Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೆಸ್ಟ್ ತಂಡದಲ್ಲಿ ಕೆ.ಎಲ್. ರಾಹುಲ್...

ಟೆಸ್ಟ್ ತಂಡದಲ್ಲಿ ಕೆ.ಎಲ್. ರಾಹುಲ್ ಅನುಪಸ್ಥಿತಿ ಪ್ರಶ್ನಿಸಿದ ಕಪಿಲ್‌ದೇವ್

ವಾರ್ತಾಭಾರತಿವಾರ್ತಾಭಾರತಿ25 Feb 2020 11:29 PM IST
share
ಟೆಸ್ಟ್ ತಂಡದಲ್ಲಿ ಕೆ.ಎಲ್. ರಾಹುಲ್ ಅನುಪಸ್ಥಿತಿ ಪ್ರಶ್ನಿಸಿದ ಕಪಿಲ್‌ದೇವ್

ಹೊಸದಿಲ್ಲಿ, ಫೆ.25: ವೆಲ್ಲಿಂಗ್ಟನ್‌ನಲ್ಲಿ ನ್ಯೂಝಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು 10 ವಿಕೆಟ್‌ಗಳಿಂದ ಹೀನಾಯವಾಗಿ ಸೋತಿರುವ ವಿರಾಟ್ ಕೊಹ್ಲಿ ಬಳಗವನ್ನು ಟೀಕಿಸಿದ ಭಾರತದ ಮಾಜಿ ನಾಯಕ ಕಪಿಲ್‌ದೇವ್, ಟೆಸ್ಟ್ ತಂಡದಲ್ಲಿ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಅನುಪಸ್ಥಿತಿಯನ್ನು ಪ್ರಶ್ನಿಸಿದ್ದಾರೆ. ‘‘ಶ್ರೇಷ್ಠ ಕ್ರಿಕೆಟ್ ಆಡಿರುವ ನ್ಯೂಝಿಲ್ಯಾಂಡ್ ತಂಡವನ್ನು ನಾವೆಲ್ಲರೂ ಶ್ಲಾಘಿಸಬೇಕಾಗಿದೆ. ಮೂರು ಏಕದಿನ ಪಂದ್ಯಗಳು ಹಾಗೂ ಮೊದಲ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ತಂಡ ಅಮೋಘ ಪ್ರದರ್ಶನ ನೀಡಿದೆ. ನಾವು ಈ ಪಂದ್ಯವನ್ನು ವಿಮರ್ಶಾತ್ಮಕವಾಗಿ ನೋಡಿದಾಗ ಹೇಗೆ ಇಷ್ಟೊಂದು ಬದಲಾವಣೆ ಮಾಡಲು ಸಾಧ್ಯ ಎಂದು ನನಗರ್ಥವಾಗುವುದಿಲ್ಲ. ಪ್ರತಿ ಪಂದ್ಯಕ್ಕೂ ಹೊಸ ತಂಡ ಇರುತ್ತದೆ. ತಂಡದಲ್ಲಿ ಯಾರೂ ಕೂಡ ಖಾಯಂ ಆಗಿರುವುದಿಲ್ಲ. ಆಟಗಾರರ ಸ್ಥಾನಕ್ಕೆ ಭದ್ರತೆ ಇಲ್ಲ. ಇದು ಆಟಗಾರರ ಮೇಲೆ ಪರಿಣಾಮಬೀರುತ್ತದೆ’’ ಎಂದು ಎಬಿಪಿ ಸುದ್ದಿವಾಹಿನಿಗೆ ಕಪಿಲ್ ತಿಳಿಸಿದ್ದಾರೆ.

ಭಾರತದ ಬ್ಯಾಟಿಂಗ್ ಸರದಿಯಲ್ಲಿ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಹಾಗೂ ಅಜಿಂಕ್ಯ ರಹಾನೆ ಅವರಂತಹ ಆಟಗಾರರು ಎರಡೂ ಇನಿಂಗ್ಸ್‌ನಲ್ಲಿ ರನ್ ಗಳಿಸಲು ವಿಫಲರಾಗಿದ್ದರು. ಕಿವೀಸ್ ವಿರುದ್ಧ ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣ ಎಂಬ ಸತ್ಯವನ್ನು ಕೊಹ್ಲಿ ಒಪ್ಪಿಕೊಂಡಿದ್ದಾರೆ.

‘‘ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಮುಖ ಆಟಗಾರರಿದ್ದರೂ ಎರಡೂ ಇನಿಂಗ್ಸ್‌ನಲ್ಲಿ 200 ರನ್ ಗಳಿಸಲು ಸಾಧ್ಯವಾಗುವುದಿಲ್ಲ. ಪರಿಸ್ಥಿತಿಗೆ ತಕ್ಕಂತೆ ಆಡಲು ವಿಫಲವಾಗಿರುವುದೇ ಇದಕ್ಕೆ ಕಾರಣ. ನಾವು ಯೋಜನೆ ಹಾಗೂ ರಣನೀತಿಯತ್ತ ಹೆಚ್ಚು ಗಮನ ನೀಡಬೇಕಾಗಿದೆ’’ ಎಂದು ಕಪಿಲ್ ಹೇಳಿದರು.

 ಟ್ವೆಂಟಿ-20 ಸರಣಿಯಲ್ಲಿ ‘ಸರಣಿಶ್ರೇಷ್ಠ’ ಪ್ರಶಸ್ತಿ ಪಡೆದಿದ್ದ ಕೆ.ಎಲ್.ರಾಹುಲ್‌ರನ್ನು ಟೆಸ್ಟ್ ತಂಡದಲ್ಲಿ ಸೇರ್ಪಡೆಗೊಳಿಸದೇ ಇರುವುದಕ್ಕೆ ಅಚ್ಚರಿವ್ಯಕ್ತಪಡಿಸಿದ ಕಪಿಲ್,‘‘ಈ ವಿಚಾರ ನನಗೆ ಅರ್ಥವಾಗುತ್ತಿಲ್ಲ. ನಾವು ಆಡುತ್ತಿದ್ದ ಕಾಲಕ್ಕೂ, ಈಗ ನಡೆಯುತ್ತಿರುವುದಕ್ಕೆ ತುಂಬಾ ವ್ಯತ್ಯಾಸವಿದೆ. ನಾವು ತಂಡವನ್ನು ಕಟ್ಟುವಾಗ ಆಟಗಾರರಿಗೆ ಆತ್ಮವಿಶ್ವಾಸ ತುಂಬಬೇಕಾಗುತ್ತದೆ. ಬಹಳಷ್ಟು ಬದಲಾವಣೆ ಮಾಡುವುದು ಒಳ್ಳೆಯದಲ್ಲ. ರಾಹುಲ್ ಶ್ರೇಷ್ಠ ಫಾರ್ಮ್‌ನಲ್ಲಿದ್ದರು. ಆದರೆ, ಅವರಿಗೆ ವಿಶ್ರಾಂತಿ ನೀಡಲಾಗಿದೆ. ನನ್ನ ಪ್ರಕಾರ ಫಾರ್ಮ್‌ನಲ್ಲಿರುವ ಆಟಗಾರ ಪಂದ್ಯ ಆಡುವ ಅಗತ್ಯವಿದೆ’’ ಎಂದರು.

ಟೀಮ್ ಇಂಡಿಯಾ 2 ಪಂದ್ಯಗಳ ಸರಣಿಯನ್ನು ಸಮಬಲಗೊಳಿಸಬೇಕಾದರೆ ಶನಿವಾರದಿಂದ ಕ್ರೈಸ್ಟ್ ಚರ್ಚ್‌ನಲ್ಲಿ ಆರಂಭವಾಗಲಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಗೆಲ್ಲಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X