Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ತೇಜಸ್ ಪೈಲಟ್ ಕಂಗನಾ

ತೇಜಸ್ ಪೈಲಟ್ ಕಂಗನಾ

ವಾರ್ತಾಭಾರತಿವಾರ್ತಾಭಾರತಿ27 Feb 2020 2:43 PM IST
share
ತೇಜಸ್ ಪೈಲಟ್ ಕಂಗನಾ

ಇತ್ತೀಚಿನ ವರ್ಷಗಳಲ್ಲಿ ಕಂಗನಾ ರಣಾವತ್ ಅಭಿನಯದ ಚಿತ್ರಗಳು ನಾಯಕಿ ಪ್ರಧಾನ ಕಥಾವಸ್ತುವನ್ನು ಹೊಂದುತ್ತಿರುತ್ತದೆಯೆಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಕಂಗನಾ ಅಭಿನಯದ ತಲೈವಿ ಜೂನ್‌ನಲ್ಲಿ ತೆರೆಕಾಣಲಿದೆ. ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ ಜೀವನಕಥೆಯಾಧಾರಿತ ಈ ಚಿತ್ರವು ಈಗಾಗಲೇ ಭಾರೀ ಕುತೂಹಲವನ್ನು ಕೆರಳಿಸಿದೆ. ಇದೀಗ ಕಂಗನಾ ನಟಿಸುತ್ತಿರುವ ತೇಜಸ್ ಚಿತ್ರದ ಫಸ್ಟ್ ಲುಕ್ ಹೊರಬಿದ್ದಿದೆ. ಭಾರತೀಯ ವಾಯುಪಡೆಯ ಯುದ್ಧವಿಮಾನದ ಪೈಲಟ್ ಪೋಷಾಕಿನಲ್ಲಿ ಮಿಂಚುತ್ತಿರುವ ಕಂಗನಾರ ಈ ಫಸ್ಟ್ ಲುಕ್ ಈಗಾಗಲೇ ಇಂಟರ್‌ನೆಟ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ.

   2016ರಲ್ಲಿ ಭಾರತೀಯ ವಾಯುಪಡೆ ಮೊತ್ತ ಮೊದಲ ಬಾರಿಗೆ ಮಹಿಳೆಯನ್ನು ಯುದ್ಧದ ಕರ್ತವ್ಯಗಳಿಗೆ ನಿಯೋಜಿಸಿತ್ತು. ಭಾರತೀಯ ರಕ್ಷಣಾ ಪಡೆಯ ಇತಿಹಾಸದಲ್ಲೇ ಅವಿಸ್ಮರಣವೀಯವೆನ್ನಬಹುದಾದ ಈ ವಿದ್ಯಮಾನದಿಂದ ಸ್ಫೂರ್ತಿ ಪಡೆದು ತೇಜಸ್ ಚಿತ್ರ ನಿರ್ಮಾಣವಾಗುತ್ತಿದೆ. ಫೈಟರ್ ಯುದ್ಧ ವಿಮಾನದ ಪೈಲಟ್ ಪಾತ್ರದಲ್ಲಿ ನಟಿಸುತ್ತಿರುವುದು ತನಗೆ ದೊರೆತ ಗೌರವವೆಂದು ಕಂಗನಾ ಹೇಳುತ್ತಾರೆ. ‘‘ ನಮ್ಮ ಸಮವಸ್ತ್ರಧಾರಿ ಧೀರ ಮಹಿಳೆಯರು ಮಾಡಿರುವ ಹಲವು ತ್ಯಾಗ, ಬಲಿದಾನಗಳನ್ನು ದೇಶವು ಗುರುತಿಸದೆ ಹೋಗಿದೆ. ದೇಶಕ್ಕಾಗಿ ತನ್ನ ಪ್ರಾಣವನ್ನೇ ಮುಡಿಪಾಗಿಟ್ಟ ವೀರ ವನಿತಾ ಪೈಲಟ್‌ನ ಪಾತ್ರದಲ್ಲಿ ಅಭಿನಯಿಸುತ್ತಿರುಂಜಿುದು ತನ್ನ ಸೌಭಾಗ್ಯವೆಂದು ಆಕೆ ಹೇಳಿಕೊಂಡಿದ್ದಾರೆ. ಈ ಚಿತ್ರವು ಇಂದಿನ ಯುವಜನತೆಯಲ್ಲಿ ದೇಶಭಕ್ತಿಯ ಭಾವನೆಯನ್ನು ಬೆಳಗಿಸುವುದೆಂಬ ಆಶಾವಾದ ಹೊಂದಿರುವುದಾಗಿ ಕಂಗನಾ ಹೇಳುತ್ತಾರೆ.

  ಬಾಲಿವುಡ್‌ನ ಖ್ಯಾತ ನಿರ್ಮಾಪಕ ರೊನಿ ಸ್ಕ್ರೂವಾಲಾ ಅವರು ಆರ್‌ಎಸ್‌ವಿಪಿ ಬ್ಯಾನರ್‌ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 2018ರಲ್ಲಿ ತೆರೆಕಂಡ ಸೇನಾ ಕಾರ್ಯಾಚರಣೆಯ ಕಥಾವಸ್ತು ಹೊಂದಿರುವ ‘ಉರಿ- ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರಕ್ಕೂ ಸ್ಕ್ರೂವಾಲಾ ನಿರ್ಮಾಪಕರಾಗಿದ್ದರು. ತೇಜಸ್ ಚಿತ್ರವು ಭಾರತೀಯ ವಾಯುಪಡೆಯ ಧೀರ ಪೈಲಟ್‌ಗಳಿಗೆ ಸಮರ್ಪಿಸಲಾಗುವುದು ಎಂದು ರೊನಿ ಹೇಳುತ್ತಾರೆ.

 ಸರ್ವೇಶ್ ಮೆವಾರಾ ತೇಜಸ್ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ನಿರ್ದೇಶಕರಾಗುತ್ತಿದ್ದಾರೆ. ಚಿತ್ರಕಥೆಯನ್ನು ಕೂಡಾ ಅವರೇ ಬರೆದಿದ್ದಾರೆ. ತೇಜಸ್ ಚಿತ್ರದ ಶೂಟಿಂಗ್ ಬೇಸಿಗೆಯಲ್ಲಿ ಬಿಡುಗಡೆಯಾಗಲಿದ್ದು, 2021ರ ಎಪ್ರಿಲ್‌ನಲ್ಲಿ ಬಿಡುಗಡೆಗೊಳ್ಳಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X