Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೋಷಕರನ್ನು ನಿರ್ಲಕ್ಷಿಸಿದ ಮಗನಿಗೆ ಪ್ರತಿ...

ಪೋಷಕರನ್ನು ನಿರ್ಲಕ್ಷಿಸಿದ ಮಗನಿಗೆ ಪ್ರತಿ ತಿಂಗಳು 20,000 ರೂ. ಜೀವನಾಂಶ ನೀಡಲು ನ್ಯಾಯ ಮಂಡಳಿ ಆದೇಶ

ವಾರ್ತಾಭಾರತಿವಾರ್ತಾಭಾರತಿ23 Feb 2020 9:57 PM IST
share

ರಾಯಚೂರು, ಫೆ.23: ಉತ್ತಮ ಕೆಲಸ ಸಿಕ್ಕ ಬಳಿಕ ತಂದೆ, ತಾಯಿಯನ್ನು ನಿರ್ಲಕ್ಷಿಸಿದ್ದ ಮಗನಿಗೆ ಹಿರಿಯ ನಾಗರೀಕರ ರಕ್ಷಣಾ ನ್ಯಾಯ ಮಂಡಳಿಯು ಪೋಷಕರಿಗೆ ಪ್ರತಿ ತಿಂಗಳು 20 ಸಾವಿರ ರೂ.ಜೀವನಾಂಶ ನೀಡಲು ಆದೇಶಿಸಿದೆ. 

ರಾಯಚೂರು ನಗರದ ನಿವಾಸಿ ಬೂದೆಪ್ಪ(ಹೆಸರು ಬದಲಾಯಿಸಿದೆ) ಕೂಲಿ ಮಾಡಿ ತನ್ನ ಐದು ಜನ ಮಕ್ಕಳನ್ನು ಓದಿಸುತ್ತಿದ್ದಾರೆ. ಅವರಲ್ಲಿ ಹಿರಿಯ ಮಗ ವರಪ್ರಸಾದ್(ಹೆಸರು ಬದಲಾಯಿಸಿದೆ) ಓದು ಮುಗಿಸಿ, ಮೊಬೈಲ್ ಕಂಪೆನಿಯೊಂದರಲ್ಲಿ ನೆಟ್‌ವರ್ಕ್ ಪ್ಲಾನಿಂಗ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾನೆ. ಉಳಿದ ನಾಲ್ವರು ಈಗಲೂ ಓದುತ್ತಿದ್ದಾರೆ.

ತಿಂಗಳಿಗೆ 43 ಸಾವಿರ ಸಂಬಳ ಬರುತ್ತಿದ್ದರೂ ಆತ ಮನೆಗೆ ಸ್ವಲ್ಪ ಹಣವನ್ನೂ ಕೊಡುತ್ತಿರಲಿಲ್ಲ. ಕೆಲಸಕ್ಕೆ ಸೇರಿ ಸಂಬಳ ಎಣಿಸಲು ಆರಂಭವಾದ ಮೇಲೆ ಹಿರಿಯ ಮಗ ಮನೆಗೆ ಬರುವುದನ್ನೇ ಬಿಟ್ಟಿದ್ದ. ಮೊದಲೇ ಕಷ್ಟದಲ್ಲಿರುವ ಕುಟುಂಬ ಮಗನ ನಡವಳಿಕೆಯಿಂದ ಮತ್ತಷ್ಟು ಕಂಗಾಲಾಯಿತು. ತಂದೆಯು ಮನೆಗೆ ಬಾ ಎಂದು ಎಷ್ಟೇ ಬೇಡಿಕೊಂಡರೂ ಮಗ ಮನೆಗೆ ಬರಲಿಲ್ಲ. ಇದರಿಂದ ಬೇಸತ್ತ ತಂದೆ ಪಾಲಕರ ಪೋಷಣೆ, ಸಂರಕ್ಷಣೆ, ಹಿರಿಯ ನಾಗರೀಕರ ರಕ್ಷಣಾ ನ್ಯಾಯ ಮಂಡಳಿ ಮೆಟ್ಟಿಲೇರಿ ಮಗನ ಮೇಲೆ ದೂರು ನೀಡಿದ್ದಾರೆ.

ವಾದ ವಿವಾದ ಪರಿಶೀಲಿಸಿದ ಪಾಲಕರ ಪೋಷಣೆ, ಸಂರಕ್ಷಣೆ, ಹಿರಿಯ ನಾಗರೀಕರ ರಕ್ಷಣಾ ನ್ಯಾಯ ಮಂಡಳಿ ಹಾಗೂ ರಾಯಚೂರು ಉಪವಿಭಾಗದ ಉಪವಿಭಾಗಾಧಿಕಾರಿ ಸಂತೋಷ ಎಸ್ ಕಾಮಗೌಡ ಪೋಷಕರಿಗೆ ಜೀವನಾಂಶ ನೀಡುವಂತೆ ಆದೇಶ ನೀಡಿದ್ದಾರೆ.

ಆದೇಶದಲ್ಲೇನಿದೆ: ಪ್ರತಿ ತಿಂಗಳು 10ನೆ ತಾರೀಖಿನ ಒಳಗೆ 20 ಸಾವಿರ ರೂಪಾಯಿಯನ್ನು ತನ್ನ ತಂದೆಯ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು. ತಿಂಗಳಿಗೆ ಒಮ್ಮೆ ತಂದೆ ತಾಯಿಯನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಬೇಕು. ರವಿವಾರ ದೂರವಾಣಿ ಮೂಲಕ ಸಂಪರ್ಕಿಸಿ ಆರೋಗ್ಯ ವಿಚಾರಿಸಬೇಕು ಎಂದು ಆದೇಶ ನೀಡಲಾಗಿದೆ. ಸ್ವಯಂ ಪ್ರೇರಣೆಯಿಂದ ತಂದೆ ಹಾಗೂ ಮಗ ಒಪ್ಪಿದ್ದರಿಂದ ಈ ಆದೇಶವನ್ನು ಹೊರಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X