Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿಯಿಂದ ಆರೋಗ್ಯ, ನೆಮ್ಮದಿ ದೊರೆಯಲು...

ಕೃಷಿಯಿಂದ ಆರೋಗ್ಯ, ನೆಮ್ಮದಿ ದೊರೆಯಲು ಸಾಧ್ಯ: ಮುನಿರಾಜ

ಉಡುಪಿ ಜಿಲ್ಲಾ ಮಟ್ಟದ ‘ರೈತ ಸಮಾವೇಶ’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ23 Feb 2020 7:41 PM IST
share
ಕೃಷಿಯಿಂದ ಆರೋಗ್ಯ, ನೆಮ್ಮದಿ ದೊರೆಯಲು ಸಾಧ್ಯ: ಮುನಿರಾಜ

ಉಡುಪಿ, ಫೆ. 23: ಕೃಷಿ ಉದ್ಯೋಗ ಅಲ್ಲ. ಅದು ಬದುಕು ಆಗಿದೆ. ಅದಕ್ಕೆ ಬೇರೆ ಉದ್ಯೋಗಗಳಂತೆ ಸಮಯದ ಮಿತಿ ಎಂಬುದು ಇಲ್ಲ. ಆರೋಗ್ಯ ಮತ್ತು ನೆಮ್ಮದಿ ಒಳ್ಳೆಯ ರೈತನಿಗೆ ಮಾತ್ರ ಸಿಗಲು ಸಾಧ್ಯ. ದುಡಿಯುವುದರಿಂದ ಆರೋಗ್ಯ ಸಿಕ್ಕಿದರೆ, ತಾನು ಬೆಳೆದ ಬೆಳೆಯಿಂದ ನೆಮ್ಮದಿಯನ್ನು ಪಡೆದು ಕೊಳ್ಳಬಹುದಾಗಿದೆ ಕಾರ್ಕಳದ ಚಿಂತಕ ಮುನಿರಾಜ ರೆಂಜಾಳ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ರವಿವಾರ ಕುಂಜಿಬೆಟ್ಟಿನಲ್ಲಿರುವ ಶ್ರೀಶಾರದಾ ಮಂಟಪದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ‘ರೈತ ಸಮಾವೇಶ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ರವಿವಾರ ಕುಂಜಿಬೆಟ್ಟಿನಲ್ಲಿರುವ ಶ್ರೀಶಾರದಾ ಮಂಟಪದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ‘ರೈತ ಸಮಾವೇಶ’ದ ಉದ್ಘಾಟನಾ ಸಮಾರಂದಲ್ಲಿಅವರುದಿಕ್ಸೂಚಿಾಷಣ ಮಾಡಿದರು. ರೈತರ ಬದುಕೇ ನಿಜವಾದ ಅರ್ಥಪೂರ್ಣ ಬದುಕು ಆಗಿದೆ. ಆರೋಗ್ಯಕ್ಕಾಗಿ ವಾಕಿಂಗ್, ಮಡ್ ಥೆರಫಿ, ಜಿಮ್‌ಗಳನ್ನು ಮಾಡುವ ಜನರಿಗೆ ಇದೆಲ್ಲವೂ ಕೃಷಿಯಿಂದ ಸಿಗುತ್ತದೆ ಎಂಬ ಅರಿವು ಇಲ್ಲವಾಗಿದೆ. ಇಂದು ಕೃಷಿ ಸಂಸ್ಕೃತಿಯು ಬದಲಾಗುತ್ತಿದೆ. ಅದನ್ನು ಉಳಿಸಿಕೊಳ್ಳುವುದು ಇಂದಿನ ಅನಿವಾರ್ಯತೆ ಆಗಿದೆ. ಕೃಷಿಯಲ್ಲಿ ಆದಾಯದ ಕೊರತೆ ಇದೆ. ಅದನ್ನು ನಿವಾರಿಸುವ ಬಗ್ಗೆ ಚರ್ಚೆಗಳು ನಡೆಯಬೇಕಾಗಿದೆ. ಕೃಷಿ ಸಂಸ್ಕೃತಿಗೆ ಜಾತಿ, ಧರ್ಮ ಎಂಬ ಮಿತಿ ಇಲ್ಲ ಎಂದು ಅವರು ತಿಳಿಸಿದರು.

ಸಮಾವೇಶವನ್ನು ಉದ್ಘಾಟಿಸಿದ ಕರ್ಣಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಉಡುಪಿ ವಲಯದ ಎಜಿಎಂ ಬಿ.ಗೋಪಾಲಕೃಷ್ಣ ಸಾಮಗ ಮಾತನಾಡಿ, ಕೃಷಿ ಸಾಲ ಮನ್ನಾದಲ್ಲಿ ಕೃಷಿಕರಿಗೆ ಅನ್ಯಾಯ ಆಗದಂತೆ ಸರಕಾರಗಳು ಕಾಳಜಿ ವಹಿಸುತ್ತಿವೆ. ಬ್ಯಾಂಕಿನ ವಾರ್ಷಿಕ ಒಟ್ಟು ಸಾಲದಲ್ಲಿ ಶೇ.18ರಷ್ಟು ಸಾಲವನ್ನು ಕೃಷಿಗೆ ನೀಡಲಾಗುತ್ತಿದೆ. ದೇಶದಲ್ಲಿ ಬ್ಯಾಂಕ್‌ಗಳು ನೀಡುವ ಒಟ್ಟು 11914 ಕೋಟಿ ರೂ. ಸಾಲದಲ್ಲಿ 1248ಕೋಟಿ ರೂ. ಸಾಲವನ್ನು ಕೃಷಿಗೆ ನೀಡ ಲಾಗುತ್ತಿದೆ ಎಂದು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಭಾರತವು ಕೃಷಿ ಮಾರುಕಟ್ಟೆಯಲ್ಲಿ ಆರನೇ ಸ್ಥಾನದಲ್ಲಿದೆ. 2019-20ನೆ ಸಾಲಿನಲ್ಲಿ ಭಾರತ ಸರಕಾರ 291 ಮಿಲಿಯನ್ ಟನ್ ಆಹಾರ ಉತ್ಪಾದಿಸುವ ಗುರಿಯನ್ನು ಹೊಂದಿದೆ. ಅದಕ್ಕಾಗಿ 92.60ಮಿಲಿಯನ್ ಹೆಕ್ಟೇರ್ ಪ್ರದೇಶದಲ್ಲಿ ತಾರೀಫ್ ಬೆಳೆಯನ್ನು ಬೆಳೆಸಲಿದೆ. ಅದೇ ರೀತಿ ಕೃಷಿ ಉತ್ಪನ್ನಗಳ ರಫ್ತಿನಲ್ಲಿಯೂ ದೇಶ ಸಾಕಷ್ಟು ಮುಂದಿದೆ. ಕೃಷಿ ಅಭಿವೃದ್ಧಿಗೆ ವಿದೇಶಿ ಬಂಡವಾಳ ಅತಿ ಅಗತ್ಯವಾಗಿದ್ದು, ಕಳೆದ 10ವರ್ಷಗಳಲ್ಲಿ 9.41ಮಿಲಿಯನ್ ಯುಎಸ್ ಡಾಲರ್ ಬಂಡವಾಳವು ದೇಶಕ್ಕೆ ಹರಿದುಬಂದಿದೆ ಎಂದರು.

ರೈತ ಈ ದೇಶದ ಸ್ವಾಭಿಮಾನದ ಸಂಕೇತ. ಕೃಷಿ ಪ್ರಧಾನ ವಾಗಿರುವ ಭಾರತದಲ್ಲಿ ಶೇ.58ರಷ್ಟು ಮಂದಿ ಕೃಷಿಯನ್ನು ಅವಲಂಬಿಸಿಕೊಂಡು ಬದುಕು ನಡೆಸುತ್ತಿದ್ದಾರೆ. ಆದರೆ ಇಂದಿನ ಯುವ ಜನಾಂಗ ಕೃಷಿಯಿಂದ ದೂರ ಸರಿಯುತ್ತಿದೆ. ಕೃಷಿಗೆ ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂಬುದನ್ನು ಅರ್ಥ ಮಾಡಿಕೊಂಡು ಅದರಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮಾ ಬಂಟಕಲ್ಲು ವಹಿಸಿ ದ್ದರು. ರೋಟರಿ ಜಿಲ್ಲೆ ಟೀಚರ್ಸ್ ಸಪೋರ್ಟ್ ಅಧ್ಯಕ್ಷ ಮಂಜುನಾಥ ಉಪಾಧ್ಯ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಹಿರಿಯ ಕೃಷಿಕರಾದ ಪ್ರಸಾದ್ ಶೆಟ್ಟಿ ನಿಟ್ಟೂರು, ವೇಣುಗೋಪಾಲ ಎಂ.ಪಡುಕಳತ್ತೂರು, ಶಂಕರ ಕೋಟ್ಯಾನ್ ಪೆರಂಪಳ್ಳಿ, ರಘುಪತಿ ನಾಯ್ಕಿ ಕೆಳಾರ್ಕಳಬೆಟ್ಟು, ಡೊರಿನಾ ಡಯಾಸ್ ಬಂಟ ಕಲ್ಲು ಅವರನ್ನು ಸನ್ಮಾನಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಕುದಿ ಶ್ರೀನಿವಾಸ ಭಟ್ ವರದಿ ವಾಚಿಸಿದರು. ಉಪಾಧ್ಯಕ್ಷ ಮಲ್ಲಂಪಳ್ಳಿ ಶ್ರೀನಿವಾಸ ಬಲ್ಲಾಳ್ ಸ್ವಾಗತಿಸಿದರು. ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇಣುಗೋಪಾಲ ಎಂ. ವಂದಿಸಿದರು. ನಿರ್ಮಲ್ ಕುಮಾರ್, ರವೀಂದ್ರ ಪೂಾರಿ ಕಾರ್ಯಕ್ರಮ ನಿರೂಪಿಸಿದರು.

ಈ ಸಮಾವೇಶದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳು, ಕೃಷಿ ಸಲಕರಣೆ ಗಳು, ಕೃಷಿ ಸಂಬಂಧ ಪತ್ರಿಕೆಗಳು, ವಿವಿಧ ತಳಿಯ ಬೀಜ ಹಾಗೂ ಗಿಡಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X