Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಶಾಸಕ ಯತ್ನಾಳ್ ವಿರುದ್ಧ...

ದಾವಣಗೆರೆ: ಶಾಸಕ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ; ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Feb 2020 6:54 PM IST
share
ದಾವಣಗೆರೆ: ಶಾಸಕ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ; ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ದಾವಣಗೆರೆ, ಫೆ.28: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು. 

ಇಲ್ಲಿನ ಎಸಿ ಕಚೇರಿ ಬಳಿ ಜಮಾಯಿಸಿದ ಸದಸ್ಯರು ಯತ್ನಾಳ್ ವಿರುದ್ದ ಘೋಷಣೆಗಳನ್ನು ಕೂಗಿ ನಂತರ, ಸರಕಾರಕ್ಕೆ ಮನವಿ ಸಲ್ಲಿಸಿದರು.  
ಶಾಸಕ ಯತ್ನಾಳ್ ಸ್ವಾತಂತ್ರ್ಯ ಚಳವಳಿಯನ್ನು ಅವಮಾನಿಸುವ ರೀತಿಯಲ್ಲಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರ ಬಗ್ಗೆ ಅತ್ಯಂತ ಆಕ್ಷೇಪಾರ್ಹವಾಗಿ ಮಾತನಾಡಿರುವುದು ಖಂಡನೀಯ. 102 ವರ್ಷಗಳ ಹಿರಿಯ ಜೀವ, ನಾಡಿನ ಸಾಕ್ಷಿಪ್ರಜ್ಞೆ, ಎಲ್ಲ ಜನಪರ ಚಿಂತನೆ-ಚಳವಳಿಗಳ ಒಡನಾಡಿಯಾಗಿರುವ ದೊರೆಸ್ವಾಮಿಯವರು ಕರ್ನಾಟಕಕ್ಕೆ ಮಾತ್ರವಲ್ಲ, ನಮ್ಮ ದೇಶದ ಆಸ್ತಿ. ನಮ್ಮೆಲ್ಲರ ಹೆಮ್ಮೆ. ಅಂತಹವರ ಕುರಿತಾಗಿ, ಯಾವುದೇ ಒಳ್ಳೆಯ ಕೆಲಸ ಮಾಡಿರದ, ಜನರ ಪರವಾದ ಚಿಂತನೆಯಾಗಲಿ, ಕ್ರಿಯೆಯಾಗಲಿ ಇಲ್ಲದ ಒಬ್ಬ ವ್ಯಕ್ತಿ ಈ ರೀತಿಯ ಮಾತುಗಳನ್ನಾಡುವುದು ಅತ್ಯಂತ ಆಕ್ಷೇಪಾರ್ಹವಾದುದು ಎಂದು ಪ್ರತಿಭಟನಾಕಾರರು ಹೇಳಿದರು.  

ಈಗ ಶಾಸಕರಾಗಿರುವ ಯತ್ನಾಳ್ ಚುನಾವಣಾ ಆಯೋಗಕ್ಕೆ ಕೊಟ್ಟ ಮಾಹಿತಿಯ ಪ್ರಕಾರ, ಅವರ ವಿರುದ್ಧ 'ವಂಚನೆ, ಶಾಂತಿಗೆ ಭಂಗ ತಂದಿರುವುದು, ಗಲಭೆಗೆ ಕುಮ್ಮಕ್ಕು' ಸೇರಿದಂತೆ ಸುಮಾರು 23 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇಂತಹ ವ್ಯಕ್ತಿ ದೊರೆಸ್ವಾಮಿಯಂತಹ ಪ್ರಾಮಾಣಿಕ, ಸಜ್ಜನ, ಬದ್ಧತೆಯುಳ್ಳ ಹೋರಾಟಗಾರರನ್ನು 'ಪಾಕಿಸ್ತಾನದ ಏಜೆಂಟ್, ಆತ ಸ್ವಾತಂತ್ರ್ಯ ಹೋರಾಟಗಾರನೇ ಅಲ್ಲ, ಅವನು ಗುಂಡಿಗೆ ಬಲಿಯಾಗುತ್ತಾನೆ' ಇತ್ಯಾದಿಯಾಗಿ ಏಕವಚನದಲ್ಲಿ ಮಾತಾಡಿರುವುದು ಕನ್ನಡಿಗರಾದ ನಮ್ಮೆಲ್ಲರಲ್ಲಿ ಅಪಾರ ಆಕ್ರೋಶ ಹುಟ್ಟಿಸಿದೆ. ಶಾಸಕರ ಮಾತುಗಳು ಸ್ವಾತಂತ್ರ್ಯ ಚಳವಳಿಗೇ ಬಗೆದ ಅಪಚಾರವಾಗಿದೆ. ಆದ್ದರಿಂದ ಸಂವಿಧಾನ ವಿರೋಧಿಯಾದ ಈ ಎಲ್ಲ ಬೆಳವಣಿಗೆಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು. 

ಭಾರತ ಎಂದಿಗೂ ಶಾಂತಿ-ಸಹಬಾಳ್ವೆಯ ನಾಡಾಗಿ ಉಳಿಯಬೇಕು ಮತ್ತು ಹಾಗಾದಾಗ ನಾವು ನಿಜವಾಗಿಯೂ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯ. ಆದ್ದರಿಂದ ಆಕ್ಷೇಪಾರ್ಹವಾಗಿ ಮಾತನಾಡಿದ್ದಕ್ಕೆ ಕಾನೂನು ರೀತಿಯ ಕ್ರಮ ಜರುಗಿಸಬೇಕು. ಯತ್ನಾಳ್ ಮೇಲೆ ಕೊಲೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆಯೂ ಕ್ರಮ ಕೈಗೊಳ್ಳಬೇಕು. ಶಾಸಕ ಸ್ಥಾನದಿಂದ ಪದಚ್ಯುತಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಟಿ.ಅಸ್ಗರ್, ಮಹಮದ್ ಆಲಿ ಸೈಯದ್, ಶ್ರೀನಿವಾಸ್, ನಝೀಮದ್ದೀನ್, ಮುಹಮದ್ ಜಾಫರ್, ಮುಹಮದ್ ಸಲೀಂ, ಇಸ್ಮಾಯಿಲ್ ಜಬೀವುಲ್ಲಾ, ಕರಿಬಸಪ್ಪ, ಜಬೀನಾಖಾನಂ, ಅನ್ವರ್ ಖಾನ್, ಪವಿತ್ರ, ಅಬ್ದುಲ್ ಘನಿ, ಸಾಗರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X