Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈ ವರ್ಷದಿಂದಲೇ ರಾಯಚೂರಿನಲ್ಲಿ 'ಐಐಐಟಿ’...

ಈ ವರ್ಷದಿಂದಲೇ ರಾಯಚೂರಿನಲ್ಲಿ 'ಐಐಐಟಿ’ ತರಗತಿಗಳು: ಡಿಸಿಎಂ ಅಶ್ವಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ25 Feb 2020 10:11 PM IST
share
ಈ ವರ್ಷದಿಂದಲೇ ರಾಯಚೂರಿನಲ್ಲಿ ಐಐಐಟಿ’ ತರಗತಿಗಳು: ಡಿಸಿಎಂ ಅಶ್ವಥ್ ನಾರಾಯಣ

ರಾಯಚೂರು, ಫೆ.25: ಐಐಐಟಿ ತರಗತಿಗಳನ್ನು ಈ ಶೈಕ್ಷಣಿಕ ವರ್ಷದಿಂದಲೆ ಇಲ್ಲಿನ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯಾರಂಭ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದರು.

ಮಂಗಳವಾರ ಐಐಐಟಿ ರಾಯಚೂರು ಕ್ಯಾಂಪಸ್‌ಗೆ ನಿಗದಿಯಾಗಿರುವ ಸ್ಥಳ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಯುವಜನರ ಶಿಕ್ಷಣ ಮತ್ತು ಉದ್ಯೋಗದ ನಿರೀಕ್ಷೆಗಳನ್ನು ಸಾಕಾರಗೊಳಿಸುವಲ್ಲಿ ಇದು ಪ್ರಮುಖ ಪಾತ್ರವಹಿಸಲಿದೆ ಎಂದರು.

ಜಾಗದ ಸಮಸ್ಯೆ ಇದ್ದ ಕಾರಣಕ್ಕೆ ರಾಯಚೂರಿನ ಐಐಐಟಿ ಅನ್ನು ಹೈದರಾಬಾದ್‌ನಲ್ಲಿ ಕಳೆದ ವರ್ಷ ಆರಂಭಿಸಲಾಗಿತ್ತು. ಅಲ್ಲಿ ಮೊದಲ ವರ್ಷ ಮುಗಿಸಿದ ವಿದ್ಯಾರ್ಥಿಗಳಿಗೆ ಎರಡನೆ ವರ್ಷದ ತರಗತಿಗಳು ಇಲ್ಲಿ ಆರಂಭವಾಗಲಿವೆ ಎಂದು ಅವರು ಹೇಳಿದರು.

ಈಗಾಗಲೆ 65 ಎಕರೆ ಭೂ ಸ್ವಾಧೀನ ಆಗಿದ್ದು, ನೋಂದಣಿ ಹಾಗೂ ಭೂ ದಾಖಲೆ ಹಸ್ತಾಂತರವೂ ಆಗಿದೆ. ಇದರ ಜತೆಗೆ 56 ಎಕರೆ ಸರಕಾರಿ ಜಾಗವೂ ಲಭ್ಯ ಇದೆ. ಅಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಪರ್ಯಾಯ ಭೂಮಿ ನೀಡಲಾಗುವುದು ಎಂದು ಅಶ್ವಥ್ ನಾರಾಯಣ ತಿಳಿಸಿದರು.

ನಿಗದಿಯಾಗಿರುವ ಕ್ಯಾಂಪಸ್ ಜಾಗದ ಜತೆಗೆ ನಗರದ ಮಧ್ಯ ಭಾಗದಲ್ಲಿ ಐಐಐಟಿ ಹಾಗೂ ವಿಶ್ವವಿದ್ಯಾಲಯಕ್ಕೆ ಸ್ವಲ್ಪಜಾಗ ದೊರೆತರೆ ಅಲ್ಲಿ ಸ್ಟಾರ್ಟ್‌ಅಪ್, ಉತ್ಪಾದನಾ ಕೇಂದ್ರಗಳನ್ನು ಆರಂಭಿಸಲು ಅನುಕೂಲವಾಗುವುದು. ಸಂಶೋಧನೆ, ಆವಿಷ್ಕಾರ ನಡೆಯುವ ಜ್ಞಾನ ಕೇಂದ್ರ ಐಐಐಟಿ, ಉದ್ಯಮ, ವ್ಯವಸಾಯ, ಆರೋಗ್ಯ ಸೇರಿದಂತೆ ಯಾವುದೆ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ ಸೂಚಿಸಬಲ್ಲ ಕೇಂದ್ರವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರಾಯಚೂರು ಇಂಜಿನಿಯರಿಂಗ್ ಕಾಲೇಜಿನ ನವೀಕರಣಕ್ಕೆ 2.5 ಕೋಟಿ ರೂ. ನೀಡಲಾಗಿದ್ದು, ಇದರ ಜತೆಯಲ್ಲೆ ಐಐಐಟಿ ಕ್ಯಾಂಪಸ್ ಆಗಲಿದೆ. ಪ್ರತಿಭಾನ್ವಿತರಿಗೆ ಸ್ಥಳೀಯವಾಗಿ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಮತ್ತು ರಾಜ್ಯದಿಂದ 50-50ರ ಅನುಪಾತದಲ್ಲಿ ಅನುದಾನ ನೀಡಲಾಗುವುದು. ಯೋಜನೆಯ ಒಟ್ಟು ವೆಚ್ಚ 125 ಕೋಟಿ ರೂ. ಐಐಐಟಿ ಕಟ್ಟಡ ನಿರ್ಮಾಣ ವೆಚ್ಚ ಒಂದು ಭಾಗವಾದರೆ, ನಿಯಮಿತ ಖರ್ಚು ವೆಚ್ಚಗಳಿಗೆ ಪ್ರತಿ ವರ್ಷ 11 ಕೋಟಿ ರೂ. ನೀಡಲಾಗುವುದು ಎಂದು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಸಂಸದ ರಾಜ ಅಮರೇಶ್ವರ ನಾಯಕ್, ಶಾಸಕರಾದ ಶಿವರಾಜ್ ಪಾಟೀಲ್, ರಾಜ ವೆಂಕಟಪ್ಪನಾಯಕ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X