Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಜ್ಞಾನದ ಬಗ್ಗೆ ಮುಕ್ತ ಮನಸ್ಸು...

ವಿಜ್ಞಾನದ ಬಗ್ಗೆ ಮುಕ್ತ ಮನಸ್ಸು ಹೊಂದಿರಬೇಕು: ಡಾ.ರಾಜನ್

ವಾರ್ತಾಭಾರತಿವಾರ್ತಾಭಾರತಿ28 Feb 2020 10:06 PM IST
share
ವಿಜ್ಞಾನದ ಬಗ್ಗೆ ಮುಕ್ತ ಮನಸ್ಸು ಹೊಂದಿರಬೇಕು: ಡಾ.ರಾಜನ್

ಉಡುಪಿ, ಫೆ. 28: ವಿಜ್ಞಾನದ ಕುರಿತಂತೆ ಮುಕ್ತ ಮನಸ್ಸನ್ನು ಹೊಂದಿದ್ದು, ಜ್ಞಾನ ಎಲ್ಲಿಂದ ಬಂದರೂ ಸ್ವೀಕರಿಸಬೇಕು. ವಿಜ್ಞಾನದ ವಿವಿಧ ಶಾಖೆಗಳ ನಡುವೆ ಗೋಡೆಗಳನ್ನು ಕಟ್ಟಬೇಡಿ ಎಂದು ಇಸ್ರೋದ ಮಾಜಿ ಬಾಹ್ಯಾಕಾಶ ವಿಜ್ಞಾನಿ ಡಾ. ವೈ. ಎಸ್. ರಾಜನ್ ವಿದ್ಯಾರ್ಥಿ ಸಮುದಾಯಕ್ಕೆ ಕಿವಿಮಾತು ಹೇಳಿದ್ದಾರೆ.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ವತಿಯಿಂದ ಮಣಿಪಾಲದ ಹೊಟೇಲ್ ಫಾರ್ಚ್ಯೂನ್ ಇನ್ ವ್ಯಾಲಿವ್ಯೆನ ಚೈತ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವ ಹಿಸಿ ಅವರು ಮಾತನಾಡುತಿದ್ದರು.

ವಿಜ್ಞಾನದ ವಿವಿಧ ಶಾಖೆಗಳಲ್ಲಿ ಸಂಶೋಧನೆಗೆ ಇಂದು ವಿಪುಲ ಅವಕಾಶ ಗಳಿವೆ. ಈ ಸಂಶೋಧನೆಗಳಿಂದ ದೈನಂದಿನ ಬದುಕಿನಲ್ಲಿ ಸಹಾಯವಾಗುವುದ ರೊಂದಿಗೆ ಆರ್ಥಿಕವಾಗಿಯೂ ಪ್ರಯೋಜನಕಾರಿಯಾಗಿರಬೇಕು. ನಮ್ಮ ಹೆಮ್ಮೆಯ ವಿಜ್ಞಾನಿ ಡಾ.ಸಿ.ವಿ.ರಾಮನ್ ಅವರು ಕಂಡುಹಿಡಿದ ಲೇಸರ್‌ನಿಂದ ಇಂದು ಕೈಗಾರಿಕಾ ವಲಯಕ್ಕೆ 20ಸಾವಿರ ಕೋಟಿ ರೂ. ಆದಾಯ ಬರುತ್ತಿದೆ ಎಂದವರು ಹೇಳಿದರು.

ಇಂದಿನ ವಿದ್ಯಾರ್ಥಿಗಳಿಗೆ ಸಂಶೋಧನೆಗಳೊಂದಿಗೆ ವಿಜ್ಞಾನವನ್ನು ಇನ್ನಷ್ಟು ಬೆಳೆಸಲು ಅವಕಾಶಗಳಿವೆ. ರಾಸಾಯನಿಕ ವಸ್ತುಗಳ ಬಳಕೆಯನ್ನು ಕಡಿಮೆಗೊಳಿಸಿ ಬದಲು ಜೈವಿಕ ವಸ್ತುಗಳನ್ನು ಹೆಚ್ಚು ಹೆಚ್ಚು ಬಳಸುವಂತಾಗಬೇಕು ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಹಿರಿಯ ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಅವರು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಎಂದೂ ಕುತೂಹಲವನ್ನು ಕಳೆದುಕೊಳ್ಳಬಾರದು. ಅದರೊಂದಿಗೆ ಪ್ರಶ್ನಿಸುವುದನ್ನು ಸಹ ಅಭ್ಯಾಸ ಮಾಡಬೇಕು. ಇವು ವಿಜ್ಞಾನದಲ್ಲಿ ಅತೀ ಮುಖ್ಯವಾದ ಅಂಶಗಳು ಎಂದರು.

ಮಕ್ಕಳಲ್ಲಿ ಕುತೂಹಲ ಇಲ್ಲದೇ ಹೋದರೆ, ಮುಂದಿನ ಜನಾಂಗದಲ್ಲಿ ಯಾವುದೇ ಹೊಸ ಸಂಶೋಧನೆಗಳು ನಡೆಯಲು ಸಾಧ್ಯವಿಲ್ಲ. ವಿಜ್ಞಾನದಿಂದಾಗಿ ನಮ್ಮ ಬದುಕು ಸುಲಭವಾಗಿದೆ. ನಾವಿಂದು ಕೃತಕ ಬುದ್ದಿಮತ್ತೆಯ ಬಗ್ಗೆ ಮಾತನಾಡುತ್ತೇವೆ. ಆದರೆ ಇದರ ಬದಲು ಮನುಷ್ಯನಲ್ಲಿರುವ ಸಹಜ ಬುದ್ಧಿಮತ್ತೆ (ನ್ಯಾಚುರಲ್ ಇಂಟಲಿಜೆನ್ಸ್)ಯನ್ನು ಪರಿಣಾಮಕಾರಿಯಾಗಿ ಬಳಸುವ ಪ್ರಯತ್ನ ನಡೆಯಬೇಕು ಎಂದು ಅಣ್ಣಾಮಲೈ ಹೇಳಿದರು.

ಇಂದಿನ ಮಕ್ಕಳಿಗೆ ಚಿತ್ತವಿಕ್ಷೇಪಗೊಳಿಸುವ ಸಂಗತಿಗಳು ವಿಪುಲವಾಗಿವೆ. ಇವುಗಳಲ್ಲಿ ಮೊಬೈಲ್ ಹಾಗೂ ಟಿವಿ ಪ್ರಮುಖವಾಗಿವೆ. ವಿದ್ಯಾರ್ಥಿಗಳ ಹೆತ್ತವರು ಹಾಗೂ ಅಧ್ಯಾಪಕರು ಅವರನ್ನು ಇದರಿಂದ ವಿಮುಖಗೊಳಿಸಬೇಕು. ನಾವು ಇದ್ದಂತಹ ವಾತಾವರಣದಲ್ಲಿ ಅವರು ಕಲಿಯುವಂತೆ ಮಾಡಬೇಕು. ಆಗ ಬದುಕಿನಲ್ಲಿ ಅವರು ಕುತೂಹಲವನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಅಣ್ಣಾಮಲೈ ಅಭಿಪ್ರಾಯ ಪಟ್ಟರು.

ಇವುಗಳೊಂದಿಗೆ ಬದುಕಿನಲ್ಲಿ ವೈಫಲ್ಯವನ್ನು ಸಹ ಸಮಚಿತ್ತದಿಂದ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸಾಂಸ್ಕೃತಿಕ ಕ್ಷೇತ್ರದಂಥ ಕೆಲವು ಕ್ಷೇತ್ರಗಳನ್ನು ಹೊರತು ಪಡಿಸಿದರೆ ಉಳಿದಂತೆ ನಾವು ವೈಫಲ್ಯದ ಹೆದರಿಕೆಯನ್ನು ಸದಾ ಹೊಂದಿರುತ್ತೇವೆ. ಇದರಿಂದ ಹೊರಬಂದು ವೈಫಲ್ಯವನ್ನು ಸಹಜವಾಗಿ ಸ್ವೀಕರಿಸಿ, ಮುಂದಿನ ಯಶಸ್ಸಿಗೆ ಮೆಟ್ಟಿಲಾಗಿ ಬಳಸಬೇಕು ಎಂದು ಅವರು ವಿದ್ಯಾರ್ಥಿ ಸಮುದಾಯಕ್ಕೆ ಕಿವಿಮಾತು ಹೇಳಿದರು.

ಕುಲಪತಿ ಡಾ.ಎಚ್.ವಿನೋದ್ ಭಟ್ ಅವರೂ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಮಣಿಪಾಲ ಸ್ಕೂಲ್ ಆಫ್ ಲೈಫ್ ಸಾಯನ್ಸ್‌ನ ನಿರ್ದೇಶಕ ಡಾ.ಕೆ.ಸತ್ಯಮೂರ್ತಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಿಜ್ಞಾನದ ವಿವಿಧ ಸ್ಪರ್ಧೆಗಳ ವಿಜೇತರಿಗೆ, ವಿಜ್ಞಾನದ ಮಾದರಿಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನ, ಸ್ಮರಣಿಕೆ, ಸರ್ಟಿಫಿಕೇಟ್‌ಗಳನ್ನು ವಿತರಿಸಿದರು. ಮಾಹೆ ರಿಜಿಸ್ಟ್ರಾರ್ ಡಾ.ನಾರಾಯಣ್ ಸಭಾಹಿತ್ ಸ್ವಾಗತಿಸಿದರೆ, ಭಾರತಿ ಪ್ರಸಾದ್ ವಂದಿಸಿದರು. ಸುಪ್ರೀತಿ ಘೋಷ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X