Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಂಡಿ ಆದಾಯ ಸೋರಿಕೆ ತಡೆಗೆ ಕ್ರಮ:...

ಹುಂಡಿ ಆದಾಯ ಸೋರಿಕೆ ತಡೆಗೆ ಕ್ರಮ: ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ27 Feb 2020 6:07 PM IST
share
ಹುಂಡಿ ಆದಾಯ ಸೋರಿಕೆ ತಡೆಗೆ ಕ್ರಮ: ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು, ಫೆ. 27: ಮುಜರಾಯಿ ದೇವಸ್ಥಾನಗಳ ಹುಂಡಿ ಆದಾಯ ಸೋರಿಕೆ, ದೇವಸ್ಥಾನ ಮತ್ತು ಛತ್ರಗಳ ಆಸ್ತಿ ಸಂರಕ್ಷಣೆ ಹಾಗೂ ಇಲಾಖೆ ವ್ಯಾಪ್ತಿಯಿಂದ ಕೈಬಿಟ್ಟು ಆದಾಯ ಹೆಚ್ಚಿರುವ ದೇವಸ್ಥಾನಗಳ ಮರು ಸೇರ್ಪಡೆ ಸಂಬಂಧ ವರದಿ ನೀಡಲು ಹಿರಿಯ ಐಎಎಸ್ ರೋಹಿಣಿ ಸಿಂಧೂರಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇಲಾಖೆ ವ್ಯಾಪ್ತಿಯಲ್ಲಿನ 33 ಸಾವಿರಕ್ಕೂ ಹೆಚ್ಚು ದೇವಸ್ಥಾನಗಳಿದ್ದು, ಅವುಗಳ ಭೂ ದಾಖಲೆಗಳ ಗಣಕೀಕರಣ ನಡೆಯುತ್ತಿದೆ. ಆಸ್ತಿ ಒತ್ತುವರಿಯಾದ ಪ್ರಕರಣಗಳು ಇದುವರೆಗೆ ಪತ್ತೆಯಾಗಿಲ್ಲ. ಆದರೆ, ಇಲಾಖೆ ಆಸ್ತಿ ಸಂರಕ್ಷಣೆ ದೃಷ್ಟಿಯಿಂದ ಮೂರು ತಿಂಗಳಲ್ಲಿ ಈ ಬಗ್ಗೆ ಸಮಗ್ರ ವರದಿ ನೀಡಲು ಸೂಚನೆ ನೀಡಲಾಗಿದೆ. ಇಲಾಖೆ ಆದಾಯ ಹೆಚ್ಚಿಸುವ ದೃಷ್ಟಿಯಿಂದ ಸೋರಿಕೆ ತಡೆಗೆ ಕ್ರಮ ವಹಿಸಲಾಗುತ್ತಿದೆ ಎಂದರು.

ದೇವಾಲಯಗಳಲ್ಲಿ ಗೋಶಾಲೆ: ಗೋ ತಳಿ ಸಂರಕ್ಷಣೆಗಾಗಿ ರಾಮಚಂದ್ರಾಪುರ ಮಠದ ಮಾರ್ಗದರ್ಶನದಲ್ಲಿ ರಾಜ್ಯದ 25 ದೇವಳಗಳಲ್ಲಿ ಗೋಶಾಲೆ ನಿರ್ಮಾಣಕ್ಕೆ ಸರಕಾರ ಚಿಂತನೆ ನಡೆಸಿದೆ. ಉತ್ತಮ ಆದಾಯವಿರುವ ‘ಎ’ ದರ್ಜೆಯ ಇಪ್ಪತ್ತೈದು ದೇವಳಗಳ ಆವರಣದಲ್ಲಿ ಗೋಶಾಲೆ ಸ್ಥಾಪಿಸಲಾಗುವುದು ಎಂದರು.

ಸಪ್ತಪದಿ: ಸರಳ ಸಾಮೂಹಿಕ ವಿವಾಹ ಪ್ರೋತ್ಸಾಹಿಸಲು ಇಲಾಖೆಯ ನೂರು ದೇವಸ್ಥಾನಗಳಲ್ಲಿ ‘ಸಪ್ತಪದಿ’ ಯೋಜನೆಯಡಿ ಮೊದಲ ಹಂತದಲ್ಲಿ ಎಪ್ರಿಲ್ 26ಕ್ಕೆ ನಡೆಯಲಿರುವ ಸಾಮೂಹಿಕ ವಿವಾಹಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದೆ. ಗದಗ, ಹುಬ್ಬಳ್ಳಿ-ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ‘ಎ’ ದರ್ಜೆ ದೇವಸ್ಥಾನಗಳಲ್ಲ. ಹೀಗಾಗಿ ಬಿ ಮತ್ತು ಸಿ ದರ್ಜೆ ದೇವಸ್ಥಾನಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿಸಲು ಉದ್ದೇಶಿಸಿದ್ದು, ಇಲಾಖೆ ಆ ದೇವಸ್ಥಾನಗಳಿಗೆ ಅನುದಾನ ನೀಡಲಿದೆ ಎಂದು ತಿಳಿಸಿದರು.

ಎ.26ರ ಸಪ್ತಪದಿ ಸಾಮೂಹಿಕ ವಿವಾಹಕ್ಕೆ ಈವರೆಗೂ 1,218 ಅರ್ಜಿಗಳನ್ನು ವಿತರಣೆ ಮಾಡಿದ್ದು, ಆ ಪೈಕಿ ದಾಖಲೆಗಳೊಂದಿಗೆ 200 ಅರ್ಜಿಗಳು ವಾಪಸ್ ಬಂದಿವೆ ಎಂದ ಅವರು, ಆರ್ಥಿಕವಾಗಿ ಹಿಂದುಳಿದವರು ಈ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೋರಿದರು.

ಜಾಗೃತಿ: ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಲು ಮಾ.1ಕ್ಕೆ ಉತ್ತರ ಕನ್ನಡದ ಶಿರಸಿಯಲ್ಲಿ, ಮಾ.7ಕ್ಕೆ ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಜನಪ್ರತಿನಿಧಿಗಳ ಜಾಗೃತಿಗೆ ಸಪ್ತಪದಿ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಪರಿಶೀಲನೆ: ದೇವಳಗಳಲ್ಲಿ ವಸ್ತ್ರ ಸಂಹಿತೆ, ಪೂಜಾ ಪದ್ಧತಿ ಬದಲಾವಣೆ ಸೇರಿ ಹಲವು ಸಲಹೆಗಳು ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದ ಅವರು, ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಆತ್ಮರಕ್ಷಣೆಗಾಗಿ ಮಾರ್ಷಲ್ ಆರ್ಟ್ಸ್ ಬಗ್ಗೆ ತರಬೇತಿ ನೀಡಲು ಸಲಹೆ ಬಂದಿದ್ದು, ಪರಿಶೀಲಿಸಲಾಗುವುದು ಎಂದರು.

‘ತಿರುಪತಿ ತಿರುಮಲ, ಕೇರಳದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ರಾಜ್ಯದಿಂದ ಹೋಗುವ ಭಕ್ತರಿಗೆ ಆಗುವ ತೊಂದರೆ ಬಗ್ಗೆ ಪರಿಶೀಲನೆಗೆ ಶೀಘ್ರವೇ ತಾನು ತಿರುಪತಿಗೆ ಭೇಟಿ ನೀಡಲಿದ್ದೇನೆ. ಅಲ್ಲದೆ, ಈಗಾಗಲೇ ಮೂಲಸೌಲಭ್ಯ ಕಲ್ಪಿಸುವ ಸಂಬಂಧ ಇಬ್ಬರು ಹಿರಿಯ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ’

-ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X