Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.1: ಪೌರತ್ವ ತಿದ್ದುಪಡಿ ಕಾಯ್ದೆ...

ಮಾ.1: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮದನಿ ನಗರದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Feb 2020 10:42 PM IST
share

ಮಂಗಳೂರು, ಫೆ. 27: ಕೇಂದ್ರ ಸರಕಾರವು ಜಾರಿಗೆ ತಂದಿರುವ ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ‘ಸಂವಿಧಾನ ಉಳಿಸಿ, ದೇಶ ರಕ್ಷಿಸಿ’ ಎಂಬ ಘೋಷಣೆಯೊಂದಿಗೆ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರನ್ನು ಒಳಗೊಂಡ ‘ಸಂವಿಧಾನ ಸಂರಕ್ಷಣಾ ಸಮಿತಿ’ಯ ವತಿಯಿಂದ ಮಾ.1ರಂದು ಮಧ್ಯಾಹ್ನ 2ಕ್ಕೆ ಕುತ್ತಾರ್ ಸಮೀಪದ ಮದನಿ ನಗರ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಹೈದರ್ ಪರ್ತಿಪ್ಪಾಡಿ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಸಮಾವೇಶದಲ್ಲಿ ಮಾನವ ಹಕ್ಕುಗಳ ಹೋರಾಟಗಾರರಾದ ತೀಸ್ತಾ ಸೆಟಲ್ವಾದ್ ಮತ್ತು ಶಿವಸುಂದರ್, ಮಾಜಿ ಜಿಲ್ಲಾಧಿಕಾರಿ ಸಶಿಕಾಂತ ಸೆಂಥಿಲ್, ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್, ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಮಜೀದ್ ಖಾನ್, ಸಿಪಿಎಂ ಜಿಲ್ಲಾ ಮುಖಂಡ ಸುನೀಲ್ ಕುಮಾರ್ ಬಜಾಲ್ ಪ್ರಮುಖ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.

ಉಳ್ಳಾಲ ಕೇಂದ್ರ ಜುಮಾ ಮಸೀದಿ ಮತ್ತು ದರ್ಗಾ ಸಮಿತಿಯ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್‌ರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶವನ್ನು ಶಾಸಕ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಉಡುಪಿ ಖಾಝಿ ಅಲ್‌ಹಾಜ್ ಬೇಕಲ ಇಬ್ರಾಹೀಂ ಮುಸ್ಲಿಯಾರ್, ಬಬ್ಬುಕಟ್ಟೆ ನಿತ್ಯಾಧರ್ ಚರ್ಚ್‌ನ ಪ್ರಧಾನ ಧರ್ಮಗುರು ರೆ. ಫಾ. ಎಲ್ಯಾಸ್ ಡಿಸೋಜ, ಮದನಿ ನಗರ ಜುಮಾ ಮಸೀದಿಯ ಖತೀಬ್ ಮುದ್ರಿಖ ಮದನಿ, ಬಬ್ಬುಕಟ್ಟೆ ಬಿಷಪ್ ಸರ್ಜೆಂಟ್ ಚರ್ಚ್‌ನ ಪ್ರಧಾನ ಧರ್ಮಗುರು ರೆ.ಫಾ.ಎಂ. ಪ್ರಭುರಾಜ್ ಆಶೀರ್ವಚನ ನೀಡಲಿದ್ದಾರೆ.

ಸಿಪಿಎಂ ಉಳ್ಳಾಲ ವಲಯ ಕಾರ್ಯದರ್ಶಿ ಕೃಷ್ಣಪ್ಪಸಾಲಿಯಾನ್, ಎಸ್ಕೆಎಸೆಸ್ಸೆಫ್ ಸಂಘಟನೆಯ ಇಬ್ರಾಹಿಂ ಬಾತಿಶ್ ಎಸ್. ಕೊಡ್ಲಿಪೇಟೆ, ಎಸ್ಸೆಸ್ಸೆಫ್ ಸಂಘಟನೆಯ ಹಾಫಿಝ್ ಸೂಫಿಯಾನ್ ಸಖಾಫಿ ಕಾವಳಕಟ್ಟೆ, ಪತ್ರಕರ್ತ ಅಬ್ದುಲ್ ಖಾದರ್ ಕುಕ್ಕಿಲ, ಎಸ್ಕೆಎಸ್ಸೆಂ ದಅ್ವಾ ಘಟಕದ ಕಾರ್ಯದರ್ಶಿ ಎಂ.ಜಿ. ಮುಹಮ್ಮದ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಹಾಜಿ ವೈ. ಅಬ್ದುಲ್ಲ ಕುಂಞಿ, ಹಾಜಿ ಯು.ಕೆ. ಮೋನು, ಹಾಜಿ ಕುಂಞಿ ಅಹ್ಮದ್, ಹಾಜಿ ಎ. ಮೊಯ್ದಿನ್, ಹಾಜಿ ಎ.ಎಚ್. ಮುಹ್ಮೂದ್, ಹಾಜಿ ಶೌಕತ್ ಶೌರಿ, ರೆ. ಫಾ. ಸಂತೋಷ್ ಡಿಸೋಜ, ಇಸ್ಮಾಯೀಲ್ ಬಾಪುಂಞಿ, ಕೆ. ಅಶ್ರಫ್, ಹಾಜಿ ಅರಬಿ ಕುಂಬ್ಳೆ, ಹಾಜಿ ಇಬ್ರಾಹೀಂ ಕೋಡಿಜಾಲ್, ಹಾಜಿ ಎಸ್.ಎಂ. ರಶೀದ್, ಹಾಜಿ ಮನ್ಸೂರ್ ಅಹ್ಮದ್, ಹಾಜಿ ಎ.ಕೆ. ಅಹ್ಮದ್, ಹಾಜಿ ಬಿ.ಎಂ. ಶರೀಫ್, ಮುಹಮ್ಮದ್ ಕುಂಞಿ, ಯಾದವ ಶೆಟ್ಟಿ, ಮುನೀರ್ ಕಾಟಿಪಳ್ಳ, ಹಾಜಿ ಎಸ್.ಕೆ. ಖಾದರ್, ಕೃಷ್ಣ ಗಟ್ಟಿ, ಅಬ್ದುಲ್ ಅಝೀಝ್ ಯಾನೆ ಮೈಸೂರು ಬಾವ, ಇಸ್ಮಾಯೀಲ್ ಸಾಗರ್, ಮುಹಮ್ಮದ್ ಪರಪ್ಪು, ಜೀವನ್ ರಾಜ್ ಕುತ್ತಾರು, ಆಲ್ವಿನ್ ಡಿಸೋಜ, ಪದ್ಮನಾಭ ನರಿಂಗಾನ ಮತ್ತಿತರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಕೃಷ್ಣಪ್ಪ ಸಾಲಿಯಾನ್, ಗೌರವ ಸಲಹೆಗಾರರಾದ ಉಮರ್ ಯು.ಎಚ್., ಆಲ್ವಿನ್ ಡಿಸೋಜ, ನವೀನ್ ಡಿಸೋಜ, ಕೋಶಾಧಿಕಾರಿ ಫಾರೂಕ್ ಎಫ್.ಆರ್.ಕೆ., ಉಪಾಧ್ಯಕ್ಷ ಅಬ್ದುಲ್ ರವೂಫ್ ಬಿ., ಕಾರ್ಯದರ್ಶಿ ಮುಸ್ತಫಾ ಮುನ್ನೂರು, ಜೊತೆ ಕಾರ್ಯದರ್ಶಿ ಇಸ್ಮಾಯೀಲ್ ಮುನ್ನೂರು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X