಸಹ ನಾವು ಮನಗಾಣಬೇಕಿದೆ ಎಂದು ಅವರು ಹೇಳಿದರು.

ಕಾವ್ಯ ಅನ್ನುವುದು ಬಹಿರಂಗ ಹಾಗೂ ಅಂತರಂಗದ ಅನುಸಂಧಾನದಲ್ಲಿ ಸೃಷ್ಟಿಯಾಗುವಂತಹದ್ದಾಗಿದೆ. ಚಳವಳಿಯಲ್ಲಿ ಕಂಡುಂಡ ಅನುಭವವನ್ನೇ ತನ್ನ ಕಾವ್ಯ ಹಾಗೂ ಇನ್ನಿತರೆ ಬರಹ ರೂಪದಲ್ಲಿ ಸೃಜನಾತ್ಮಕವಾಗಿ ಕಟ್ಟಿಕೊಡುವುದೇ ಬರಹಗಾರರ ಸವಾಲಾಗಿದೆ. ಇದರಲ್ಲಿ ಕವಯತ್ರಿ ಎಚ್.ಎಲ್.ಪುಷ್ಪಾ ಯಶಸ್ವಿಯಾಗಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ಕವಯತ್ರಿ ಎಂ.ಎಸ್.ಆಶಾದೇವಿ ಮಾತನಾಡಿ, ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳಾ ಕಾವ್ಯ ಪರಂಪರೆಯ ಅಭಿವ್ಯಕ್ತಿಗಳನ್ನು ನೋಡಬೇಕಾಗಿರುವ ಸಂವೇದನೆ ಇವತ್ತಿಗಾದರೂ ರೂಪಗೊಂಡಿದಿಯೇ ಎಂಬ ಪ್ರಶ್ನೆ ಇವತ್ತಿಗೂ ಹಾಗೆಯೇ ಉಳಿದಿದೆ ಎಂದು ವಿಷಾದಿಸಿದರು.

ನಮ್ಮ ಸಾಹಿತ್ಯ ಕ್ಷೇತ್ರವು ಪುರುಷ ಅನುಭವವನ್ನೇ ಮಾನವ ಅನುಭವವೆಂದು ಕರೆಯಲಾಗಿದೆ. ಇಲ್ಲಿ ಮಹಿಳಾ ಮೀಮಾಂಸೆಗೆ ಜಾಗವೇ ಇಲ್ಲವಾಗಿದೆ. ಅದು ತಳ ಸಮುದಾಯದ ಅಸ್ಮಿತೆಗಾಗಿ ರೂಪಗೊಂಡ ದಲಿತ, ಬಂಡಾಯ ಚಳವಳಿಯಲ್ಲಿಯೂ ಮಹಿಳಾ ಸಂವೇದನೆಗೆ ಎಷ್ಟು ಜಾಗವಿದೆ ಎಂಬುದನ್ನು ಹುಡುಕಬೇಕಿದೆ ಎಂದು ಅವರು ಹೇಳಿದರು.

ರಾಮಾಯಣದ ಸೀತೆಯ ಬದುಕನ್ನು ಪುರುಷ ನೋಡುವುದಕ್ಕೂ ಮಹಿಳಾ ನಿರೂಪಿಸುವುದಕ್ಕೂ ಬಹಳ ವ್ಯತ್ಯಾಸವಿದೆ. ಇದನ್ನು ಇವತ್ತಿನ ಸಾಹಿತ್ಯ ಗಂಭೀರವಾಗಿ ಅವಲೋಕಿಸಬೇಕಿದೆ ಎಂದು ಅವರು ಅಭಿಪ್ರಾಯಿಸಿದರು. ಈ ವೇಳೆ ಕವಯತ್ರಿ ಎಚ್.ಎಲ್.ಪುಷ್ಪಾ, ಪ್ರತಿಭಾ ನಂದಕುಮಾರ್ ಹಾಗೂ ಡಾ.ಕವನಾ ಮತ್ತಿತರರಿದ್ದರು.

ಕವಿತೆ ಓದುವವರನ್ನು ಜೈಲಿಗೆ ಹಾಕುವ ಇವತ್ತಿನ ಸಂದರ್ಭದಲ್ಲಿ ಕವಯತ್ರಿ ಎಚ್.ಎಲ್.ಪುಷ್ಪಾ ಮೂರ್ನಾಲ್ಕು ದಶಕದ ಕವಿತೆಗಳು ಇವತ್ತಿನ ರಾಜಕೀಯ, ಸಾಮಾಜಿಕ ಸನ್ನಿವೇಶಕ್ಕೆ ಅಗತ್ಯ ಎನ್ನಿಸುವಂತಿದೆ. ಇವತ್ತಿನ ನೇತಾರರು ಧ್ವೇಷದಿಂದ ಕೂಡಿದ್ದ ಮಾತುಗಳನ್ನೇ ಬಳಸುವ ಮೂಲಕ ಭಾಷೆಯನ್ನು ಭ್ರಷ್ಟಗೊಳಿಸುತ್ತಿದ್ದಾರೆ. ಹೀಗಾಗಿ ಜನಪರಂಪರೆಯ ಆಡಳಿತ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಸಾಹಿತಿಗಳು ಜನ ಚಳವಳಿಯ ಭಾಗವಾಗಬೇಕಿದೆ.

-ಪ್ರೊ.ಬರಗೂರು ರಾಮಚಂದ್ರಪ್ಪ, ಹಿರಿಯ ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X