Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಟ್ಟ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ...

ದಿಟ್ಟ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ 'ಮೆಕ್‍ ಗಿಲ್ ಮೆಡಲ್'ಗೆ ಆಯ್ಕೆಯಾದ ರಾಣಾ ಅಯ್ಯೂಬ್

ವಾರ್ತಾಭಾರತಿವಾರ್ತಾಭಾರತಿ25 Feb 2020 4:40 PM IST
share
ದಿಟ್ಟ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಮೆಕ್‍ ಗಿಲ್ ಮೆಡಲ್ಗೆ ಆಯ್ಕೆಯಾದ ರಾಣಾ ಅಯ್ಯೂಬ್

ಹೊಸದಿಲ್ಲಿ: ಪತ್ರಕರ್ತೆ, 'ದಿ ವಾಷಿಂಗ್ಟನ್ ಪೋಸ್ಟ್'ನ ಗ್ಲೋಬಲ್ ಒಪಿನಿಯನ್ಸ್ ಬರಹಗಾರ್ತಿಯಾಗಿರುವ ರಾಣಾ ಅಯ್ಯೂಬ್ ಅವರು 2020ನೇ ಸಾಲಿನ 'ಮೆಕ್‍ ಗಿಲ್ ಮೆಡಲ್ ಫಾರ್ ಜರ್ನಲಿಸ್ಟಿಕ್ ಕರೇಜ್' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಎಪ್ರಿಲ್ 22ರಂದು ಜಾರ್ಜಿಯಾದ ದಿ ಗ್ರೇಡಿ ಕಾಲೇಜ್ ಆಫ್ ಜರ್ನಲಿಸಂ ಆ್ಯಂಡ್ ಮಾಸ್ ಕಮ್ಯುನಿಕೇಶನ್ಸ್‍ ನಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಐವತ್ತರ ಹಾಗೂ 60ರ ದಶಕಗಳಲ್ಲಿ ಜನಾಂಗೀಯ ಬೇಧಭಾವವನ್ನು ಪ್ರಶ್ನಿಸಿ ಬರೆಯುತ್ತಿದ್ದ ಸಂಪಾದಕೀಯಗಳಿಂದಾಗಿ 'ದಕ್ಷಿಣದ ಆತ್ಮಸಾಕ್ಷಿ' ಎಂದು ಬಣ್ಣಿಸಲ್ಪಟ್ಟಿದ್ದ ಅಟ್ಲಾಂಟ ಕಾನ್‍ ಸ್ಟಿಟ್ಯೂಶನ್ ಇದರ ಮಾಜಿ ಸಂಪಾದಕ ರಾಲ್ಫ್ ಮೆಕ್‍ ಗಿಲ್ ಅವರ ಹೆಸರಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ.

"ಸತ್ಯವನ್ನು ಮಾತನಾಡಲು ಜನಪ್ರಿಯವಲ್ಲದ ಹೋರಾಟವನ್ನು ಮಾಡುತ್ತಿರುವ ಎಲ್ಲಾ ಪತ್ರಕರ್ತರ ಪರವಾಗಿ ನಾನು ಈ ಪ್ರಶಸ್ತಿ ಸ್ವೀಕರಿಸುತ್ತೇನೆ. ಇದು ನನ್ನ ಪಾಲಿಗೆ ದೊಡ್ಡ ಗೌರವ'' ಎಂದು ಪ್ರಶಸ್ತಿಗೆ ತಾವು ಆಯ್ಕೆಯಾಗಿರುವುದನ್ನು ತಿಳಿದ ನಂತರ ರಾಣಾ ಅಯ್ಯೂಬ್ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ 'ದಿ ತೆಹಲ್ಕಾ'ದಲ್ಲಿ ತನಿಖಾ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸಿದ್ದ ರಾಣಾ ಅಯ್ಯೂಬ್ 2002ರ ಗುಜರಾತ್ ದಂಗೆಗಳ ವೇಳೆಯ ತನ್ನ ವರದಿಗಳಿಗಾಗಿ ಖ್ಯಾತಿ ಪಡೆದವರು. "ಗುಜರಾತ್ ಫೈಲ್ಸ್-ಅನಾಟಮಿ ಆಫ್ ಎ ಕವರ್ ಅಪ್' ಎಂಬ ಕೃತಿಯನ್ನೂ ಅವರು ಬರೆದಿದ್ದಾರೆ. ಗುಜರಾತ್ ದಂಗೆಗಳಲ್ಲಿ ಈಗಿನ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಪಾತ್ರದ ಕುರಿತಂತೆ ಈ ಕೃತಿ  ಪ್ರಶ್ನಿಸಿದೆ.

ತಮ್ಮ ವೃತ್ತಿ ಜೀವನದಲ್ಲಿ ಅವರು ತಾವು ಬರೆದ ಬರಹಗಳಿಗಾಗಿ ಸಾಕಷ್ಟು ಬೆದರಿಕೆಗಳನ್ನು ಹಾಗೂ ಆನ್ಲೈನ್ ನಿಂದನೆಗಳನ್ನೂ ಎದುರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X