Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾನಪದ ಕಲೆಗಳನ್ನು ಬದುಕಿನಲ್ಲಿ...

ಜಾನಪದ ಕಲೆಗಳನ್ನು ಬದುಕಿನಲ್ಲಿ ಉಳಿಸಿಕೊಳ್ಳುವುದು ಸವಾಲು: ವೈದೇಹಿ

ವಾರ್ತಾಭಾರತಿವಾರ್ತಾಭಾರತಿ28 Feb 2020 9:45 PM IST
share
ಜಾನಪದ ಕಲೆಗಳನ್ನು ಬದುಕಿನಲ್ಲಿ ಉಳಿಸಿಕೊಳ್ಳುವುದು ಸವಾಲು: ವೈದೇಹಿ

ಉಡುಪಿ, ಫೆ.28: ಆಯಾ ಸಮುದಾಯದ ಬದುಕಿನಿಂದ ಚಿಮ್ಮಿ ಬಂದಿರುವ ಜಾನಪದ ಕಲೆಗಳನ್ನು ಮೂಲದಲ್ಲೇ ಉಳಿಸಿಕೊಳ್ಳುವುದು ಇಂದು ಬಹಳ ದೊಡ್ಡ ಸವಾಲಿನ ಕೆಲಸ ಆಗಿದೆ ಎಂದು ಹಿರಿಯ ಸಾಹಿತಿ ವೈದೇಹಿ ಹೇಳಿದ್ದಾರೆ.

ಕರ್ನಾಟಕ ಜಾನಪದ ಅಕಾಡೆಮಿ ಆಶ್ರಯದಲ್ಲಿ ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಶುಕ್ರವಾರ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆದ ಗಿರಿಜನ ಉಪಯೋಜನೆಯಡಿಯಲ್ಲಿ ವಿವಿಧ ಜಾನಪದ ಪ್ರಕಾರಗಳ ತರಬೇತಿ ಪಡೆದ ಪರಿಶಿಷ್ಠ ಪಂಗಡದ ಶಿಬಿರಾರ್ಥಿ ಗಳಿಂದ ಜಾನಪದ ಉತ್ಸವ ಮತ್ತು ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.

ಇಂದು ಜೀವನ ಕ್ರಮ ಬದಲಾಗುತ್ತಿದೆ. ಮೂಲ ಕಲೆ ಉಳಿಯುವ ಯಾವುದೇ ಆಸೆ ಇಲ್ಲವಾಗಿದೆ. ಮುಂದೆ ಈ ಕಲೆಗಳು ಮ್ಯೂಸಿಯಂಗಳಿಗೆ ಸೀಮಿತವಾಗಲಿದೆ. ಕೇವಲ ಬಾಯಿ ಪಾಠಗಳ ಮೂಲಕ ಆ ಕಲೆಗಳನ್ನು ಕಲಿತುಕೊಳ್ಳಬಹುದು. ಆದರೆ ಅದು ಜೀವನದಿಂದ ಚಿಮ್ಮಿ ಬರಲು ಸಾ್ಯ ಇಲ್ಲವಾಗಿದೆ ಎಂದರು.

ಜಾತಿಗಳನ್ನು ದಾಟಿ ಹೋಗಬೇಕಾದರೆ ನಾವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲೆಗಳನ್ನು ಎಲ್ಲರಿಗೂ ಹಂಚಿ ಬಿಡಬೇಕಾಗಿದೆ. ಈ ಮೂಲಕ ನಾವು ಶಿಷ್ಟ ಪರಿಶಿಷ್ಟ ಎಂಬ ಜಾತಿಗಳನ್ನು ದಾಟಿ ಮನುಷ್ಯರಾಗಿ ಕುಣಿಯಬೇಕು. ತಮ್ಮ ಕಲೆಯನ್ನು ಜೋಪಾನವಾಗಿ ಪರಂಪರೆಯಿಂದ ಈವರೆಗೆ ತಂದಿರುವ ಕಲಾವಿದರು ಅದನ್ನು ಉಳಿಸಿಕೊಳ್ಳಬೇಕಾದರೆ ಅವರ ಹಸಿವು ತಣಿಸಬೇಕು. ಅದನ್ನು ರಾಜ್ಯ ಸರಕಾರ ಮಾಡಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಬಿ.ಮಂಜಮ್ಮ ಜೋಗತಿ ಆಶಯ ನುಡಿಗಳನ್ನಾಡಿದರು. ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ. ಎಲ್.ಸಾಮಗ ಶಿಬಿರಾರ್ಥಿಗಳಿಗೆ ್ರಮಾಣ ಪತ್ರ ವಿತರಣೆ ಮಾಡಿದರು.

ಪ್ರಾದೇಶಿಕ ರಂಗಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕ ಪ್ರೊ.ವರದೇಶ್ ಹಿರೇಗಂಗೆ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಯು.ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಘಟಕದ ಕಾರ್ಯ ದರ್ಶಿ ಐ.ಕೆ.ಜಯಚಂದ್ರ, ಅಕಾಡೆಮಿ ರಿಜಿಸ್ಟ್ರಾರ್ ಎನ್.ನಮ್ರತ ಉಪಸ್ಥಿತರಿ ದ್ದರು.

ಈ ಸಂದರ್ಭದಲ್ಲಿ ಶಿಬಿರದ ತರಬೇತುದಾರ ಗಣೇಶ್, ಶಿಬಿರಾರ್ಥಿಗಳಾದ ರಾಮಾಂಜಿ ಉಡುಪಿ, ರಂಜಿತ್ ಬಳ್ಳಾರಿ ಅನಿಸಿಕೆ ವ್ಯಕ್ತಪಡಿಸಿದರು. ಶಿಬಿರದ ಸಂಚಾಲಕ ರವಿರಾಜ್ ಎಚ್.ಪಿ. ಸ್ವಾಗತಿಸಿದರು. ಬಳಿಕ ಶಿಬಿರಾರ್ಥಿಗಳಿಂದ ವಿವಿಧ ಜಾನಪದ ಕಲಾಪ್ರಕಾರಗಳ ಪ್ರದರ್ಶನ ನಡೆಯಿತು.

ಹೆಚ್ಚಿನ ಅನುದಾನ ದೊರೆತರೆ ನೆರವು

ಸರಕಾರದಿಂದ ಹೆಚ್ಚಿನ ಅನುದಾನ ಬಂದರೆ ಜಾನಪದ ಕಲೆಗಳಿಗೆ ಹೆಚ್ಚಿನ ನೆರವು ನೀಡಲಾಗುವುದು. ಈ ಕಲೆ ನಶಿಸಿ ಹೋಗದಂತೆ ತಡೆಯಲು ಅದಕ್ಕೆ ಬೇಕಾದ ವಾದ್ಯ, ಸಿರಿ ಸೇರಿದಂತೆ ಅಗತ್ಯ ಪರಿಕರಗಳ ಖರೀದಿಗೆ ಅನುದಾನ ಒದಗಿಸಲಾಗುವುದು ಎಂದು ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಬಿ.ಮಂಜಮ್ಮ ಜೋಗತಿ ಹೇಳಿದರು.

ಜಾನಪದವೇ ನಮ್ಮ ಸಂಸ್ಕೃತಿಯ ತಾಯಿಬೇರು. ಮೂಲತನವನ್ನು ಕಾಪಾಡಿ ಕೊಂಡು ಜಾನಪದ ಕಲೆಗಳನ್ನು ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ಸರಕಾರ ಈಗಾಗಲೇ ಪ್ಲಾಸ್ಟಿಕ್ ನಿಷೇಧ ಮಾಡಿರುವುದರಿಂದ ಕಲಾವಿದರು ಪೈಬರ್ ಕಲಾ ಪರಿಕರಗಳ ಬದಲು ಚರ್ಮದಿಂದ ತಯಾರಿಸಿದ ಪರಿಕರಗಳನ್ನೇ ಬಳಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X