Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಕ್ಕಳ ಹಕ್ಕಿಗಾಗಿ ಹೋರಾಡಿದ ಜೆಬ್

ಮಕ್ಕಳ ಹಕ್ಕಿಗಾಗಿ ಹೋರಾಡಿದ ಜೆಬ್

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ24 Feb 2020 12:00 AM IST
share
ಮಕ್ಕಳ ಹಕ್ಕಿಗಾಗಿ ಹೋರಾಡಿದ ಜೆಬ್

  ...ಮಕ್ಕಳ ಸ್ಕೂಲ್ ಮನೇಲಲ್ವೇ... ಎಂದು ಹೇಳಿಬಿಡುವುದು ತುಂಬಾ ಸುಲಭ. ಆದರೆ ಇವತ್ತು ಮನೆ, ಮನೆಯೊಳಗಿನ ವ್ಯಕ್ತಿಗಳೇ ಜೀವನದುದ್ದಕ್ಕೂ ಮಾಸಲಾಗದ ಗಾಯಗಳಿಗೆ ಕಾರಣರು ಎನ್ನುವುದನ್ನು ಹಲವು ವರದಿಗಳು ಬೊಟ್ಟು ಮಾಡಿ ತೋರಿಸಿವೆ. ಗುಡ್‌ಟಚ್, ಬ್ಯಾಡ್ ಟಚ್ ಹೇಳಿಕೊಡಬೇಕಾದ ಕಾಲದಲ್ಲಿರುವುದಕ್ಕೆ ಮಕ್ಕಳ ಮನಸ್ಸಿನ ಮೇಲೆ, ಮುಗ್ಧತೆಯ ಮೇಲೆ ಹಲ್ಲೆ ಮಾಡಿದ ಮನೆ ಮಂದಿ, ನೆರೆ ಹೊರೆಯೂ ಕಾರಣ. ಇಂತಹ ವಿಷಯಗಳು ಇಂದು ಸಮಾಜದಲ್ಲಿ ತೀವ್ರ ಚರ್ಚೆಗೆ ಬರುತ್ತಿವೆ. ಆದರೆ ಈ ಚರ್ಚೆ ಏಕಾಏಕಿ ಹುಟ್ಟಿಕೊಂಡಿರುವುದಲ್ಲ. ತಮ್ಮ ಮನೆಯೊಳಗೆ ತಮ್ಮದೇ ಮಕ್ಕಳ ಮೇಲೆ ತಮ್ಮವರೇ ನಡೆಸಿದ ಲೈಂಗಿಕ ಮತ್ತು ಇನ್ನಿತರ ದೌರ್ಜನ್ಯಗಳನ್ನು ಸಮಾಜದ ಮುಂದೆ ತೆರೆದಿಡಲು ಧೈರ್ಯ ಹುಟ್ಟಿದ್ದು ಇತ್ತೀಚೆಗೆ. ಅದರ ಹಿಂದೆ ಹಲವು ಸಾಮಾಜಿಕ ಕಾರ್ಯಕರ್ತರ ಹೋರಾಟಗಳಿವೆ. ಅಂತಹದೊಂದು ಹೋರಾಟದ ಕಥನವೇ ‘ಆಕೆ ಮಕ್ಕಳನ್ನು ರಕ್ಷಿಸಿದಳು-ಎಗ್ಲಾಂಟೈನ್ ಜೆಬ್ ಕಥನ’ ಕೃತಿ. ಇದು ಒಬ್ಬಾಕೆಯ ಕಥನವಲ್ಲ, ನಮ್ಮೆಲ್ಲರ ಮನೆಯೊಳಗಿನ ಮಕ್ಕಳ ಭವಿಷ್ಯದ ಕಥನವೂ ಹೌದು.

 52 ವರ್ಷಗಳ ತನ್ನ ಅಲ್ಪಕಾಲದ ಬಾಳಿನಲ್ಲಿ ಇಡೀ ಜಗತ್ತಿಗೆ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಿದ ಮತ್ತು ಆ ನಿಟ್ಟಿನಲ್ಲಿ ಜಗತ್ತು ಸಾಂಸ್ಥಿಕ ಕಾರ್ಯಕ್ರಮಗಳನ್ನು ರೂಪಿಸುವಂತೆ ಪ್ರೇರೇಪಿಸಿದ ಮಹಾನ್ ವ್ಯಕ್ತಿ ಎಗ್ಲಾಂಟೈನ್ ಜೆಬ್. ಭಾರತದಲ್ಲಿ ಅದರಲ್ಲೂ ಮುಖ್ಯವಾಗಿ ಕನ್ನಡದಲ್ಲಿ ಈಕೆಯ ಬಗ್ಗೆ ಮಾಹಿತಿಗಳು ತೀರಾ ಎಂದರೆ ತೀರಾ ಕಡಿಮೆ. ಮಕ್ಕಳ ಹಕ್ಕಿಗಾಗಿ ಹೋರಾಡುತ್ತಿರುವ ಎನ್. ವಿ. ವಾಸುದೇವ ಶರ್ಮಾ ಅವರು ಈ ಕೃತಿಯ ಮೂಲಕ ಆಕೆಯನ್ನು ಮಾತ್ರವಲ್ಲ, ಮಕ್ಕಳ ಹಕ್ಕಿನ ಹೋರಾಟದ ವಿವಿಧ ನೆಲೆಗಳನ್ನೂ ಈ ಕೃತಿಯ ಮೂಲಕ ಪರಿಚಯಿಸಿದ್ದಾರೆ. ತಲೆಬರಹಕ್ಕೆ ಪೂರಕವಾಗಿ ಎಗ್ಲಾಂಟೈನ್ ಜೆಬ್ ಅವರ ಬದುಕು, ಹೋರಾಟಗಳನ್ನು ಲೇಖಕರು ಕಥನ ರೂಪದಲ್ಲೇ ನಿರೂಪಿಸಿದ್ದಾರೆ. ಪ್ರತಿ ಅಧ್ಯಾಯ ಕೂಡ, ಮಕ್ಕಳು, ವಿದ್ಯಾರ್ಥಿಗಳು, ಹಿರಿಯರು ಎಲ್ಲರನ್ನೂ ಓದಿಸಿಕೊಂಡು ಹೋಗುವಷ್ಟು ಸರಳವಾದ ಕಥನ ಗುಣವನ್ನು ಹೊಂದಿದೆ. ಇಲ್ಲಿ ನೇರವಾಗಿ ಜೆಬ್ ಅವರನ್ನು ಪರಿಚಯಿಸದೇ, ಆಕೆಯ ಹೋರಾಟದ ಆರಂಭದ ಘಟನೆಯನ್ನು ಇಟ್ಟುಕೊಂಡು ಆ ಪಾತ್ರವನ್ನು ಹಂತ ಹಂತವಾಗಿ ಬೆಳೆಸುತ್ತಾ ಹೋಗುತ್ತಾರೆ. ಮಕ್ಕಳ ಬದುಕು ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿ ಆಕೆ ವಿಸ್ತಾರಗೊಳ್ಳುತ್ತಾ ಅಂತಿಮವಾಗಿ ಎಗ್ಲಾಂಟೈನ್ ಜೆಬ್‌ಳ ಪರಂಪರೆ ಹೇಗೆ ವಿಶ್ವಾದ್ಯಂತ ರೂಪುಗೊಳ್ಳುತ್ತಾ ಹೋಗುತ್ತದೆ ಎನ್ನುವುದೇ ಒಂದು ರೋಚಕ ಕತೆ. ಮಕ್ಕಳ ಹಕ್ಕಿನ ಈ ಯುಗದಲ್ಲಿ ಜೆಬ್‌ಳನ್ನು ಮರೆತರೆ, ನಮ್ಮ ಹೋರಾಟ ಬುನಾದಿಯಿಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಈ ಕೃತಿ ವರ್ತಮಾನದ ಮಹತ್ವದ ಕೃತಿಯಾಗಿ ಗುರುತಿಸಲ್ಪಡುತ್ತದೆ. ‘ಎಗ್ಲಾಂಟೈನ್ ಜೆಬ್ ಮೊದಲ ಬಾರಿಗೆ, ಮಕ್ಕಳ ಬಗ್ಗೆ ಜಗತ್ತಿನ ಸಂವೇದನೆಯನ್ನು ಜಾಗೃತಗೊಳಿಸಿ, ನಾವು ಮೃಗಗಳಾಗಿಯೇ ಕೊನೆಗೊಳ್ಳುವುದನ್ನು ತಪ್ಪಿಸಿದ ಹೆಣ್ಣು, ಕಣ್ಣು. ಮನುಷ್ಯ ಆಗಲು ಬಯಸುವ ಪ್ರತೀ ಜೀವಿಯೂ ಓದಲೇ ಬೇಕಾದ ಮಾನವ ಗಾಥೆ’ ಎನ್ನುವ ಬೆನ್ನುಡಿಯ ಸಾಲು ಅರ್ಥಪೂರ್ಣವಾಗಿದೆ.

ಬಹುರೂಪಿ ಪ್ರಕಾಶ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 160. ಮುಖಬೆಲೆ 200 ರೂಪಾಯಿ. ಆಸಕ್ತರು 70191 82729 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X