Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಎಎ ಕುರಿತ ಪ್ರಶ್ನೆಗೆ ಟ್ರಂಪ್...

ಸಿಎಎ ಕುರಿತ ಪ್ರಶ್ನೆಗೆ ಟ್ರಂಪ್ ಪ್ರತಿಕ್ರಿಯಿಸಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ25 Feb 2020 9:43 PM IST
share
ಸಿಎಎ ಕುರಿತ ಪ್ರಶ್ನೆಗೆ ಟ್ರಂಪ್ ಪ್ರತಿಕ್ರಿಯಿಸಿದ್ದು ಹೀಗೆ…

ಹೊಸದಿಲ್ಲಿ,ಫೆ.25: ದೇಶಾದ್ಯಂತ ಪ್ರತಿಭಟನೆಗಳಿಗೆ ಕಾರಣವಾಗಿರುವ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ)ಯ ಕುರಿತು ಹೇಳಿಕೆ ನೀಡಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ ಇಲ್ಲಿ ನಿರಾಕರಿಸಿದರು. ಆದರೆ ತನ್ನ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್,ಸಿಎಎ ಕುರಿತು ಏನನ್ನೂ ಹೇಳಲು ಬಯಸುವುದಿಲ್ಲ. ಅದು ಭಾರತಕ್ಕೆ ಬಿಟ್ಟಿದ್ದು ಮತ್ತು ಅದು ತನ್ನ ಜನರಿಗಾಗಿ ಸರಿಯಾದ ನಿರ್ಧಾರವನ್ನು ಕೈಗೊಳ್ಳುತ್ತದೆ ಎಂದು ಆಶಿಸಿದ್ದೇನೆ ಎಂದರು.

 ಸುದ್ದಿಗೋಷ್ಠಿ ನಡೆಯುತ್ತಿದ್ದ ಹೋಟೆಲ್ ಮೌರ್ಯದಿಂದ ಕೇವಲ 20 ಕಿ.ಮೀ.ದೂರದ ಈಶಾನ್ಯ ದಿಲ್ಲಿಯಲ್ಲಿನ ಹಿಂಸಾಚಾರಗಳ ಕುರಿತು ಪ್ರಶ್ನೆಗೆ ಟ್ರಂಪ್, ತಾನು ಮೋದಿಯವರೊಂದಿಗೆ ಧಾರ್ಮಿಕ ಸ್ವಾತಂತ್ರ್ಯಗಳ ಕುರಿತು ಮಾತನಾಡಿದ್ದೇನೆ. ಜನರು ಧಾರ್ಮಿಕ ಸ್ವಾತಂತ್ರ್ಯವನ್ನು ಹೊಂದಿರಬೇಕು ಎಂದು ತಾನು ಬಯಸಿದ್ದೇನೆ ಎಂದು ಮೋದಿ ತಿಳಿಸಿದ್ದಾರೆ. ಅವರು ನಿಜಕ್ಕೂ ಆ ಬಗ್ಗೆ ಶ್ರಮಿಸಿದ್ದಾರೆ. ವ್ಯಕ್ತಿಗತ ದಾಳಿಗಳು ನಡೆಯುತ್ತಿರುವ ಬಗ್ಗೆ ತಾನು ಕೇಳಿದ್ದೇನೆ,ಆದರೆ ಅದನ್ನು ತಾನು ಚರ್ಚಿಸಿಲ್ಲ. ಅದು ಭಾರತಕ್ಕೆ ಬಿಟ್ಟ ವಿಷಯವಾಗಿದೆ ಎಂದು ಉತ್ತರಿಸಿದರು.

ದೇಶದಲ್ಲಿ ಮುಸ್ಲಿಮರ ವಿರುದ್ಧ ತಾರತಮ್ಯದ ಕುರಿತ ಪ್ರಶ್ನೆಗೆ ಉತ್ತರಿಸಿದ ಟ್ರಂಪ್,ತಾವು ಮುಸ್ಲಿಮರೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಮೋದಿ ಹೇಳಿದ್ದಾರೆ ಎಂದು ತಿಳಿಸಿದರು.

ಕಾಶ್ಮೀರ ಬಿಕ್ಕಟ್ಟು ಭಾರತ-ಪಾಕಿಸ್ತಾನ ನಡುವಿನ ಸಂಬಂಧದಲ್ಲಿಯ ‘ಮುಳ್ಳು’ಎಂದು ಬಣ್ಣಿಸಿದ ಅವರು,ಉಭಯ ರಾಷ್ಟ್ರಗಳ ನಡುವೆ ಮಧ್ಯಸ್ಥಿಕೆ ವಹಿಸುವ ತನ್ನ ಕೊಡುಗೆಯನ್ನು ಪುನರುಚ್ಚರಿಸಿದರು. ಆದರೆ ತಾನು ಕೊಡುಗೆಯ ಬಗ್ಗೆ ಮೋದಿಯವರಿಗೆ ವೈಯಕ್ತಿಕವಾಗಿ ತಿಳಿಸಿಲ್ಲ ಎಂದರು.

ಕಾಶ್ಮೀರವು ಭಾರತ ಮತ್ತು ಪಾಕಿಸ್ತಾನಗಳ ನಡುವಿನ ದೊಡ್ಡ ಸಮಸ್ಯೆಯಾಗಿದೆ. ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಅವರು ದೀರ್ಘಕಾಲದಿಂದ ಪ್ರಯತ್ನಿಸುತ್ತಿ ದ್ದಾರೆ. ತನ್ನಿಂದ ಮಧ್ಯಸ್ಥಿಕೆ ಅಥವಾ ನೆರವು ಬೇಕಿದ್ದರೆ ತಾನು ಸಿದ್ಧನಿದ್ದೇನೆ. ಕಾಶ್ಮೀರ ಬಹುಸಮಯದಿಂದಲೂ ಹಲವರ ದೃಷ್ಟಿಯಲ್ಲಿ ಮುಳ್ಳಾಗಿಯೇ ಉಳಿದುಕೊಂಡಿದೆ. ಪ್ರತಿಯೊಂದೂ ಕಥೆಗೆ ಎರಡು ಮುಖಗಳಿರುತ್ತವೆ ಎಂದು ಟ್ರಂಪ್ ಹೇಳಿದರು.

 ಪಾಕಿಸ್ತಾನದ ಕಡೆಯಿಂದ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆಯೂ ತಾನು ಸುದೀರ್ಘವಾಗಿ ಚರ್ಚಿಸಿದ್ದೇನೆ. ಉಭಯ ದೇಶಗಳ ಪ್ರಧಾನಿಗಳ ಜೊತೆಗೆ ತನಗೆ ಉತ್ತಮ ಸಂಬಂಧವಿರುವುದರಿಂದ ತಾನು ನೆರವಾಗಬಲ್ಲೆ ಎಂದ ಟ್ರಂಪ್,ತಾಲಿಬಾನ್ ಶಾಂತಿ ಒಪ್ಪಂದದ ಕುರಿತೂ ತಾನು ಮೋದಿಯವರೊಂದಿಗೆ ಚರ್ಚಿಸಿದ್ದೇನೆ ಮತ್ತು ಆ ಒಪ್ಪಂದ ಏರ್ಪಡಬೇಕೆಂದು ಭಾರತವೂ ಬಯಸಿದೆ ಎಂದರು.

ಭಾರತದೊಂದಿಗೆ ವ್ಯಾಪಾರ ಒಪ್ಪಂದವೇರ್ಪಟ್ಟರೆ ಅದು ವರ್ಷದ ಕೊನೆಯಲ್ಲಿ ಆಗಲಿದೆ ಎಂದ ಅವರು,ಭಾರತವು ಅಮೆರಿಕವನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಒತ್ತಿ ಹೇಳಿದರು.

ಭಾರತವು ಬಹುಶಃ ಅತ್ಯಂತ ಹೆಚ್ಚಿನ ಸುಂಕ ವಿಧಿಸುವ ದೇಶವಾಗಿದೆ ಎಂದ ಟ್ರಂಪ್,ಹ್ಯಾರ್ಲೆ ಡೇವಿಡ್ಸನ್ ಬೈಕ್ ಮೇಲಿನ ಅಧಿಕ ಸುಂಕವನ್ನು ನಿದರ್ಶನವಾಗಿ ನೀಡಿದರು.

ಮೋದಿಯವರ ಗುಣಗಾನ ಮಾಡಿದ ಟ್ರಂಪ್,ಭಾರತವೊಂದು ‘ಪ್ರಚಂಡ ದೇಶ ’ವಾಗಿದೆ ಮತ್ತು ಮೋದಿ ’ಭಯಂಕರ ನಾಯಕ’ರಾಗಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X