Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ವಾಕಿಂಗ್‌ನ ಆರೋಗ್ಯ ಲಾಭಗಳು

ವಾಕಿಂಗ್‌ನ ಆರೋಗ್ಯ ಲಾಭಗಳು

-ಎನ್.ಕೆ.-ಎನ್.ಕೆ.26 Feb 2020 12:01 AM IST
share
ವಾಕಿಂಗ್‌ನ ಆರೋಗ್ಯ ಲಾಭಗಳು

ನೀವು ಪ್ರತಿ ದಿನ ವಾಕಿಂಗ್ ಮಾಡುತ್ತೀರಾ? ಇಲ್ಲದಿದ್ದರೆ ಅದನ್ನು ಈಗಲೇ ರೂಢಿಸಿಕೊಳ್ಳಿ. ದೈಹಿಕ ಚಟುವಟಿಕೆ ಆರೋಗ್ಯಕ್ಕೆ ಮುಖ್ಯ ಎನ್ನುವುದನ್ನು ಅಧ್ಯಯನಗಳು ಎಂದೋ ತೋರಿಸಿವೆ. ಪ್ರತಿ ದಿನ ವಾಕಿಂಗ್ ಮಾಡುವುದರಿಂದ ಶರೀರದ ತೂಕವನ್ನು ಇಳಿಸಿಕೊಳ್ಳಲು ಸಾಧ್ಯವಾಗುವ ಜೊತೆಗೆ ನಿಮ್ಮ ಆಯುಷ್ಯವನ್ನೂ ಅದು ಹೆಚ್ಚಿಸುತ್ತದೆ. ವಾಕಿಂಗ್ ನೀಡುವ ಪ್ರಮುಖ ಆರೋಗ್ಯಲಾಭಗಳ ಕುರಿತು ಮಾಹಿತಿಯಲ್ಲಿದೆ.....

♦ ತೂಕ ಇಳಿಸಿಕೊಳ್ಳಲು ನೆರವಾಗುತ್ತದೆ

 ದೈಹಿಕ ಚಟುವಟಿಕೆಗಳು ಕಡಿಮೆಯಾಗಿರುವ ಇಂದಿನ ದಿನಗಳಲ್ಲಿ ಹೆಚ್ಚಿನವರು ಡೆಸ್ಕ್ ಜಾಬ್ ಮಾಡುತ್ತಿರುತ್ತಾರೆ,ಅಂದರೆ ಅವರು ಕೆಲಸದ ವೇಳೆ ಹೆಚ್ಚು ಸಮಯ ಕುಳಿತುಕೊಂಡೇ ಇರುತ್ತಾರೆ. ಇದು ಶರೀರದ ತೂಕ ಹೆಚ್ಚಲು ಕಾರಣವಾಗುತ್ತದೆ. ಪ್ರತಿ ದಿನ ವಾಕಿಂಗ್ ಮಾಡುವುದರಿಂದ ಶರೀರದಲ್ಲಿಯ ಹೆಚ್ಚಿನ ಕ್ಯಾಲರಿಗಳು ಕರಗುತ್ತವೆ ಹಾಗೂ ತೂಕ ಹೆಚ್ಚಳ ಮತ್ತು ಅದಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳ ಅಪಾಯವನ್ನು ತಗ್ಗಿಸುತ್ತದೆ. ನಡಿಗೆ ಎರೋಬಿಕ್ ವ್ಯಾಯಾಮವಾಗಿದ್ದು,ಪ್ರತಿ ಕಿ.ಮೀ.ಗೆ ಸುಮಾರು 60 ಕ್ಯಾಲರಿಗಳನ್ನು ಕರಗಿಸುತ್ತದೆ. ಮಹಿಳೆಯರು ವಾರಕ್ಕೆ ಮೂರು ಬಾರಿ 50ರಿಂದ 70 ನಿಮಿಷಗಳ ನಡಿಗೆಯನ್ನು 12 ವಾರಗಳ ಕಾಲ ಮಾಡಿದರೆ ಅವರ ಸೊಂಟದ ಸುತ್ತಳತೆ 2.8 ಸೆ.ಮೀ.ನಷ್ಟು ಕಡಿಮೆಯಾಗುತ್ತದೆ ಮತ್ತು ಶರೀರದಲ್ಲಿಯ ಸುಮಾರು ಶೇ.1.5ರಷ್ಟು ಕೊಬ್ಬು ಕರಗುತ್ತದೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ.

♦ರಚನಾತ್ಮಕತೆಯನ್ನು ಹೆಚ್ಚಿಸುತ್ತದೆ

ಮನಸ್ಸಿಗೆ ಮಂಕು ಕವಿದಂತಾಗಿದೆಯೇ? ಏನು ಮಾಡಬೇಕು ಎಂದು ಗೊತ್ತಾಗುತ್ತಿಲ್ಲವೇ? ಒಂದು ಚುರುಕಿನ ವಾಕಿಂಗ್ ಮಾಡಿ. ನಿಮ್ಮ ಕೆಲಸದಲ್ಲಿ ಎದುರಾಗುವ ಸಮಸ್ಯೆಗೆ ಪರಿಹಾರ ಅಗತ್ಯವಿದ್ದರೆ ಅಥವಾ ಯಾವುದೋ ಒಂದು ಐಡಿಯಾಕ್ಕಾಗಿ ತಡಕಾಡುತ್ತಿದ್ದರೆ ವಾಕಿಂಗ್ ಮಾಡುವುದು ನಿಮ್ಮಲ್ಲಿ ರಚನಾತ್ಮಕತೆಯನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಸುತ್ತದೆ ಎನ್ನುವುದು ಅಧ್ಯಯನಗಳಿಂದ ಬೆಳಕಿಗೆ ಬಂದಿದೆ. ಪುಟ್ಟ ವಾಕಿಂಗ್ ಮೆದುಳನ್ನು ಉತ್ತೇಜಿಸುತ್ತದೆ ಮತ್ತು ಹೊಸ ಕಲ್ಪನೆಗಳು ಹುಟ್ಟಿಕೊಳ್ಳಲು ಕಾರಣವಾಗುತ್ತದೆ. ಅಲ್ಲದೆ ವಾಕಿಂಗ್ ನಿಮ್ಮ ಜ್ಞಾಪಕ ಶಕ್ತಿ,ಅರಿವಿನ ಶಕ್ತಿ,ಕಲಿಯುವಿಕೆ,ಓದುವಿಕೆಯನ್ನೂ ಹೆಚ್ಚಿಸುತ್ತದೆ.

♦ ಹೃದ್ರೋಗಗಳ ಅಪಾಯವನ್ನು ತಗ್ಗಿಸುತ್ತದೆ

  ಹೃದ್ರೋಗದ ಸಮಸ್ಯೆಯಿರುವವರಿಗೆ ಪ್ರತಿದಿನ ವಾಕಿಂಗ್ ಮಾಡುವಂತೆ ವೈದ್ಯರು ಶಿಫಾರಸು ಮಾಡುತ್ತಾರೆ. ಪ್ರತಿ ದಿನ 15 ನಿಮಿಷಗಳ ವ್ಯಾಯಾಮ ಮಾಡುವುದರಿಂದ ಹೃದಯರಕ್ತನಾಳ ರೋಗಗಳಿಂದ ಉಂಟಾಗುವ ಸಾವಿನ ಅಪಾಯ ಶೇ.15ರಷ್ಟು ಕಡಿಮೆಯಾಗುತ್ತದೆ. ವಾಕಿಂಗ್ ಕೂಡ ವ್ಯಾಯಾಮವಾಗಿದ್ದು, ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ,ಹೃದಯ ಬಡಿತದ ದರವನ್ನು ಕಾಯ್ದುಕೊಳ್ಳುತ್ತದೆ,ಹೃದಯದ ಸ್ನಾಯುವನ್ನು ಬಲಗೊಳಿಸುತ್ತದೆ ಮತ್ತು ತನ್ಮೂಲಕ ಹೃದಯ ರೋಗಗಳ ವಿರುದ್ಧ ರಕ್ಷಣೆಯನ್ನು ನೀಡುತ್ತದೆ. ವಾರಕ್ಕೆ ಎರಡೂವರೆ ಗಂಟೆಗಳ ಕಾಲ ಬಿರುಸಿನ ನಡಿಗೆ ಅಥವಾ ವ್ಯಾಯಾಮವನ್ನು ಮಾಡುವ ಮಹಿಳೆಯರಲ್ಲಿ ಋತುಬಂಧದ ನಂತರ ಹೃದ್ರೋಗಗಳಿಗೆ ಗುರಿಯಾಗುವ ಅಪಾಯ ಶೇ.30ರಷ್ಟು ಕಡಿಮೆಯಾಗುತ್ತದೆ.

♦ ಆಯುಷ್ಯವನ್ನು ಹೆಚ್ಚಿಸುತ್ತದೆ

 ಹೆಚ್ಚು ಸಮಯ ಬದುಕುವ ಇಚ್ಛೆಯಿದ್ದರೆ ಅದಕ್ಕೆ ಹೆಚ್ಚಿನ ಪ್ರಯತ್ನವೇನೂ ಬೇಕಿಲ್ಲ,ಪ್ರತಿದಿನ ನಿಯಮಿತವಾಗಿ ವಾಕಿಂಗ್ ಮಾಡುತ್ತಿದ್ದರೆ ಸಾಕು. ಅದು ನಿಮ್ಮ ಬದುಕಿಗೆ ವರ್ಷಗಳನ್ನು ಸೇರಿಸುತ್ತದೆ ಮತ್ತು ನಿಮ್ಮನ್ನು ದೀರ್ಘಾಯುಷಿಯನ್ನಾಗಿ ಮಾಡುತ್ತದೆ. ವ್ಯಕ್ತಿಯ ವಯಸ್ಸು ಮತ್ತು ದೇಹತೂಕ ಏನೇ ಇರಲಿ,ನಿಯಮಿತವಾಗಿ ವಾಕಿಂಗ್ ಮಾಡುತ್ತಿದ್ದರೆ ಏಳು ವರ್ಷಗಳವರೆಗೆ ಆಯುಷ್ಯ ಹೆಚ್ಚುತ್ತದೆ ಎಂದು ಅಧ್ಯಯನಗಳು ತೋರಿಸಿವೆ.

♦ ಒತ್ತಡಗಳಿಂದ ಮುಕ್ತಿಯನ್ನು ನೀಡುತ್ತದೆ.

ಸಂಜೆಯ ವೇಳೆಯಲ್ಲಿ ಅಥವಾ ಊಟದ ಬಳಿಕ ವಾಕಿಂಗ್ ನಿಮ್ಮ ಮೂಡನ್ನು ಹೆಚ್ಚಿಸಲು ಮತ್ತು ಒತ್ತಡವನ್ನು ನಿವಾರಿಸಲು ನೆರವಾಗುತ್ತದೆ. ವಾಕಿಂಗ್ ಮಾಡುವುದರಿಂದ ಒತ್ತಡದ ಹಾರ್ಮೋನ್ ಆಗಿರುವ ಕಾರ್ಟಿಸಾಲ್ ನಿವಾರಣೆಯಾಗುತ್ತದೆ ಮತ್ತು ರಕ್ತ ಪರಿಚಲನೆ ಉತ್ತಮಗೊಳ್ಳುತ್ತದೆ,ತನ್ಮೂಲಕ ನೀವು ಶಾಂತಚಿತ್ತ ಮತ್ತು ಹರ್ಷಚಿತ್ತರಾಗಿರಲು ಸಾಧ್ಯವಾಗುತ್ತದೆ.

share
-ಎನ್.ಕೆ.
-ಎನ್.ಕೆ.
Next Story
X