Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಅಮೆರಿಕ ಚುನಾವಣೆಯಲ್ಲಿ ಪಾತ್ರ': ಟ್ರಂಪ್...

'ಅಮೆರಿಕ ಚುನಾವಣೆಯಲ್ಲಿ ಪಾತ್ರ': ಟ್ರಂಪ್ ಎದುರಾಳಿ ಬರ್ನೀ ಸ್ಯಾಂಡರ್ಸ್ ಗೆ ಬಿ.ಎಲ್. ಸಂತೋಷ್ ಬೆದರಿಕೆ !

ಟ್ವೀಟ್ ಡಿಲಿಟ್

ವಾರ್ತಾಭಾರತಿವಾರ್ತಾಭಾರತಿ27 Feb 2020 1:43 PM IST
share
ಅಮೆರಿಕ ಚುನಾವಣೆಯಲ್ಲಿ ಪಾತ್ರ: ಟ್ರಂಪ್ ಎದುರಾಳಿ ಬರ್ನೀ ಸ್ಯಾಂಡರ್ಸ್ ಗೆ ಬಿ.ಎಲ್. ಸಂತೋಷ್ ಬೆದರಿಕೆ !

ಹೊಸದಿಲ್ಲಿ: 'ದಿಲ್ಲಿ ಹಿಂಸಾಚಾರದ ಬಗ್ಗೆ ಕೇಳಿದ್ದೇನೆ. ಆದರೆ ಅದರ ಕುರಿತು ಅವರ (ಮೋದಿ) ಜತೆ ಚರ್ಚಿಸಿಲ್ಲ, ಅದು ಭಾರತಕ್ಕೆ ಬಿಟ್ಟಿದ್ದು' ಎಂಬ ಹೇಳಿಕೆ ನೀಡಿದ ಡೊನಾಲ್ಡ್ ಟ್ರಂಪ್ ರನ್ನು ಟೀಕಿಸಿ ಇಂದು ಅಮೆರಿಕಾದ ಮುಂದಿನ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಲಿರುವ ಬರ್ನೀ ಸ್ಯಾಂಡರ್ಸ್ ಟ್ವೀಟ್ ಒಂದನ್ನು ಮಾಡಿದ್ದರು. ಈ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ನಂತರ ತಮ್ಮ ಟ್ವೀಟನ್ನು ಡಿಲಿಟ್ ಮಾಡಿದ್ದಾರೆ.

ಭಾರತ ಭೇಟಿಯ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಾಜಧಾನಿಯಲ್ಲಿ ನಡೆದ ಹಿಂಸಾಚಾರದಲ್ಲಿ ಹಲವರು ಬಲಿಯಾದ ಘಟನೆಯು ಕುರಿತು ಉಲ್ಲೇಖಿಸುತ್ತಾ 'ಅದರ ಬಗ್ಗೆ ಕೇಳಿದ್ದೇನೆ. ಆದರೆ ಅದರ ಕುರಿತು ಅವರ (ಮೋದಿ) ಜತೆ ಚರ್ಚಿಸಿಲ್ಲ, ಅದು ಭಾರತಕ್ಕೆ ಬಿಟ್ಟಿದ್ದು'' (ದ್ಯಾಟ್ಸ್ ಅಪ್ ಟು ಇಂಡಿಯಾ) ಎಂದು ಹೇಳಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಬರ್ನೀ ಸ್ಯಾಂಡರ್ಸ್, "ಇದು ಮಾನವ ಹಕ್ಕುಗಳ ಕುರಿತಂತೆ ನಾಯಕತ್ವ ವೈಫಲ್ಯ'' ಎಂದು ಹೇಳಿದ್ದರು.

ಬರ್ನೀ ಸ್ಯಾಂಡರ್ಸ್ ಅವರ ಟ್ವೀಟ್ ಹೀಗಿತ್ತು- "200 ಮಿಲಿಯನ್‍ಗೂ ಅಧಿಕ ಮುಸ್ಲಿಮರು ಭಾರತವನ್ನು ತಮ್ಮ ಮನೆಯೆಂದು ಕರೆಯುತ್ತಾರೆ, ಮುಸ್ಲಿಂ ವಿರೋಧಿ ಗುಂಪು ಹಿಂಸಾಚಾರ ಕನಿಷ್ಠ 27 ಜನರನ್ನು ಬಲಿ ಪಡೆದು ಇನ್ನೂ ಹಲವರನ್ನು ಗಾಯಗೊಳಿಸಿದೆ. ಇದಕ್ಕೆ ಪ್ರತಿಕ್ರಿಯಿಸಿ ಟ್ರಂಪ್ `ಅದು ಭಾರತಕ್ಕೆ ಬಿಟ್ಟಿದ್ದು' ಎನ್ನುತ್ತಾರೆ, ಇದು ಮಾನವ ಹಕ್ಕುಗಳ ಕುರಿತಂತೆ ನಾಯಕತ್ವ ವೈಫಲ್ಯ'' ಎಂದು  ಟ್ವೀಟ್ ಮಾಡಿದ್ದರು.

ಇದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಬಿ ಎಲ್ ಸಂತೋಷ್ ಅವರ ಉತ್ತರ ಹೀಗಿತ್ತು. "ನಾವೆಷ್ಟೇ ತಟಸ್ಥರಾಗಿರಲು ಬಯಸಿದರೂ ಅಧ್ಯಕ್ಷೀಯ ಚುನಾವಣೆಯಲ್ಲಿ ಪಾತ್ರ ವಹಿಸುವಂತೆ ಮಾಡಲು ನೀವು ಅನಿವಾರ್ಯಗೊಳಿಸುತ್ತಿದ್ದೀರಿ. ಹೀಗೆ ಹೇಳಲು ವಿಷಾದವಿದೆ. ಆದರೆ ನೀವು ಅನಿವಾರ್ಯಗೊಳಿಸುತ್ತಿದ್ದೀರಿ'' ಎಂದು ಬರೆದಿದ್ದರು. ಆದರೆ ಆನಂತರ ಈ ಟ್ವೀಟ್ ಡಿಲಿಟ್ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X