Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಮಾಜಿಕ ಸೇವೆಗೆ ನಿಧಿ ಸಂಗ್ರಹಕ್ಕಾಗಿ...

ಸಾಮಾಜಿಕ ಸೇವೆಗೆ ನಿಧಿ ಸಂಗ್ರಹಕ್ಕಾಗಿ ‘ಆರ್‌ಆರ್ ರನ್ ಮ್ಯಾರಾಥಾನ್‌‘

ವಾರ್ತಾಭಾರತಿವಾರ್ತಾಭಾರತಿ23 Feb 2020 6:19 PM IST
share
ಸಾಮಾಜಿಕ ಸೇವೆಗೆ ನಿಧಿ ಸಂಗ್ರಹಕ್ಕಾಗಿ ‘ಆರ್‌ಆರ್ ರನ್ ಮ್ಯಾರಾಥಾನ್‌‘

ಬೆಂಗಳೂರು, ಫೆ. 23: ಮಕ್ಕಳ ಶಿಕ್ಷಣ, ಮಹಿಳಾ ಆರೋಗ್ಯ ಜಾಗೃತಿ ಸೇರಿದಂತೆ ಮತ್ತಿತರೆ ಸಾಮಾಜಿಕ ಸೇವೆಗಳಿಗಾಗಿ ಹಣ ಸಂಗ್ರಹ ಮಾಡುವ ಉದ್ದೇಶದಿಂದ ರಾಜರಾಜೇಶ್ವರಿನಗರ ಕೇಂದ್ರ ರೋಟರಿ ಹಾಗೂ ಮೈನ್‌ಟ್ರೀ ಸಂಸ್ಥೆಯ ವತಿಯಿಂದ ಆರ್‌ಆರ್ ರನ್ ಮ್ಯಾರಾಥಾನ್ ಅನ್ನು ಆಯೋಜಿಸಲಾಗಿತ್ತು.

ರವಿವಾರ ಮುಂಜಾನೆ ಐದು ಗಂಟೆಗೆ ರಾಜರಾಜೇಶ್ವರಿ ನಗರದಲ್ಲಿರುವ ಗ್ಲೋಬಲ್ ವಿಲೇಜ್‌ನಲ್ಲಿ ಆಯೋಜಿಸಿದ್ದ ಮ್ಯಾರಾಥಾನ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಕ್ಕಳು, ವಿದ್ಯಾರ್ಥಿಗಳು, ಯುವಕರು, ಹಿರಿಯರು ಪಾಲ್ಗೊಂಡಿದ್ದರು. ರೋಟರಿ ಜಿಲ್ಲಾ ಗವರ್ನರ್ ಸಮೀರ್ ಹರಿಯಾನಿ ಮ್ಯಾರಾಥಾನ್‌ಗೆ ಚಾಲನೆ ನೀಡಿದರು.

ಈ ವರ್ಷ 21ಕೆ, 10ಕೆ, 5ಕೆ ಹಾಗೂ 2 ಕೆ(ಫನ್ ರನ್ ಅಂಡ್ ವಾಕ್) ಎಂಬ ನಾಲ್ಕು ವಿಭಾಗಗಳಲ್ಲಿ ಮ್ಯಾರಾಥಾನ್ ಆಯೋಜಿಸಲಾಗಿತ್ತು. ಇದರಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯದವರು, ದೇಶದ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಇದ್ದರು. ವಿವಿಧ ಕಾರ್ಪೋರೇಟ್ ಕಂಪೆನಿಗಳಲ್ಲಿ ಕೆಲಸ ಮಾಡುವವರು, ವೃತ್ತಿಪರ ಓಟಗಾರರು, ತಾಂತ್ರಿಕ ವೃತ್ತಿಪರರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಪಾಲುದಾರರಾಗಿ ಮೈಂಡ್‌ ಟ್ರೀ ಮುಖ್ಯವಾದ ಪಾತ್ರ ವಹಿಸಿದ್ದರೆ, ರಾಜರಾಜೇಶ್ವರಿ ನಗರ ರೋಟರಿಯು ಶತಮಾನೋತ್ಸವದ ಭಾಗವಾಗಿ ಪಾಲ್ಗೊಂಡಿತ್ತು. ಇನ್ನು, ಡೈರಿ ಡೇ ಐಸ್ ಕ್ರೀಂ, ವೈದ್ಯಕೀಯ ಪಾಲುದಾರರಾಗಿ ಎಸ್‌ಎಸ್‌ಎನ್‌ಎಂಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಎಸ್ಸೀ ಎಂಟರ್ ಪ್ರೈಸಸ್, ಸಿನೆಕ್ರೋನ, ಮಾಲು ವೈರ್ಸ್ ಸೇರಿದಂತೆ ಅನೇಕರು ಬೆಂಬಲಿಸಿದ್ದರು. ಇದೇ ವೇಳೆ ‘ವಾರ್ತಾಭಾರತಿ’ ಮಾಧ್ಯಮ ಸಹಭಾಗಿತ್ವ ನೀಡಲಾಗಿತ್ತು.

ಮ್ರೈಂಡ್‌ಟ್ರೀ ಸಂಸ್ಥೆಯ ಮುಖ್ಯಸ್ಥ ಶ್ಯಾಮ್ ಪ್ರಸಾದ್ ಮಾತನಾಡಿ, ರೋಟರಿ ಸೇರಿದಂತೆ ಮತ್ತಿತರೆ ಸಂಸ್ಥೆಗಳು ಸಾಮಾಜಿಕ ಕೆಲಸಗಳನ್ನು ಮಾಡುತ್ತಿವೆ. ಅವುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಮ್ಯಾರಾಥಾನ್ ಆಯೋಜಿಸಲಾಗಿದೆ. ಈ ಮೂಲಕ ಬರುವ ಹಣವನ್ನು ಸಮಾಜ ಸೇವಾ ಚಟುವಟಿಕೆಗಳಿಗೆ ವಿನಿಯೋಗಿಸುತ್ತೇವೆ ಎಂದು ಹೇಳಿದರು.

ಆರ್‌ಆರ್‌ರನ್ ಮ್ಯಾರಾಥಾನ್‌ನ ಉದ್ದೇಶ ಮಕ್ಕಳ ಶಿಕ್ಷಣ, ಸರಕಾರಿ ಶಾಲೆಗಳ ಸುಧಾರಣೆ, ಮೂಲ ಸೌಕರ್ಯ ಕಲ್ಪಿಸುವುದು, ಮಹಿಳೆಯರ ಆರೋಗ್ಯ ರಕ್ಷಣೆ, ಹಿರಿಯ ನಾಗರೀಕರು, ನೀರು ಮತ್ತು ನೈರ್ಮಲ್ಯ ಸೇರಿದಂತೆ ಹಲವು ಸಾಮಾಜಿಕ ಸೇವೆಗಳನ್ನು ಮಾಡುವುದಕ್ಕೆ ಹಣ ಸಂಗ್ರಹಿಸುವುದಾಗಿದೆ. ಇದಕ್ಕೆ ನೋಂದಣಿ ಮಾಡಿಕೊಂಡವರಿಂದ ಸಂಗ್ರಹವಾದ ಹಣವನ್ನು ಇದಕ್ಕೆ ಮೀಸಲಿಡಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮ್ಯಾರಾಥಾನ್‌ನಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. 21-ಕೆ ಪುರುಷ ವಿಭಾಗದಲ್ಲಿ ಡೇನಿಯಲ್ ಲಂಗಾಟ್, ಮಹಿಳಾ ವಿಭಾಗದಲ್ಲಿ ಕೆ.ಎಂ.ಅರ್ಚನಾ ಹಾಗೂ 10-ಕೆ ಪುರುಷ ವಿಭಾಗದಲ್ಲಿ ಎ.ಬಿ.ಚೆಂಗಪ್ಪ, ಮಹಿಳಾ ವಿಭಾಗದಲ್ಲಿ ಬಿಮ್ಲಾ ಚಂದ್ ಪ್ರಶಸ್ತಿ ಪಡೆದರು. ಈ ವೇಳೆ ರನ್‌ನ ಬ್ರಾಂಡ್ ಅಂಬಾಸಿಡರ್ ವನಿತಾ ಅಶೋಕ್, ಆರ್‌ಆರ್ ರನ್‌ನ ಉಪಾಧ್ಯಕ್ಷ ಸತೀಶ್ ಮಾಧವನ್, ಶಶಿಧರ್, ಕಾರ್ತಿಕ್, ಡಾ.ಕಿರಣ್ ರಾವ್ ಸೇರಿದಂತೆ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X