Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಜೆಗಳನ್ನು ರಕ್ಷಿಸಲು ಭಾರತ ವಿಫಲ:...

ಪ್ರಜೆಗಳನ್ನು ರಕ್ಷಿಸಲು ಭಾರತ ವಿಫಲ: ಯುಎಸ್‌ಸಿಐಆರ್‌ಎಫ್

ವಾರ್ತಾಭಾರತಿವಾರ್ತಾಭಾರತಿ27 Feb 2020 10:49 PM IST
share
ಪ್ರಜೆಗಳನ್ನು ರಕ್ಷಿಸಲು ಭಾರತ ವಿಫಲ: ಯುಎಸ್‌ಸಿಐಆರ್‌ಎಫ್

ವಾಷಿಂಗ್ಟನ್, ಫೆ. 27: ದಿಲ್ಲಿ ಹಿಂಸಾಚಾರದ ಬಗ್ಗೆ ‘ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್‌ನ್ಯಾಷನಲ್ ರಿಲೀಜಿಯಸ್ ಫ್ರೀಡಂ’ (ಯುಎಸ್‌ಸಿಐಆರ್‌ಎಫ್) ಬುಧವಾರ ತನ್ನ ಹೇಳಿಕೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಭೇಟಿ ನೀಡಿದ ಸಂದರ್ಭ ಈಶಾನ್ಯ ದಿಲ್ಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಪು ದಾಳಿ ನಡೆಸಿದ ಘಟನೆ ವರದಿಯಾಗಿದೆ ಎಂದು ಹೇಳಿಕೆ ತಿಳಿಸಿದೆ. ವರದಿಗಳ ಪ್ರಕಾರ ಹಲವು ಮಸೀದಿಗಳಲ್ಲಿ ದಾಂಧಲೆ ನಡೆಸಲಾಗಿದೆ. ದಾಳಿಕೋರರಿಗೆ ಬೆದರಿ ಈ ಪ್ರದೇಶದಿಂದ ಹಲವು ಮುಸ್ಲಿಂ ನಾಗರಿಕರು ಪರಾರಿಯಾಗಿದ್ದಾರೆ ಎಂದು ಅದು ತಿಳಿಸಿದೆ.

ದಿಲ್ಲಿಯಾದ್ಯಂತ ಹೆಚ್ಚುತ್ತಿರುವ ಕ್ರೂರ ಹಾಗೂ ಅನಿಯಂತ್ರಿತ ಹಿಂಸಾಚಾರ ಮುಂದುವರಿಯಬಾರದು. ತನ್ನ ಎಲ್ಲ ನಾಗರಿಕರಿಗೆ ಸಂರಕ್ಷಣೆ ನೀಡಲು ಕೇಂದ್ರ ಸರಕಾರ ಕ್ರಮ ತೆಗೆದುಕೊಳ್ಳಬೇಕು. ಮುಸ್ಲಿಮರ ಮೇಲಿನ ಹಿಂಸಾತ್ಮಕ ದಾಳಿಯ ಸಂದರ್ಭ ದಿಲ್ಲಿ ಪೊಲೀಸರು ಮಧ್ಯಪ್ರವೇಶಿಸುತ್ತಿಲ್ಲ ಹಾಗೂ ಸರಕಾರ ತನ್ನ ನಾಗರಿಕರನ್ನು ರಕ್ಷಿಸುವ ಕರ್ತವ್ಯದಲ್ಲಿ ವಿಫಲವಾಗುತ್ತಿವೆ ಎಂಬ ವರದಿ ಬರುತ್ತಿವೆ. ಇದು ಸ್ಪಷ್ಟವಾಗಿ ಮಾನವ ಹಕ್ಕುಗಳ ಉಲ್ಲಂಘನೆ ಎಂದು ಯುಎಸ್‌ಸಿಐಆರ್‌ಎಫ್ ಆಯುಕ್ತೆ ಅರುಣಿಮಾ ಭಾರ್ಗವ್ ಹೇಳಿದ್ದಾರೆ. ಹಿಂಸಾಚಾರಕ್ಕೆ ದಿಲ್ಲಿ ಸಾಕ್ಷಿಯಾಗಿದೆ. ಮುಸ್ಲಿಮರ ಮೇಲಿನ ದಾಳಿಗಳು ವರದಿಯಾಗಿವೆ. ಅವರ ಮನೆ, ಅಂಗಡಿ ಹಾಗೂ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ಮಾಡಲಾಗಿದೆ. ಧರ್ಮ ಪರಿಗಣಿಸದೆ ಎಲ್ಲರಿಗೂ ರಕ್ಷಣೆ ನೀಡುವುದು ಯಾವುದೇ ಜವಾಬ್ದಾರಿಯುತ ಸರಕಾರವೊಂದರ ಅಗತ್ಯದ ಕರ್ತವ್ಯಗಳಲ್ಲಿ ಒಂದು. ಆದುದರಿಂದ ಗುಂಪು ಹಿಂಸಾಚಾರಕ್ಕೆ ಗುರಿಯಾಗುವ ಮುಸ್ಲಿಮರು ಹಾಗೂ ಇತರರನ್ನು ರಕ್ಷಿಸಲು ಗಂಭೀರ ಕ್ರಮ ಕೈಗೊಳ್ಳಿ ಎಂದು ನಾವು ಭಾರತ ಸರಕಾರವನ್ನು ಆಗ್ರಹಿಸುತ್ತೇವೆ ಎಂದು ಯುಎಸ್‌ಸಿಐಆರ್‌ಎಫ್‌ನ ಅಧ್ಯಕ್ಷ ಟೋನಿ ಪರ್ಕಿನ್ಸ್ ತಿಳಿಸಿದ್ದಾರೆ.

 ಇದಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್, “ನಾವು ಯುಎಸ್‌ಸಿಐಆರ್‌ಎಫ್, ಒಂದು ಗುಂಪಿನ ಮಾಧ್ಯಮ ಹಾಗೂ ಕೆಲವು ವ್ಯಕ್ತಿಗಳು ದಿಲ್ಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ನೀಡಿದ ಹೇಳಿಕೆಯನ್ನು ನೋಡಿದ್ದೇವೆ. ಇದು ಸರಿಯಲ್ಲದ, ದಾರಿತಪ್ಪಿಸುವ ಹಾಗೂ ಘಟನೆಯನ್ನು ರಾಜಕೀಯಗೊಳಿಸುವ ಹೇಳಿಕೆಗಳಂತೆ ಕಾಣುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಹಿಂಸಾಚಾರ ನಿಯಂತ್ರಿಸಲು ಹಾಗೂ ಆತ್ಮಸ್ಥೆರ್ಯ ತುಂಬಲು, ಸಹಜಸ್ಥಿತಿ ಮರು ಸ್ಥಾಪಿಸಲು ನಮ್ಮ ಕಾನೂನು ಜಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಸರಕಾರದ ಹಿರಿಯ ಪ್ರತಿನಿಧಿಗಳು ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಭ್ರಾತೃತ್ವ ಹಾಗೂ ಶಾಂತಿ ಕಾಪಾಡುವಂತೆ ಪ್ರಧಾನಿ ಅವರು ಮನವಿ ಮಾಡಿದ್ದಾರೆ. ಈ ಉದ್ವಿಗ್ನ ಪರಿಸ್ಥಿತಿಯಲ್ಲಿ ಇಂತಹ ಬೇಜವಾಬ್ದಾರಿಯುತ ಹೇಳಿಕೆ ನೀಡಬಾರದು ಎಂದು ನಾವು ಆಗ್ರಹಿಸುತ್ತೇವೆ ಎಂದು ರವೀಶ್ ಕುಮಾರ್ ಟ್ವೀಟ್‌ನಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X