Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾದರಿ ಜಿಲ್ಲೆಯಾಗಿ ಶಿವಮೊಗ್ಗ...

ಮಾದರಿ ಜಿಲ್ಲೆಯಾಗಿ ಶಿವಮೊಗ್ಗ ಅಭಿವೃದ್ಧಿ: ಮುಖ್ಯಮಂತ್ರಿ ಯಡಿಯೂರಪ್ಪ

ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ24 Feb 2020 2:41 PM IST
share
ಮಾದರಿ ಜಿಲ್ಲೆಯಾಗಿ ಶಿವಮೊಗ್ಗ ಅಭಿವೃದ್ಧಿ: ಮುಖ್ಯಮಂತ್ರಿ ಯಡಿಯೂರಪ್ಪ

ಶಿವಮೊಗ್ಗ, ಫೆ.24: ಶಿವಮೊಗ್ಗದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಅವರು ಸೋಮವಾರ ಶಿವಮೊಗ್ಗ ಎನ್‌ಇಎಸ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಬೃಹತ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಕೈಗೆತ್ತಿಕೊಳ್ಳಲಾಗಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರುವರೆ ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಳಿಗೆ 220 ಕೋಟಿ ರೂ. ಮಂಜೂರು ಮಾಡಲಾಗಿದೆ. ಮುಂದಿನ 15 ದಿನಗಳ ಒಳಗಾಗಿ ನಿರ್ಮಾಣ ಕಾಮಗಾರಿ ಆರಂಭವಾಗಲಿದ್ದು, 8ರಿಂದ 10 ತಿಂಗಳ ಒಳಗಾಗಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ವಿಮಾನ ನಿಲ್ದಾಣದಿಂದಾಗಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಹೇಳಿದರು.

ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಉತ್ತೇಜನ ನೀಡಲಾಗುತ್ತಿದೆ. ಬೇರೆ ಕೇಂದ್ರಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸುವವರಿಗೆ ಜಮೀನು, ಹಣಕಾಸು ನೆರವು ಸೇರಿದಂತೆ ಎಲ್ಲಾ ಉತ್ತೇಜನಗಳನ್ನು ನೀಡಲಾಗುವುದು. ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಬಂಡವಾಳ ತೊಡಗಿಸುವ ಕುರಿತಾಗಿ ಈಗಾಗಲೇ 42 ಪ್ರಮುಖ ಕೈಗಾರಿಕೋದ್ಯಮಿಗಳೊಂದಿಗೆ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದೇನೆ. ಕೃಷಿ ಮತ್ತು ಕೈಗಾರಿಕೆ ಸರಿ ಸಮಾನವಾಗಿ ಬೆಳೆಯದೆ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಈ ಎರಡೂ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಸರ್ಕಾರ ಬ್ಯಾಂಕ್‌ಗಳಿಂದ ಹಣಕಾಸು ನೆರವು, ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ, ಸರಳೀಕೃತ ಪರವಾನಿಗೆ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಿದೆ. ಇತರರಿಗೂ ಉದ್ಯೋಗ ಕಲ್ಪಿಸಲು ಸಾಧ್ಯವಾಗುವಂತೆ ಯುವ ಜನತೆ ಸ್ವಯಂ ಉದ್ಯೋಗ ಕೈಗೊಳ್ಳಲು ಮುಂದೆ ಬರಬೇಕು ಎಂದು ಹೇಳಿದರು.

ನಿರಂತರ ಉದ್ಯೋಗ ಮೇಳ ಆಯೋಜನೆ: 2009ರಲ್ಲಿ ರಾಜ್ಯದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸುವ ಮೂಲಕ ಯುವ ಜನರಿಗೆ ಉದ್ಯೋಗ ಕಲ್ಪಿಸುವ ಕಾರ್ಯಕ್ರಮ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಉದ್ಯೋಗ ಮೇಳಗಳನ್ನು ನಿರಂತರವಾಗಿ ಆಯೋಜಿಸಲಾಗುವುದು. ಶಿವಮೊಗ್ಗದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ 150ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ಉದ್ಯೋಗ ಪಡೆದುಕೊಳ್ಳುವ ಉತ್ತಮ ಅವಕಾಶವಾಗಿದೆ. ಜಿಲ್ಲೆಯಲ್ಲಿ 45 ಪರೀಕ್ಷಾ ಪೂರ್ವ ತರಬೇತಿ ಆಯೋಜಿಸಲಾಗಿದ್ದು, 2651 ಮಂದಿ ಪ್ರಯೋಜನ ಪಡೆದಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ನಡೆದ ಉದ್ಯೋಗ ಮೇಳಗಳಲ್ಲಿ ಒಟ್ಟು 11500 ಮಂದಿಗೆ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ. ದೀನ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ 3609 ಮಂದಿಗೆ ಪೂರ್ಣ ತರಬೇತಿ ನೀಡಲಾಗಿದ್ದು, 2600 ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ ಉದ್ಯಮಗಳನ್ನು ಆರಂಭಿಸುವ ಪ. ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಶೇ.4ರ ಬಡ್ಡಿದರದಲ್ಲಿ 10 ಕೋಟಿ ರೂ. ವರೆಗೆ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ, ರುದ್ರೇಗೌಡ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯ ಕುಮಾರ್, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X