ಸಿಎಎ ಪರ-ವಿರೋಧಿ ಹೋರಾಟಗಾರರ ನಡುವೆ ಘರ್ಷಣೆ: ಪೊಲೀಸ್ ಅಧಿಕಾರಿ ಮೃತ್ಯು
ಅಂಗಡಿ, ವಾಹನಗಳಿಗೆ ಬೆಂಕಿ, ಪಿಸ್ತೂಲು ಝಳಪಿಸಿದ ದುಷ್ಕರ್ಮಿ
ಹೊಸದಿಲ್ಲಿ: ಸಿಎಎ ಪರ ಮತ್ತು ವಿರೋಧಿ ಪ್ರತಿಭಟನಕಾರರ ನಡುವೆ ದಿಲ್ಲಿಯಲ್ಲಿ ನಡೆದ ಘರ್ಷಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. ಗೋಕುಲ್ ಪುರಿ, ಭಜನ್ಪುರ, ಮೌಜ್ ಪುರ್ ಮತ್ತು ಜಾಫ್ರಾಬಾದ್ ನಲ್ಲಿ ಹಿಂಸಾಚಾರ ನಡೆಯುತ್ತಿದೆ.
ಸಿಎಎ ಪರ ಇರುವವರು ಮತ್ತು ವಿರೋಧಿ ಹೋರಾಟಗಾರರ ನಡುವೆ ಕಲ್ಲುತೂರಾಟ ನಡೆದಿದೆ. ವಾಹನಗಳಿಗೆ ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಕೆಲವೊಂದು ಕಟ್ಟಡಗಳಿಗೂ ಬೆಂಕಿ ಹಚ್ಚಲಾಗಿದೆ. ಇದೀಗ ವೈರಲ್ ಆಗುತ್ತಿರುವ ಫೋಟೊದಲ್ಲಿ ದುಷ್ಕರ್ಮಿಯೊಬ್ಬ ಪಿಸ್ತೂಲ್ ಝಳಪಿಸಿದ್ದಾನೆ.
Next Story