Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕುಸ್ತಿ: ಸಾಕ್ಷಿ ಮಲಿಕ್ ವಿರುದ್ಧ...

ಕುಸ್ತಿ: ಸಾಕ್ಷಿ ಮಲಿಕ್ ವಿರುದ್ಧ ಮತ್ತೊಮ್ಮೆ ಗೆದ್ದ ಸೋನಂ ಮಲಿಕ್

ವಾರ್ತಾಭಾರತಿವಾರ್ತಾಭಾರತಿ26 Feb 2020 11:35 PM IST
share
ಕುಸ್ತಿ: ಸಾಕ್ಷಿ ಮಲಿಕ್ ವಿರುದ್ಧ ಮತ್ತೊಮ್ಮೆ ಗೆದ್ದ ಸೋನಂ ಮಲಿಕ್

ಲಕ್ನೊ, ಫೆ.26: ಯುವ ಕುಸ್ತಿ ತಾರೆ ಸೋನಂ ಮಲಿಕ್ ಸತತ ಎರಡನೇ ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್ ವಿರುದ್ಧ ಟ್ರಯಲ್ಸ್‌ನಲ್ಲಿ ಮೇಲುಗೈ ಸಾಧಿಸಿದ್ದಾರೆ. ಈ ಮೂಲಕ ಮುಂದಿನ ತಿಂಗಳು ನಡೆಯಲಿರುವ ಒಲಿಂಪಿಕ್ಸ್ ಕ್ವಾಲಿಫೈಯರ್‌ನಲ್ಲಿ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ರೋಮ್ ರ್ಯಾಂಕಿಂಗ್ ಸಿರೀಸ್ ಹಾಗೂ ಇತ್ತೀಚೆಗೆ ಕೊನೆಗೊಂಡ ಏಶ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಅಷ್ಟೇನು ಪ್ರಬಲ ಪ್ರದರ್ಶನ ನೀಡದ ಕಾರಣ ಸೋನಂ ಹಾಗೂ ಸಾಕ್ಷಿಗೆ ಮತ್ತೊಮ್ಮೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಸೂಚಿಸಲಾಗಿತ್ತು. 18ರ ಹರೆಯದ ಸೋನಂ 62 ಕೆಜಿ ಸ್ಪರ್ಧೆಯಲ್ಲಿ ಹಿರಿಯ ಕುಸ್ತಿಪಟು ಸಾಕ್ಷಿ ಮಲಿಕ್‌ಗೆ ಕಠಿಣ ಸವಾಲೊಡ್ಡಿದರು.

ಮೊದಲಿಗೆ ರಾಧಿಕಾರನ್ನು ಸೋಲಿಸಿದ ಸೋನಂ ಅವರು ಸೆಮಿ ಫೈನಲ್‌ನಲ್ಲಿ ಸರಿತಾ ಮೋರ್(3-1) ಅವರನ್ನು ಮಣಿಸಿದರು. ಫೈನಲ್‌ನಲ್ಲಿ ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತೆ ಸಾಕ್ಷಿ ಅವರನ್ನು ಸೋಲಿಸಿದರು. 1-2 ಹಿನ್ನಡೆಯಲ್ಲಿದ್ದಾಗ ಎರಡನೇ ಅವಧಿಯಲ್ಲಿ ಪಂದ್ಯ ಕೊನೆಗೊಳ್ಳಲು ಒಂದು ನಿಮಿಷ ಬಾಕಿ ಇರುವಾಗ ಸಾಕ್ಷಿಯನ್ನು ಸೋನಂ ಹಿಮ್ಮೆಟ್ಟಿಸಿದರು.

2018ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತೆ ಪೂಜಾ ದಾಂಡಾ ಸಹಿತ 9 ಕುಸ್ತಿ ತಾರೆಯರು ಮೇಲ್‌ತೂಕದ ವಿಭಾಗದಲ್ಲಿ ಕಾಣಿಸಿಕೊಂಡರು.

ಹಾಲಿ ವಿಶ್ವ ಕೆಡೆಟ್ ಚಾಂಪಿಯನ್ ಸೋನಂ ಕೋಚ್ ಅಜ್ಮೆರ್ ಮಲಿಕ್ ಮಾರ್ಗದರ್ಶನದಲ್ಲಿ ಸೋನೆಪತ್‌ನ ನೇತಾಜಿ ಸುಭಾಶ್ಚಂದ್ರ ಬೋಸ್ ಕ್ರೀಡಾ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

‘‘ಹಿನ್ನಡೆಯ ಹೊರತಾಗಿಯೂ ಸಾಕ್ಷಿ ಮಲಿಕ್‌ರನ್ನು ಮಣಿಸಿರುವ ಯುವ ಕುಸ್ತಿ ತಾರೆಯ ಸಾಧನೆ ಮಹತ್ವದ್ದಾಗಿದೆ. ರೋಮ್ ಸ್ಪರ್ಧೆಯಲ್ಲಿ ಮೊಣಕೈಗೆ ಗಾಯವಾಗಿ ಸಂಪೂರ್ಣ ಚೇತರಿಸಿಕೊಂಡಿರಲಿಲ್ಲ. ಸರಿಯಾಗಿ ತರಬೇತಿಯನ್ನು ಪಡೆದಿರಲಿಲ್ಲ. ಈ ಎಲ್ಲ ಸಮಸ್ಯೆಯ ನಡುವೆಯೂ ಆಕೆಯ ಸಾಧನೆ ಶ್ಲಾಘನೀಯ’’ ಎಂದು ಅಜ್ಮೇರ್ ಹೇಳಿದ್ದಾರೆ.

‘‘ಅಪ್ಪರ್ ವೇಟ್ ವಿಭಾಗದ ಕುಸ್ತಿಪಟಗಳು ತಾವು ಯುವ ಹಾಗೂ ಅನನುಭವಿ ಸೋನಂ ವಿರುದ್ಧ ಪ್ರಾಬಲ್ಯ ಸಾಧಿಸಬಹುದು ಎಂದು ಭಾವಿಸಿದ್ದರು. ಇಂತಹ ಸ್ಪರ್ಧಾತ್ಮಕ ಗುಂಪಿನಲ್ಲಿ ಜಯಶಾಲಿಯಾದರೆ, ಇದೊಂದು ದೊಡ್ಡ ಸಾಧನೆಯಾಗಲಿದೆ ಎಂದು ಸೋನಂಗೆ ಸಲಹೆ ನೀಡಿದ್ದೆ. ಆಕೆಯ ಸಾಧನೆಯಿಂದ ನನಗೆ ಹೆಮ್ಮೆಯಾಗುತ್ತಿದೆ’’ ಎಂದು ಅಜ್ಮೇರ್ ಹೇಳಿದ್ದಾರೆ.

ಭಾರತದ ಕುಸ್ತಿ ಒಕ್ಕೂಟ( ಡಬ್ಲುಎಫ್‌ಐ)ವರ್ಷದ ಆರಂಭದಲ್ಲಿ ರೋಮ್ ರ್ಯಾಂಕಿಂಗ್ ಸಿರೀಸ್ ಸ್ಪರ್ಧೆ ಹಾಗೂ ಏಶ್ಯನ್ ಚಾಂಪಿಯನ್‌ಶಿಪ್‌ಗಾಗಿ ನಡೆಸಿದ್ದ ಟ್ರಯಲ್ಸ್‌ನಲ್ಲಿ ಸೋನಂ ಅವರು ಸಾಕ್ಷಿಗೆ ಸೋಲುಣಿಸಿದ್ದರು. ಎರಡೂ ಸ್ಪರ್ಧೆಗಳಲ್ಲಿ ಸೋನಂ ಪದಕ ಗೆಲ್ಲಲು ವಿಫಲರಾಗಿದ್ದರೂ ಐದನೇ ಸ್ಥಾನ ಪಡೆದಿದ್ದರು. ಕುಸ್ತಿಪಟುಗಳ ಪ್ರದರ್ಶನ ತೃಪ್ತಿಕರವಾಗಿರದಿದ್ದರೆ ಮತ್ತೊಮ್ಮೆ ಟ್ರಯಲ್ಸ್ ನಡೆಸುವುದಾಗಿ ಡಬ್ಲುಎಫ್‌ಐ ಸ್ಪಷ್ಟಪಡಿಸಿತ್ತು. ಮಹಿಳಾ ವಿಭಾಗದ 62 ಕೆಜಿ ಹಾಗೂ 76 ಕೆಜಿ ವಿಭಾಗದಲ್ಲಿ ಮತ್ತೊಮ್ಮೆ ಟ್ರಯಲ್ಸ್ ಘೋಷಿಸಿತ್ತು. ಇದೇ ವೇಳೆ ಕಿರಣ್ 76 ಕೆಜಿ ವಿಭಾಗದಲ್ಲಿ ಜಯಶಾಲಿಯಾಗಿದ್ದರು.

ಏಶ್ಯನ್ ಒಲಿಂಪಿಕ್ಸ್ ಕ್ವಾಲಿಫೈಯರ್ ಕಿರ್ಗಿ ಸ್ತಾನದ ಬಿಶ್‌ಕೆಕ್‌ನಲ್ಲಿ ಮಾರ್ಚ್ 27ರಿಂದ 29ರ ತನಕ ನಡೆಯಲಿದೆ. ಏಶ್ಯನ್ ಒಲಿಂಪಿಕ್ಸ್ ಕ್ವಾಲಿಫೈಯರ್‌ನಲ್ಲಿ ಫೈನಲ್ ತಲುಪುವ ಕುಸ್ತಿಪಟು ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X