Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದೊಂದಿಗೆ 3 ಬಿಲಿಯನ್ ಡಾಲರ್ ರಕ್ಷಣಾ...

ಭಾರತದೊಂದಿಗೆ 3 ಬಿಲಿಯನ್ ಡಾಲರ್ ರಕ್ಷಣಾ ಒಪ್ಪಂದ: ಅಹ್ಮದಾಬಾದ್‌ನಲ್ಲಿ ಟ್ರಂಪ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ24 Feb 2020 11:19 PM IST
share
ಭಾರತದೊಂದಿಗೆ 3 ಬಿಲಿಯನ್ ಡಾಲರ್ ರಕ್ಷಣಾ ಒಪ್ಪಂದ: ಅಹ್ಮದಾಬಾದ್‌ನಲ್ಲಿ ಟ್ರಂಪ್ ಘೋಷಣೆ

ಅಹ್ಮದಾಬಾದ್, ಫೆ.24: ಭಾರತದೊಂದಿಗೆ 3 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

 ಅಹ್ಮದಾಬಾದ್‌ನಲ್ಲಿ ಆಯೋಜಿಸಲಾಗಿರುವ ‘ನಮಸ್ತೆ ಟ್ರಂಪ್’ ಕಾರ್ಯಕ್ರಮದ ಪ್ರಯುಕ್ತ ಭಾರತಕ್ಕೆ 2 ದಿನಗಳ ಭೇಟಿಗಾಗಿ ಸೋಮವಾರ ಆಗಮಿಸಿದ ಟ್ರಂಪ್ , ಅಹ್ಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾರತವು ಅಮೆರಿಕದ ಪ್ರಮುಖ ಮಿತ್ರ ರಾಷ್ಟ್ರವಾಗಿದೆ. ಉಭಯ ರಾಷ್ಟ್ರಗಳ ಮಧ್ಯೆ ರಕ್ಷಣಾ ಸಹಕಾರ ಮುಂದುವರಿಯಲಿದೆ. ಅಮೆರಿಕವು ವಿಶ್ವದಲ್ಲೇ ಅತ್ಯಂತ ನವೀನ, ಆಧುನಿಕ ಶಸ್ತ್ರಾಸ್ತ್ರಗಳನ್ನು ಉತ್ಪಾದಿಸುತ್ತಿದ್ದು ಭಾರತಕ್ಕೆ ಅತ್ಯಾಧುನಿಕ ತಂತ್ರಜ್ಞಾನದ 4 ಹೆಲಿಕಾಪ್ಟರ್‌ಗಳ ಸಹಿತ ಆಧುನಿಕ ಶಸ್ತ್ರಾಸ್ತ್ರಗಳನ್ನು ಪೂರೈಸುವ ಒಪ್ಪಂದಕ್ಕೆ ಮಂಗಳವಾರ ಸಹಿ ಬೀಳಲಿದೆ ಎಂದು ಘೋಷಿಸಿದರು.

ಎಲ್ಲಾ ರಾಷ್ಟ್ರಗಳಿಗೂ ತನ್ನ ಗಡಿಯನ್ನು ನಿಯಂತ್ರಿಸುವ ಮತ್ತು ರಕ್ಷಿಸುವ ಹಕ್ಕು ಇದೆ. ಭಯೋತ್ಪಾದನೆಯನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಭಾರತ ಜತೆಗೂಡಿ ಕಾರ್ಯನಿರ್ವಹಿಸುವ ಬದ್ಧತೆಯನ್ನು ಮುಂದುವರಿಸಲಿದೆ ಎಂದು ಟ್ರಂಪ್ ಹೇಳಿದರು. ಅಲ್ಲದೆ ಉಭಯ ದೇಶಗಳೂ ಇಸ್ಲಾಮಿಕ್  ಭಯೋತ್ಪಾದಕತೆಯಿಂದ ಸಾಕಷ್ಟು ನೋವು ಮತ್ತು ನಷ್ಟ ಅನುಭವಿಸಿದ್ದು ಈಗ ಇಸ್ಲಾಮಿಕ್ ಭಯೋತ್ಪಾದಕತೆಯಿಂದ ತಮ್ಮ ನಾಗರಿಕರನ್ನು ರಕ್ಷಿಸಲು ಸಂಘಟಿತವಾಗಿದೆ. ತನ್ನ ಆಡಳಿತದಲ್ಲಿ ಅಮೆರಿಕದ ಸಂಪೂರ್ಣ ಬಲ ಪ್ರಯೋಗಿಸಿ ಐಸಿಸ್ ರಕ್ತಪಿಪಾಸುಗಳ ಸದ್ದಡಗಿಸಲಾಗಿದೆ. ರಾಕ್ಷಸ ಅಲ್ ಬಗ್ದಾದಿಯನ್ನು ಹತ್ಯೆ ಮಾಡಲಾಗಿದೆ ಎಂದು ಟ್ರಂಪ್ ಹೇಳಿದರು.

 ಟ್ರಂಪ್ ಭಾರತ ಭೇಟಿ ಸಂದರ್ಭದಲ್ಲಿ ಉಭಯ ರಾಷ್ಟ್ರಗಳ ಮಧ್ಯೆ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಒಪ್ಪಂದಗಳಿಗೆ ಸಹಿ ಬೀಳುವ ನಿರೀಕ್ಷೆಯಿದೆ. ಇದರಲ್ಲಿ 2.4 ಬಿಲಿಯನ್ ಡಾಲರ್ ಮೊತ್ತದ 24 ಎಂಎಚ್-60 ಆರ್ ಸಿಕೋರ್ಸ್ಕಿ ಹೆಲಿಕಾಪ್ಟರ್‌ಗಳು, 6 ಅಪಾಚೆ ಎಎಚ್-64ಇ ದಾಳಿ ಹೆಲಿಕಾಪ್ಟರ್‌ಗಳ ಖರೀದಿ ಸೇರಿದೆ. ಈ ಎರಡೂ ಆಧುನಿಕ ಹೆಲಿಕಾಪ್ಟರ್‌ಗಳ ಖರೀದಿಗೆ ಭದ್ರತೆಗಾಗಿನ ಸಚಿವ ಸಂಪುಟ ಸಮಿತಿ ಕಳೆದ ವಾರ ಅನುಮೋದನೆ ನೀಡಿತ್ತು. ಜೊತೆಗೆ, ಭಾರತೀಯ ನೌಕಾಪಡೆಗೆ 8 ಪಿ81 ಯುದ್ಧವಿಮಾನ ಹಾಗೂ ಹೊಸದಿಲ್ಲಿಗೆ ಪೂರ್ಣಪ್ರಮಾಣದ ಕ್ಷಿಪಣಿ ದಾಳಿಯಿಂದ ರಕ್ಷಣಾ ಕವಚದ ಖರೀದಿಯ ಒಪ್ಪಂದಕ್ಕೂ ಸಹಿ ಹಾಕುವ ನಿರೀಕ್ಷೆಯಿದೆ ಎಂದು ಭಾರತದ ಅಧಿಕಾರಿಗಳು ಹೇಳಿದ್ದಾರೆ.

ಗಡಿಯಲ್ಲಿರುವ ಉಗ್ರರ ನಿಗ್ರಹ: ಪಾಕ್‌ಗೆ ಕರೆ

ಪಾಕಿಸ್ತಾನದ ಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಉಗ್ರರ ಬಗ್ಗೆ ಉಲ್ಲೇಖಿಸಿದ ಟ್ರಂಪ್, ಪಾಕಿಸ್ತಾನದ ನೆಲದಿಂದ ಕಾರ್ಯಾಚರಿಸುತ್ತಿರುವ ಭಯೋತ್ಪಾದಕ ಸಂಘಟನೆಯ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆ ದೇಶದೊಂದಿಗೆ ಅಮೆರಿಕ ರಚನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಉಗ್ರರ ನಿಗ್ರಹ ಕಾರ್ಯದಲ್ಲಿ ಈಗ ಪ್ರಗತಿಯ ಲಕ್ಷಣ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X