Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಧತ್ವದ ನಡುವೆಯೂ ರ‍್ಯಾಂಕ್ ಮೂಲಕ...

ಅಂಧತ್ವದ ನಡುವೆಯೂ ರ‍್ಯಾಂಕ್ ಮೂಲಕ ಶೈಕ್ಷಣಿಕ ಸಾಧನೆಗೈದ ನಿತ್ಯಾನಂದ

ಮಂಗಳೂರು ವಿಶ್ವವಿದ್ಯಾನಿಲಯದ 38ನೆ ಘಟಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ27 Feb 2020 9:21 PM IST
share
ಅಂಧತ್ವದ ನಡುವೆಯೂ ರ‍್ಯಾಂಕ್ ಮೂಲಕ ಶೈಕ್ಷಣಿಕ ಸಾಧನೆಗೈದ ನಿತ್ಯಾನಂದ

ಕೊಣಾಜೆ: ಒಂದೆಡೆ ಆರ್ಥಿಕವಾದ ಬಡತನ, ಮತ್ತೊಂದೆಡೆ ಬಾಲ್ಯದಿಂದಲೇ ಕಾಡುತ್ತಿರುವ ಅಂಧತ್ವ. ಇವುಗಳೆಲ್ಲವನ್ನು‌ ಸವಾಲಾಗಿ ಸ್ವೀಕರಿಸಿ ಬಿಎಸ್ ಡಬ್ಲ್ಯುವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಮಂಗಳೂರು ವಿವಿಯಲ್ಲಿ ಪ್ರಥಮ ರ‍್ಯಾಂಕ್ ನೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡರು.

ಒಂದನೆಯಿಂದ ನಾಲ್ಕನೆಯ ತರಗತಿಯವರೆಗೆ ಮಂಗಳೂರಿನಲ್ಲಿ ಶಿಕ್ಷಣ ಪಡೆದ ನಿತ್ಯಾನಂದ ಅವರು ಬಳಿಕ ಐದನೇ ತರಗತಿಯನ್ನು ಶಿವಮೊಗ್ಗದಲ್ಲಿ, ಆರನೇ ತರಗತಿಯನ್ನು ಬೆಂಗಳೂರಿನಲ್ಲಿ ಪೂರೈಸಿದರು. ಏಳರಿಂದ ಪಿಯುಸಿಯವರೆಗೆ ಮಂಗಳೂರಿನಲ್ಲಿ ಹಾಗೂ ಬಿಎಸ್ ಡಬ್ಲ್ಯು ಪದವಿಯನ್ನು ಆಳ್ವಾಸ್ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡ ನಿತ್ಯಾನಂದರಿಗೆ ತಾಯಿಯೇ ಆಧಾರಸ್ಥಂಭವಾಗಿದ್ದರು. ಅಂಗನನಾಡಿ‌ಯಲ್ಲಿ ಕೆಲಸಕ್ಕಿರುವ ಇವರ ತಾಯಿ ನಿತ್ಯಾನಂದರ ಶೈಕ್ಷಣಿಕ ಕನಸಿಗೆ ಬೆನ್ನೆಲುಬಾಗಿ‌ ನಿಂತು ಪ್ರೋತ್ಸಾಹ‌ ನೀಡಿದ್ದಾರೆ.

ಮೋಹನ್ ಆಳ್ವರ ಸಹಕಾರದಲ್ಲಿ ಉಚಿತ‌ ಶಿಕ್ಷಣದೊಂದಿಗೆ ಉಚಿತವಾಗಿ ಹಾಸ್ಟೇಲ್ ಕೂಡಾ ಲಭಿಸಿತ್ತು. ಅಲ್ಲದೆ‌ ಎಲ್ಲ ಶಿಕ್ಷಕರು, ಪೋಷಕರು, ಗೆಳೆಯರ ಸಹಕಾರದಿಂದ ಇಂದು ಶೈಕ್ಷಣಿಕವಾಗಿ ಸಾಧನೆಗೈಯಲು ಸಾಧ್ಯವಾಗಿದೆ ಎನ್ನುತ್ತಾರೆ ನಿತ್ಯಾನಂದ.

ಸ್ಕ್ರೀನ್ ರೀಡಿಂಗ್ ಸಾಪ್ಟ್ ವೇರ್ ಮೂಲಕ ಅಧ್ಯಯನ

ಪದವಿಯಲ್ಲಿ ನನ್ನ ಅಧ್ಯಯನಕ್ಕೆ ಎಲ್ಲಾ ಶಿಕ್ಷಕರು‌ ಸಹಕರಿಸಿದ್ದಾರೆ. ಜೊತೆಗೆ ಲ್ಯಾಪ್ ಟಾಪ್ ಹಾಗೂ ಮೊಬೈಲ್ ನಲ್ಲಿ‌ ಸ್ಕ್ರೀನ್ ರೀಡಿಂಗ್ ಸಾಪ್ಟ್ ವೇರ್ ಅಳವಡಿಸಿ ಅದರ ಮೂಲಕ ಅಧ್ಯಯನ ಮಾಡಿ ಈ ಸಾಧನೆ ಮಾಡಲು ಸಾಧ್ಯವಾಗಿದೆ. ನನ್ನ ಜೊತೆಗೆ‌ ಇನ್ನಿಬ್ಬರು ಅಂಧ ವಿದ್ಯಾರ್ಥಿಗಳಾದ ಗುರುರಾಜ್ ಮತ್ತು ಪ್ರದೀಪ್ ಇದ್ದು‌ ಕ್ರಮವಾಗಿ ಅವರಿಗೆ ಕೂಡಾ ದ್ವಿತೀಯ, ತೃತೀಯ ‌ರ‍್ಯಾಂಕ್ ಬಂದಿರುವುದು ಸಂತಸ ತಂದಿದೆ ಎಂದರು.

ಈಗ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದು, ಯಾವುದಾದರೂ ಸರ್ಕಾರಿ‌ ಉದ್ಯೋಗ ಅಥವಾ ಕಂಪೆನಿಯಲ್ಲಿ ಉದ್ಯೋಗ ದೊರೆತರೆ ತಾಯಿಯೊಂದಿಗೆ ನೆಮ್ಮದಿಯ‌ ಬದುಕನ್ನು ಕಳೆಯಬೇಕೆಂಬ ಆಸೆಯಿದೆ ಎಂದು ಅವರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X